AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ರಾಮು ಹುಟ್ಟುಹಬ್ಬ; ಕಣ್ಣೀರು ತುಂಬಿಕೊಂಡು ಭಾವುಕ ಪತ್ರ ಬರೆದ ನಟಿ ಮಾಲಾಶ್ರೀ

Koti Ramu: ‘ನೀವು ದೂರವಾದ ಕ್ಷಣದಿಂದ ಈ ಸಾಲುಗಳನ್ನು ಬರೆಯುತ್ತಿರುವ ಈ ಕ್ಷಣದಲ್ಲೂ ಕಣ್ಣಲ್ಲಿ ನೀರು ಹೆಪ್ಪುಗಟ್ಟಿ ಕಣ್ಣೆರಡು ಮಂಜಾಗ್ತಾನೇ ಇವೆ. ನಿಮ್ಮನ್ನು ನಾನು ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪತಿ ಕೋಟಿ ರಾಮುಗೆ ಮಾಲಾಶ್ರೀ ಪತ್ರ ಬರೆದಿದ್ದಾರೆ.

ಕೋಟಿ ರಾಮು ಹುಟ್ಟುಹಬ್ಬ; ಕಣ್ಣೀರು ತುಂಬಿಕೊಂಡು ಭಾವುಕ ಪತ್ರ ಬರೆದ ನಟಿ ಮಾಲಾಶ್ರೀ
ಕೋಟಿ ರಾಮು, ಮಾಲಾಶ್ರೀ ಕುಟುಂಬ
ಮದನ್​ ಕುಮಾರ್​
| Edited By: |

Updated on: Jun 20, 2021 | 4:12 PM

Share

ಕೊರೊನಾ ವೈರಸ್​ನಿಂದಾಗಿ ಸ್ಯಾಂಡಲ್​ವುಡ್​ನ ಜನಪ್ರಿಯ ನಿರ್ಮಾಪಕ ಕೋಟಿ ರಾಮು ಅವರು ನಿಧನರಾಗಿದ್ದು ತುಂಬ ನೋವಿನ ಸಂಗತಿ. ಏ.26ರಂದು ಅವರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಸುದ್ದಿ ಇಡೀ ಸ್ಯಾಂಡಲ್​ವುಡ್​ಗೆ ಆಘಾತ ಉಂಟು ಮಾಡಿತ್ತು. ಅವರ ಪತ್ನಿ ಮಾಲಾಶ್ರೀ ಮತ್ತು ಮಕ್ಕಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಯಿತು. ಇಂದು (ಜೂ.20) ರಾಮು ಜನ್ಮದಿನ. ಆ ಸಲುವಾಗಿ ಪತಿಗೆ ಭಾವುಕವಾಗಿ ಪತ್ರ ಬರೆದಿರುವ ಮಾಲಾಶ್ರೀ ಅವರು, ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

‘ನನ್ನ ಆತ್ಮವೇ, ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ನೀವು ನನಗೆ ದೇವರ ವರವಾಗಿ ಬಂದ್ರಿ. ನೀವು ನನಗೆ ವರಗಳನ್ನು ಕೊಡುವ ದೇವರಾದ್ರಿ. ಈ ದಿನ ನನ್ನ ದೇವರ ಹುಟ್ಟುಹಬ್ಬ. 23 ವರ್ಷಗಳ ಕಾಲ ಈ ನಿಮ್ಮ ಹುಟ್ಟುಹಬ್ಬವನ್ನು ನನ್ನ ಹುಟ್ಟುಹಬ್ಬವಾಗಿ ಆಚರಿಸಿ, ನನ್ನ ಉಸಿರಲ್ಲಿ ಉಸಿರಾಗ್ತಾ ಬಂದ್ರಿ. ನನ್ನ ದಿನ ನೀವಾಗಿದ್ರಿ, ನನ್ನ ನಡೆ ನೀವಾಗಿದ್ರಿ. ನನ್ನ ನುಡಿ, ನಗು, ನೆಮ್ಮದಿ ನೀವಾಗಿದ್ರಿ. ನನ್ನ ಹೆಸರಿಗೆ ಬೆಳಕಾಗಿದ್ರಿ’ ಎಂದು ಪತಿಯನ್ನು ಮಾಲಾಶ್ರೀ ನೆನದಿದ್ದಾರೆ.

‘ದಿನ ರಾತ್ರಿ ನನ್ನ ಆಗುಹೋಗುಗಳನ್ನು ಆಲಿಸಿ, ನನಗೆ ಬುದ್ಧಿ ಹೇಳಿ ಬದುಕಿಗೆ ಬುನಾದಿ ಕಟ್ಟಿಕೊಟ್ಟ ಗುರುಗಳಾಗಿದ್ರಿ. ಮಕ್ಕಳ ಜೀವನವನ್ನು ಹಸನಾಗಿ ರೂಪಿಸಿದ ಪರ್ಫೆಕ್ಟ್​ ತಂದೆ ಆಗಿದ್ರಿ. ನೀವು ದೂರವಾದ ಕ್ಷಣದಿಂದ ಈ ಸಾಲುಗಳನ್ನು ಬರೆಯುತ್ತಿರುವ ಈ ಕ್ಷಣದಲ್ಲೂ ಕಣ್ಣಲ್ಲಿ ನೀರು ಹೆಪ್ಪುಗಟ್ಟಿ ಕಣ್ಣೆರಡು ಮಂಜಾಗ್ತಾನೇ ಇವೆ. ನಿಮ್ಮನ್ನು ನಾನು ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದೇನೆ’ ಎಂದು ಮಾಲಾಶ್ರೀ ಪತ್ರದಲ್ಲಿ ಬರೆದಿದ್ದಾರೆ.

‘ನನಗಾಗಿ ಜನ್ಮ ಪಡೆದು ಬಂದ ನನ್ನ ಹೃದಯ ನೀವು. ನನಗೆ ಏನೇನು ಬೇಕೋ ಅದನ್ನೆಲ್ಲ ಕೊಟ್ಟವರು ನೀವು. ಆ ಇಡೀ ಸ್ವರ್ಗ ನಿಮ್ಮದಾಗಿರಲಿ ಅಂತ ಇವತ್ತು ಇಲ್ಲಿಂದಲೇ ಹಾರೈಕೆ ಮಾಡ್ತೀನಿರೀ.. ಎಂದೆಂದಿಗೂ ನಿಮ್ಮನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ಸದಾ ನಿಮ್ಮನ್ನು ಪ್ರೀತಿಸುತ್ತೇವೆ’ ಎಂದು ಮಾಲಾಶ್ರೀ ಭಾವುಕವಾಗಿ ಪತ್ರವನ್ನು ಮುಗಿಸಿದ್ದಾರೆ.

ಇದನ್ನೂ ಓದಿ:

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ