AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ: ಕೋಟಿಗೊಬ್ಬ 3, ಭಜರಂಗಿ 2, ಸಲಗ ಸಿನಿಮಾಗಳ ಭವಿಷ್ಯವೇನು?

ಹೌಸ್​ಫುಲ್ ಪ್ರದರ್ಶನದ ಅವಕಾಶದೊಂದಿಗೆ ಸ್ಟಾರ್​ ಸಿನಿಮಾಗಳು ರಿಲೀಸ್​ ಆದರೆ ಚಿತ್ರೋದ್ಯಮದ ವಹಿವಾಟಿನಲ್ಲಿ ಚೇತರಿಕೆ ಆಗಲಿದೆ. ಚಿತ್ರಮಂದಿರಗಳನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ.

ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ: ಕೋಟಿಗೊಬ್ಬ 3, ಭಜರಂಗಿ 2, ಸಲಗ ಸಿನಿಮಾಗಳ ಭವಿಷ್ಯವೇನು?
ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ
TV9 Web
| Edited By: |

Updated on: Sep 21, 2021 | 11:51 AM

Share

ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಆದರೆ ಚಿತ್ರೋದ್ಯಮ ಮಾತ್ರ ಸಂಕಷ್ಟದಲ್ಲೇ ಇದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸುವಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಆರೋಗ್ಯ ಸಚಿವ ಸುಧಾಕರ್​ ಜೊತೆ ಕೆಲವು ನಿರ್ಮಾಪಕರು ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ಶೇ.100ರಷ್ಟು ಆಸನ ಭರ್ತಿಗೆ ಸರ್ಕಾರದಿಂದ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ.

ಸುದೀಪ್​ ನಟನೆಯ ‘ಕೋಟಿಗೊಬ್ಬ 3’, ದುನಿಯಾ ವಿಜಯ್​ ನಟನೆಯ ‘ಸಲಗ’, ಹಾಗೂ ಶಿವರಾಜ್​ಕುಮಾರ್​ ಅಭಿನಯದ ‘ಭಜರಂಗಿ 2’ ಸಿನಿಮಾಗಳು ಸದ್ಯ ಬಿಡುಗಡೆಗಾಗಿ ಕಾದಿವೆ. ಸರ್ಕಾರದಿಂದ ಶೇ.100ರಷ್ಟು ಆಕ್ಯುಪೆನ್ಸಿಗೆ ಅವಕಾಶ ಸಿಕ್ಕರೆ ಈ ಸಿನಿಮಾಗಳು ಸರದಿ ಪ್ರಕಾರ ತೆರೆಕಾಣಲಿವೆ. ಈ ಸಂಬಂಧ ‘ಭಜರಂಗಿ 2’ ಚಿತ್ರದ ನಿರ್ಮಾಪಕ ಜಯಣ್ಣ, ಸಲಗ ಸಿನಿಮಾ ನಿರ್ಮಾಪಕ ಕೆ.ಪಿ. ಶ್ರೀಕಾಂತ್​, ಕೋಟಿಗೊಬ್ಬ 3 ಚಿತ್ರಕ್ಕೆ ಬಂಡವಾಳ ಹೂಡಿರುವ ಸೂರಪ್ಪ ಬಾಬು ಸೇರಿದಂತೆ ಹಲವರ ಜೊತೆ ಸಚಿವ ಸುಧಾಕರ್​ ಸಭೆ ನಡೆಸಿದ್ದಾರೆ.

ಎರಡು ವಾರದ ಅಂತರದಲ್ಲಿ ಒಂದೊಂದು ಸ್ಟಾರ್​ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ಸಿಕ್ಕರೆ ಮೊದಲು ‘ಸಲಗ’ ಚಿತ್ರ ಬಿಡುಗಡೆ ಆಗಲಿದೆ. ಅ.1ರಂದು ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಬಳಿಕ ಅ.14ರಂದು ‘ಕೋಟಿಗೊಬ್ಬ 3’ ಹಾಗೂ ಅ.29ಕ್ಕೆ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗುವ ಸಾಧ್ಯತೆ ಇದೆ.

ಸದ್ಯ ಕೇವಲ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇರುವುದರಿಂದ ಕೆಲವು ಸಣ್ಣ ಬಜೆಟ್​ನ ಸಿನಿಮಾಗಳು ತೆರೆಕಾಣುತ್ತಿವೆ. ದೊಡ್ಡ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿಲ್ಲ. ಪರಭಾಷೆಯ ಕೆಲವು ಬಿಗ್​ ಬಜೆಟ್​ ಚಿತ್ರಗಳು ತೆರೆಕಂಡು ಕೈ ಸುಟ್ಟುಕೊಂಡಿವೆ. ಹೌಸ್​ಫುಲ್​ ಪ್ರದರ್ಶನದ ಅವಕಾಶದೊಂದಿಗೆ ಸ್ಟಾರ್​ ಸಿನಿಮಾಗಳು ರಿಲೀಸ್​ ಆದರೆ ಚಿತ್ರೋದ್ಯಮದ ವಹಿವಾಟಿನಲ್ಲಿ ಚೇತರಿಕೆ ಆಗಲಿದೆ. ಚಿತ್ರಮಂದಿರಗಳನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ. ಆದರೆ ಕೊರೊನಾ ಕಾರಣದಿಂದ ಚಿತ್ರಮಂದಿಗಳು ನಷ್ಟ ಅನುಭವಿಸುತ್ತಿರುವುದರಿಂದ ಹಲವರ ಹೊಟ್ಟೆಪಾಡು ಕಷ್ಟವಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಕ್ಕು, ಸ್ಟಾರ್​ ಸಿನಿಮಾಗಳು ಬಿಡುಗಡೆಯಾದರೆ ಪರಿಸ್ಥಿತಿ ಸುಧಾರಿಸಲಿದೆ.

ಇದನ್ನೂ ಓದಿ:

ಒಂದೇ ಒಂದು ಗುಡ್​ ನ್ಯೂಸ್​ಗಾಗಿ ಕಾಯುತ್ತಿದೆ ಚಿತ್ರರಂಗ; ಮತ್ತೆ ರಂಗೇರಲಿದೆ ಗಾಂಧಿನಗರ

Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ

Follow Us
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು