Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?

Kotigobba 3: ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರದ ಬಾಕ್ಸಾಫೀಸ್ ಲೆಕ್ಕ ಬಹಿರಂಗಗೊಂಡಿದೆ. ಒಂದು ದಿನ ತಡವಾಗಿ ಚಿತ್ರ ಬಿಡುಗಡೆಯಾದರೂ ಚಿತ್ರ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ಇದೀಗ ತೆಲುಗಿನಲ್ಲೂ ‘ಕೋಟಿಗೊಬ್ಬ 3’ ಬಿಡುಗಡೆಯಾಗಲಿದೆ.

Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್
Follow us
| Updated By: shivaprasad.hs

Updated on: Oct 20, 2021 | 12:13 PM

ಕೆಲವು ವಿಘ್ನಗಳ ನಂತರ ‘ಕೋಟಿಗೊಬ್ಬ 3’ ಘೋಷಿಸಿದ ದಿನದಂದು ಬಿಡುಗಡೆಯಾಗಿರಲಿಲ್ಲ. ಆದರೆ ನಂತರ ಬಿಡುಗಡೆಯಾಗಿದ್ದ ಚಿತ್ರ ಬಾಕ್ಸಾಫೀಸ್​ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರೂ, ಅಭಿಮಾನಿಗಳು ಚಿತ್ರವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದು ಚಿತ್ರದ ಕಲೆಕ್ಷನ್​ಗೆ ಬಹುದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಇದೀಗ ‘ಕೋಟಿಗೊಬ್ಬ 3’ ಚಿತ್ರದ ಬಾಕ್ಸಾಫೀಸ್ ಗಳಿಕೆಯ ಲೆಕ್ಕಾಚಾರ ಹೊರಬಿದ್ದಿದೆ. ನಟ ಕಿಚ್ಚ ಸುದೀಪ್ ಸ್ವತಃ ಟ್ವಿಟರ್​ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಆ ಪ್ರಕಾರ ಚಿತ್ರವು ಕೇವಲ ನಾಲ್ಕು ದಿನದಲ್ಲಿ ₹ 40.5 ಕೋಟಿಗೂ ಅಧಿಕ ಹಣವನ್ನು ಬಾಚಿಕೊಂಡಿದೆ.

ವೀಕೆಂಡ್ ಹಾಗೂ ಸಾಲು ಸಾಲು ರಜೆಗಳಿದ್ದ ಪರಿಣಾಮ ‘ಕೋಟಿಗೊಬ್ಬ 3’ ಚಿತ್ರದ ಕಲೆಕ್ಷನ್ ಮತ್ತಷ್ಟು ಏರಿಕೆಯಾಗಿದೆ. ಈ ವಾರ ಕೂಡ ಚಿತ್ರ ಉತ್ತಮವಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಇನ್ನಷ್ಟು ಗಳಿಸೋದು ಖಂಡಿತಾ ಎನ್ನುತ್ತಿದ್ದಾರೆ ಬಾಕ್ಸಾಫೀಸ್ ಪಂಡಿತರು. ಚಿತ್ರದ ಯಶಸ್ಸು ಕಿಚ್ಚನ ಅಭಿಮಾನಿಗಳಿಗೆ ಅತೀವ ಸಂತಸ ಉಂಟುಮಾಡಿದ್ದು, ಎರಡು ವರ್ಷದ ನಂತರ ನೆಚ್ಚಿನ ನಟನನ್ನು ತೆರೆಯ ಮೇಲೆ ನೋಡುತ್ತಾ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ. ‘ಕೋಟಿಗೊಬ್ಬ 3’ ಮೊದಲ ದಿನವೇ ಅಂದಾಜು ₹ 12 ಕೋಟಿಯಷ್ಟು ಗಳಿಸಿತ್ತು ಎಂದು ವರದಿಗಳು ಹರಿದಾಡಿದ್ದವು. ಪ್ರಸ್ತುತ ಚಿತ್ರತಂಡದಿಂದ ಅಧಿಕೃತ ಲೆಕ್ಕ ಬಿಡುಗಡೆಯಾಗಿದ್ದು, 4 ದಿನಕ್ಕೆ ₹ 40.5 ಕೋಟಿ ಗಳಿಸುವುದರೊಂದಿಗೆ ಯಶಸ್ಸು ಕಂಡಿದೆ.

ಚಿತ್ರದ ಕಲೆಕ್ಷನ್ ಕುರಿತು ಕಿಚ್ಚ ಸುದೀಪ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಬಿಡುಗಡೆಯಾಯ್ತು ‘ಕೋಟಿಗೊಬ್ಬ 3’ ತೆಲುಗು ಟ್ರೈಲರ್: ‘ಕೋಟಿಗೊಬ್ಬ 3’ ಚಿತ್ರವು ತೆಲುಗಿನಲ್ಲೂ ತೆರೆಕಾಣುತ್ತಿದೆ. ‘ಕೆ3 ಕೋಟಿಕೊಕ್ಕಡು’ ಹೆಸರಿನಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಸುದೀಪ್​ಗೆ ತೆಲುಗಿನಲ್ಲೂ ಅಪಾರ ಅಭಿಮಾನಿಗಳಿರುವ ಕಾರಣ, ಚಿತ್ರ ಅಲ್ಲೂ ಯಶಸ್ವಿಯಾಗುವುದನ್ನು ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಟ್ರೈಲರ್ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ.

‘ಕೆ3 ಕೋಟಿಕೊಕ್ಕಡು’ ಟ್ರೈಲರ್ ಇಲ್ಲಿದೆ:

‘ಕೋಟಿಗೊಬ್ಬ 3’ ಚಿತ್ರವನ್ನು ಶಿವ ಕಾರ್ತಿಕ್ ನಿರ್ದೇಶಿಸಿದ್ದು, ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಸುದೀಪ್ ಅವರೊಂದಿಗೆ ಮಡೋನ್ನಾ ಸೆಬಾಸ್ಟಿಯನ್, ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿಶಂಕರ್ ಮೊದಲಾದವರು ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

ವಾಲ್ಮೀಕಿ ಜಯಂತಿಯ ಶುಭಾಶಯ ಕೋರಿದ ಕಿಚ್ಚ:

ಇದನ್ನೂ ಓದಿ:

ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ