AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊತ್ತಲವಾಡಿ’ ಟ್ರೈಲರ್ ಬಿಡುಗಡೆ: ಸಿನಿಮಾ ಬಗ್ಗೆ ಮೂಡಿಸಿದೆ ಭರವಸೆ

Kothalavadi movie: ಯಶ್ ಅವರ ತಾಯಿ ಪುಷ್ಪ ನಿರ್ಮಾಣ ಮಾಡಿ‘ಕೊತ್ತಲವಾಡಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಚೀರಿ ಹೇಳುತ್ತಿದೆ ಟ್ರೈಲರ್. ‘ಕೊತ್ತಲವಾಡಿ’ ಹೆಸರೇ ಸೂಚಿಸುತ್ತಿರುವಂತೆ ಒಂದು ಹಳ್ಳಿಯ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಈಗ ಬಿಡುಗಡೆ ಆಗಿರುವ 2:24 ನಿಮಿಷದ ಟ್ರೈಲರ್ ಸಿನಿಮಾದ ರೀತಿಯೇ ಥ್ರಿಲ್ಲಿಂಗ್ ಆಗಿದೆ.

‘ಕೊತ್ತಲವಾಡಿ’ ಟ್ರೈಲರ್ ಬಿಡುಗಡೆ: ಸಿನಿಮಾ ಬಗ್ಗೆ ಮೂಡಿಸಿದೆ ಭರವಸೆ
Kothalavadi
ಮಂಜುನಾಥ ಸಿ.
|

Updated on:Jul 23, 2025 | 3:57 PM

Share

ಸ್ಟಾರ್ ನಟ ಯಶ್ (Yash) ಅವರ ತಾಯಿ ಪುಷ್ಪ ಅವರು ನಿರ್ಮಾಣ ಮಾಡಿದ್ದಾರೆ ಎಂಬ ಕಾರಣಕ್ಕೆ ಇಷ್ಟು ದಿನ ಗಮನ ಸೆಳೆದಿತ್ತು ‘ಕೊತ್ತಲವಾಡಿ’ ಸಿನಿಮಾ. ಈಗ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯ ಬಗ್ಗೆಯೂ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಚೀರಿ ಹೇಳುತ್ತಿದೆ ಟ್ರೈಲರ್. ‘ಕೊತ್ತಲವಾಡಿ’ ಹೆಸರೇ ಸೂಚಿಸುತ್ತಿರುವಂತೆ ಒಂದು ಹಳ್ಳಿಯ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಈಗ ಬಿಡುಗಡೆ ಆಗಿರುವ 2:24 ನಿಮಿಷದ ಟ್ರೈಲರ್ ಸಿನಿಮಾದ ರೀತಿಯೇ ಥ್ರಿಲ್ಲಿಂಗ್ ಆಗಿದೆ.

ಟ್ರೈಲರ್​ನ ಆರಂಭದಲ್ಲಿ ಹಾಸ್ಯ, ಪ್ರೇಮ, ಬಂಧ, ಅನುಬಂಧಗಳ ಕತೆ ಇದಾಗಿರಬಹುದು ಎಂಬ ಅನುಮಾನ ಮೂಡಿಸುವಂತೆ ಮಾಡುವ ಟ್ರೈಲರ್ ಆ ನಂತರ ಸಿನಿಮಾದ ನಿಜವಾದ ಕತೆ ಅದಲ್ಲ ಎಂದು ಹೇಳುತ್ತದೆ. ಹಳ್ಳಿಯೊಂದರಲ್ಲಿ ಇಬ್ಬರು ಆತ್ಮೀಯರ ಮಧ್ಯೆ ನಡೆಯುವ ಅಧಿಕಾರಕ್ಕಾಗಿ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿರುವ ಸುಳಿವನ್ನು ‘ಕೊತ್ತಲವಾಡಿ’ ಟ್ರೈಲರ್ ನೀಡುತ್ತಿದೆ. ರಾಜಕೀಯ, ಚುನಾವಣೆ, ಪೊಲೀಸರ ಅವಕಾಶವಾದಿತನ, ನಾಯಕನ ಹೋರಾಟ, ಛಲ ಎಲ್ಲ ಅಂಶಗಳನ್ನು ಈಗ ಬಿಡುಗಡೆ ಆಗಿರುವ ಟ್ರೈಲರ್ ಒಳಗೊಂಡಿದೆ.

ಇದನ್ನೂ ಓದಿ:‘ಕೊತ್ತಲವಾಡಿ’ ಹೀರೋ ಪೃಥ್ವಿ ಅಂಬಾರ್ ವರ್ಕೌಟ್ ವಿಡಿಯೋ

ಟ್ರೈಲರ್​​ನಲ್ಲಿ ನಾಯಕ ಪೃಥ್ವಿ ಅಂಬರ್ ಅವರ ಆಕ್ಷನ್ ಗಮನ ಸೆಳೆಯುತ್ತಿದೆ. ಈ ಹಿಂದಿನ ಸಿನಿಮಾಗಳಲ್ಲಿ ಚಾಕಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಪೃಥ್ವಿ ಅಂಬರ್ ಈ ಸಿನಿಮಾನಲ್ಲಿ ಆಕ್ಷನ್ ಹಿರೋ ಆಗಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್​​ನಲ್ಲಿ ಪೃಥ್ವಿ ಅವರಷ್ಟೆ ಗಮನ ಸೆಳೆಯುವುದು ನಟ ಗೋಪಾಲ ದೇಶಪಾಂಡೆ. ಅದ್ಭುತ ನಟರಾದ ಗೋಪಾಲ ದೇಶಪಾಂಡೆ ಅವರಿಗೆ ಕೊತ್ತಲವಾಡಿಯಲ್ಲಿಯೂ ಸವಾಲಿನ ಪಾತ್ರವೇ ದೊರೆತಂತಿದೆ. ರಾಜೇಶ್ ನಟರಂಗ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ಕತೆಯಲ್ಲಿ ಅವರ ಪಾತ್ರಕ್ಕೂ ಪ್ರಧಾನ ಸ್ಥಾನ ಇದ್ದಂತಿದೆ.

‘ಕೊತ್ತಲವಾಡಿ’ ಸಿನಿಮಾವನ್ನು ಯಶ್ ಅವರ ತಾಯಿ ಪುಷ್ಪ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಶ್ರೀರಾಜ್. ಸಿನಿಮಾನಲ್ಲಿ ನಾಯಕಿಯಾಗಿ ಕಾವ್ಯಾ ಶೈವ ನಟಿಸಿದ್ದಾರೆ. ಅವಿನಾಶ್, ಮಾನಸಿ ಸುಧೀರ್, ರಘು ರಾಮನಕೊಪ್ಪ ಇನ್ನಿತರೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ವಿಕಾಸ್ ವಸಿಷ್ಠ, ಸಿನಿಮಾ ವಿತರಣೆ ಮಾಡಲಿರುವುದು ಕೆಆರ್​ಜಿ ಸ್ಟುಡಿಯೋಸ್. ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Wed, 23 July 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ