AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಕಿಚ್ಚನ ಒಂದೇ ಒಂದು ಟ್ವೀಟ್​ನಿಂದ​ ಹೆಚ್ಚಿತು ‘ಕೋಟಿಗೊಬ್ಬ 3’ ಕ್ರೇಜ್​; ಅಂಥ ವಿಶೇಷ ಇದರಲ್ಲೇನಿದೆ?

Kichcha Sudeep: ‘ಕೋಟಿಗೊಬ್ಬ 3’ ತಂಡ ಈವರೆಗೂ ಬಿಡುಗಡೆ ಮಾಡದೇ ಇರುವ ಒಂದು ಹೊಸ ಪೋಸ್ಟರ್​ ಅನ್ನು ಈಗ ಸುದೀಪ್​ ಹಂಚಿಕೊಂಡಿದ್ದಾರೆ. ಬಿಳಿ ಕೂದಲು, ಉದ್ದ ಗಡ್ಡ ಬಿಟ್ಟುಕೊಂಡು ವೃದ್ಧನ ಗೆಟಪ್​ನಲ್ಲಿ ಕಿಚ್ಚ​ ಕಾಣಿಸಿಕೊಂಡಿದ್ದಾರೆ.

Kotigobba 3: ಕಿಚ್ಚನ ಒಂದೇ ಒಂದು ಟ್ವೀಟ್​ನಿಂದ​ ಹೆಚ್ಚಿತು ‘ಕೋಟಿಗೊಬ್ಬ 3’ ಕ್ರೇಜ್​; ಅಂಥ ವಿಶೇಷ ಇದರಲ್ಲೇನಿದೆ?
‘ಕೋಟಿಗೊಬ್ಬ 3’ ಚಿತ್ರದ ಹೊಸ ಪೋಸ್ಟರ್​ ಹಂಚಿಕೊಂಡ ಸುದೀಪ್​
TV9 Web
| Updated By: ಮದನ್​ ಕುಮಾರ್​|

Updated on: Oct 15, 2021 | 9:03 AM

Share

ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರಕ್ಕೆ ಎದುರಾಗಿದ್ದ ಎಲ್ಲ ಅಡ್ಡಿ ಆತಂಕಗಳು ಈಗ ನಿವಾರಣೆ ಆಗಿವೆ. ಶುಕ್ರವಾರ (ಅ.15) ಮುಂಜಾನೆಯೇ ಸಿನಿಮಾ ಪ್ರದರ್ಶನ ಆರಂಭಗೊಂಡಿದೆ. ಫಸ್ಟ್​ ಡೇ ಫಸ್ಟ್​ ಶೋಗಾಗಿ ಕಾಯುತ್ತಿದ್ದ ಅಭಿಮಾನಿಗಳ ಸಂಭ್ರಮ ಕಂಡು ಸುದೀಪ್​ ಫಿದಾ ಆಗಿದ್ದಾರೆ. ಥಿಯೇಟರ್​ಗಳ ಮುಂಭಾಗದಲ್ಲಿ ನಿರ್ಮಾಣ ಆಗಿರುವ ಹಬ್ಬದ ವಾತಾವರಣದಿಂದ ಕಿಚ್ಚನ ಮನಸ್ಸು ತುಂಬಿಬಂದಿದೆ. ಬೆಳ್ಳಂಬೆಳಿಗ್ಗೆಯೇ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಒಂದು ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಈ ಸಿನಿಮಾದ ಮೇಲಿನ ಕ್ರೇಜ್​ ಡಬಲ್​ ಆಗುವಂತೆ ಮಾಡಿದ್ದಾರೆ.

‘ಕೋಟಿಗೊಬ್ಬ 3’ ಟ್ರೇಲರ್​ ನೋಡಿದ ಅಭಿಮಾನಿಗಳಿಗೆ ಸುದೀಪ್​ ಅವರ ಹಲವು ಗೆಟಪ್​ಗಳು ಕಾಣಿಸಿದ್ದವು. ಆದರೆ ಈವರೆಗೂ ಚಿತ್ರತಂಡ ಬಿಡುಗಡೆ ಮಾಡದೇ ಇರುವ ಒಂದು ಹೊಸ ಪೋಸ್ಟರ್​ ಅನ್ನು ಈಗ ಸುದೀಪ್​ ಹಂಚಿಕೊಂಡಿದ್ದಾರೆ. ಇದರಲ್ಲಿ ಬಿಳಿ ಕೂದಲು, ಉದ್ದ ಗಡ್ಡ ಬಿಟ್ಟುಕೊಂಡು ವೃದ್ಧನ ಗೆಟಪ್​ನಲ್ಲಿ ಕಿಚ್ಚ​ ಕಾಣಿಸಿಕೊಂಡಿದ್ದಾರೆ. ಅದನ್ನು ನೋಡಿದ ಫ್ಯಾನ್ಸ್​ಗೆ ‘ಕೋಟಿಗೊಬ್ಬ 3’ ಬಗ್ಗೆ ಇದ್ದ ಕ್ರೇಜ್​ ಇನ್ನಷ್ಟು ಹೆಚ್ಚಾಗಿದೆ.

‘ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ 3 ಪ್ರದರ್ಶನ ಆರಂಭ ಆಗಿದೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಮುಂಜಾನೆಯ ಶೋಗಳ ಸಂಭ್ರಮದ ವಿಡಿಯೋಗಳನ್ನು ಅಪ್​ಲೋಡ್​ ಮಾಡಲಾಗುತ್ತಿದೆ. ಇಂಥ ಎಗ್ಸೈಟ್​ಮೆಂಟ್​​ ನೋಡಲು ಖುಷಿ ಆಗುತ್ತಿದೆ. ನೀವೆಲ್ಲರೂ ನಮಗೆ ನೀಡಿದ ಬೆಂಬಲಕ್ಕೆ ಬೆಲೆ ಕಟ್ಟಲಾಗದು’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಥಿಯೇಟರ್​ಗಳ ಎದುರು ಅಭಿಮಾನಿಗಳು ಸುದೀಪ್​ಗೆ ಜೈಕಾರ ಹಾಕುತ್ತಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಚಿತ್ರಮಂದಿರದ ಒಳಗೆ ಸಖತ್​ ಆಗಿ ಡ್ಯಾನ್ಸ್​ ಮಾಡುತ್ತ, ಕೋಟಿಗೊಬ್ಬನಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಗುತ್ತಿದೆ. ಈ ಚಿತ್ರಕ್ಕೆ ಶಿವ ಕಾರ್ತಿಕ್​ ನಿರ್ದೇಶನ ಮಾಡಿದ್ದು, ಸೂರಪ್ಪ ಬಾಬು ನಿರ್ಮಾಣ ಮಾಡಿದ್ದಾರೆ.

ಕೋಟಿಗೊಬ್ಬ ಗ್ರ್ಯಾಂಡ್​ ಎಂಟ್ರಿ ನೀಡಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ಮುಂಜಾನೆ 7 ಗಂಟೆಗೆ ಮೊದಲ ಪ್ರದರ್ಶನ ಶುರು ಆಗಿದೆ. ಚಿತ್ರಮಂದಿರಗಳ ಮುಂದೆ ಜಮಾಯಿಸಿರುವ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಿಚ್ಚ ಸುದೀಪ್​ಗೆ ಜೈಕಾರ ಹಾಕಿ ಈ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಗಾಂಧಿನಗರದ ಭೂಮಿಕಾ ಥಿಯೇಟರ್​, ಎಸ್​.ಪಿ. ರಸ್ತೆಯಲ್ಲಿರುವ ಶಾರದಾ ಟಾಕೀಸ್​ ಸೇರಿದಂತೆ ಹಲವು ಕಡೆಗಳಲ್ಲಿ ಫ್ಯಾನ್ಸ್​ ಜಮಾಯಿಸಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತಿದೆ.

ಇದನ್ನೂ ಓದಿ:

‘ಕೋಟಿಗೊಬ್ಬ’ನಿಗೆ ಅದ್ದೂರಿ ಸ್ವಾಗತ; ದಸರಾ ಹಬ್ಬದ ಸಡಗರ ಹೆಚ್ಚಿಸಿದ ಸುದೀಪ್​ ಸಿನಿಮಾ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ