AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ: ಕೋಟಿಗೊಬ್ಬ 3, ಭಜರಂಗಿ 2, ಸಲಗ ಸಿನಿಮಾಗಳ ಭವಿಷ್ಯವೇನು?

ಹೌಸ್​ಫುಲ್ ಪ್ರದರ್ಶನದ ಅವಕಾಶದೊಂದಿಗೆ ಸ್ಟಾರ್​ ಸಿನಿಮಾಗಳು ರಿಲೀಸ್​ ಆದರೆ ಚಿತ್ರೋದ್ಯಮದ ವಹಿವಾಟಿನಲ್ಲಿ ಚೇತರಿಕೆ ಆಗಲಿದೆ. ಚಿತ್ರಮಂದಿರಗಳನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ.

ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ: ಕೋಟಿಗೊಬ್ಬ 3, ಭಜರಂಗಿ 2, ಸಲಗ ಸಿನಿಮಾಗಳ ಭವಿಷ್ಯವೇನು?
ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ
TV9 Web
| Edited By: |

Updated on: Sep 21, 2021 | 11:51 AM

Share

ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಆದರೆ ಚಿತ್ರೋದ್ಯಮ ಮಾತ್ರ ಸಂಕಷ್ಟದಲ್ಲೇ ಇದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸುವಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಆರೋಗ್ಯ ಸಚಿವ ಸುಧಾಕರ್​ ಜೊತೆ ಕೆಲವು ನಿರ್ಮಾಪಕರು ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ಶೇ.100ರಷ್ಟು ಆಸನ ಭರ್ತಿಗೆ ಸರ್ಕಾರದಿಂದ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ.

ಸುದೀಪ್​ ನಟನೆಯ ‘ಕೋಟಿಗೊಬ್ಬ 3’, ದುನಿಯಾ ವಿಜಯ್​ ನಟನೆಯ ‘ಸಲಗ’, ಹಾಗೂ ಶಿವರಾಜ್​ಕುಮಾರ್​ ಅಭಿನಯದ ‘ಭಜರಂಗಿ 2’ ಸಿನಿಮಾಗಳು ಸದ್ಯ ಬಿಡುಗಡೆಗಾಗಿ ಕಾದಿವೆ. ಸರ್ಕಾರದಿಂದ ಶೇ.100ರಷ್ಟು ಆಕ್ಯುಪೆನ್ಸಿಗೆ ಅವಕಾಶ ಸಿಕ್ಕರೆ ಈ ಸಿನಿಮಾಗಳು ಸರದಿ ಪ್ರಕಾರ ತೆರೆಕಾಣಲಿವೆ. ಈ ಸಂಬಂಧ ‘ಭಜರಂಗಿ 2’ ಚಿತ್ರದ ನಿರ್ಮಾಪಕ ಜಯಣ್ಣ, ಸಲಗ ಸಿನಿಮಾ ನಿರ್ಮಾಪಕ ಕೆ.ಪಿ. ಶ್ರೀಕಾಂತ್​, ಕೋಟಿಗೊಬ್ಬ 3 ಚಿತ್ರಕ್ಕೆ ಬಂಡವಾಳ ಹೂಡಿರುವ ಸೂರಪ್ಪ ಬಾಬು ಸೇರಿದಂತೆ ಹಲವರ ಜೊತೆ ಸಚಿವ ಸುಧಾಕರ್​ ಸಭೆ ನಡೆಸಿದ್ದಾರೆ.

ಎರಡು ವಾರದ ಅಂತರದಲ್ಲಿ ಒಂದೊಂದು ಸ್ಟಾರ್​ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ಸಿಕ್ಕರೆ ಮೊದಲು ‘ಸಲಗ’ ಚಿತ್ರ ಬಿಡುಗಡೆ ಆಗಲಿದೆ. ಅ.1ರಂದು ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಬಳಿಕ ಅ.14ರಂದು ‘ಕೋಟಿಗೊಬ್ಬ 3’ ಹಾಗೂ ಅ.29ಕ್ಕೆ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗುವ ಸಾಧ್ಯತೆ ಇದೆ.

ಸದ್ಯ ಕೇವಲ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇರುವುದರಿಂದ ಕೆಲವು ಸಣ್ಣ ಬಜೆಟ್​ನ ಸಿನಿಮಾಗಳು ತೆರೆಕಾಣುತ್ತಿವೆ. ದೊಡ್ಡ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿಲ್ಲ. ಪರಭಾಷೆಯ ಕೆಲವು ಬಿಗ್​ ಬಜೆಟ್​ ಚಿತ್ರಗಳು ತೆರೆಕಂಡು ಕೈ ಸುಟ್ಟುಕೊಂಡಿವೆ. ಹೌಸ್​ಫುಲ್​ ಪ್ರದರ್ಶನದ ಅವಕಾಶದೊಂದಿಗೆ ಸ್ಟಾರ್​ ಸಿನಿಮಾಗಳು ರಿಲೀಸ್​ ಆದರೆ ಚಿತ್ರೋದ್ಯಮದ ವಹಿವಾಟಿನಲ್ಲಿ ಚೇತರಿಕೆ ಆಗಲಿದೆ. ಚಿತ್ರಮಂದಿರಗಳನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ. ಆದರೆ ಕೊರೊನಾ ಕಾರಣದಿಂದ ಚಿತ್ರಮಂದಿಗಳು ನಷ್ಟ ಅನುಭವಿಸುತ್ತಿರುವುದರಿಂದ ಹಲವರ ಹೊಟ್ಟೆಪಾಡು ಕಷ್ಟವಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಕ್ಕು, ಸ್ಟಾರ್​ ಸಿನಿಮಾಗಳು ಬಿಡುಗಡೆಯಾದರೆ ಪರಿಸ್ಥಿತಿ ಸುಧಾರಿಸಲಿದೆ.

ಇದನ್ನೂ ಓದಿ:

ಒಂದೇ ಒಂದು ಗುಡ್​ ನ್ಯೂಸ್​ಗಾಗಿ ಕಾಯುತ್ತಿದೆ ಚಿತ್ರರಂಗ; ಮತ್ತೆ ರಂಗೇರಲಿದೆ ಗಾಂಧಿನಗರ

Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!