AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?

Kotigobba 3: ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರದ ಬಾಕ್ಸಾಫೀಸ್ ಲೆಕ್ಕ ಬಹಿರಂಗಗೊಂಡಿದೆ. ಒಂದು ದಿನ ತಡವಾಗಿ ಚಿತ್ರ ಬಿಡುಗಡೆಯಾದರೂ ಚಿತ್ರ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ಇದೀಗ ತೆಲುಗಿನಲ್ಲೂ ‘ಕೋಟಿಗೊಬ್ಬ 3’ ಬಿಡುಗಡೆಯಾಗಲಿದೆ.

Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್
TV9 Web
| Edited By: |

Updated on: Oct 20, 2021 | 12:13 PM

Share

ಕೆಲವು ವಿಘ್ನಗಳ ನಂತರ ‘ಕೋಟಿಗೊಬ್ಬ 3’ ಘೋಷಿಸಿದ ದಿನದಂದು ಬಿಡುಗಡೆಯಾಗಿರಲಿಲ್ಲ. ಆದರೆ ನಂತರ ಬಿಡುಗಡೆಯಾಗಿದ್ದ ಚಿತ್ರ ಬಾಕ್ಸಾಫೀಸ್​ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರೂ, ಅಭಿಮಾನಿಗಳು ಚಿತ್ರವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದು ಚಿತ್ರದ ಕಲೆಕ್ಷನ್​ಗೆ ಬಹುದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಇದೀಗ ‘ಕೋಟಿಗೊಬ್ಬ 3’ ಚಿತ್ರದ ಬಾಕ್ಸಾಫೀಸ್ ಗಳಿಕೆಯ ಲೆಕ್ಕಾಚಾರ ಹೊರಬಿದ್ದಿದೆ. ನಟ ಕಿಚ್ಚ ಸುದೀಪ್ ಸ್ವತಃ ಟ್ವಿಟರ್​ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಆ ಪ್ರಕಾರ ಚಿತ್ರವು ಕೇವಲ ನಾಲ್ಕು ದಿನದಲ್ಲಿ ₹ 40.5 ಕೋಟಿಗೂ ಅಧಿಕ ಹಣವನ್ನು ಬಾಚಿಕೊಂಡಿದೆ.

ವೀಕೆಂಡ್ ಹಾಗೂ ಸಾಲು ಸಾಲು ರಜೆಗಳಿದ್ದ ಪರಿಣಾಮ ‘ಕೋಟಿಗೊಬ್ಬ 3’ ಚಿತ್ರದ ಕಲೆಕ್ಷನ್ ಮತ್ತಷ್ಟು ಏರಿಕೆಯಾಗಿದೆ. ಈ ವಾರ ಕೂಡ ಚಿತ್ರ ಉತ್ತಮವಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಇನ್ನಷ್ಟು ಗಳಿಸೋದು ಖಂಡಿತಾ ಎನ್ನುತ್ತಿದ್ದಾರೆ ಬಾಕ್ಸಾಫೀಸ್ ಪಂಡಿತರು. ಚಿತ್ರದ ಯಶಸ್ಸು ಕಿಚ್ಚನ ಅಭಿಮಾನಿಗಳಿಗೆ ಅತೀವ ಸಂತಸ ಉಂಟುಮಾಡಿದ್ದು, ಎರಡು ವರ್ಷದ ನಂತರ ನೆಚ್ಚಿನ ನಟನನ್ನು ತೆರೆಯ ಮೇಲೆ ನೋಡುತ್ತಾ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ. ‘ಕೋಟಿಗೊಬ್ಬ 3’ ಮೊದಲ ದಿನವೇ ಅಂದಾಜು ₹ 12 ಕೋಟಿಯಷ್ಟು ಗಳಿಸಿತ್ತು ಎಂದು ವರದಿಗಳು ಹರಿದಾಡಿದ್ದವು. ಪ್ರಸ್ತುತ ಚಿತ್ರತಂಡದಿಂದ ಅಧಿಕೃತ ಲೆಕ್ಕ ಬಿಡುಗಡೆಯಾಗಿದ್ದು, 4 ದಿನಕ್ಕೆ ₹ 40.5 ಕೋಟಿ ಗಳಿಸುವುದರೊಂದಿಗೆ ಯಶಸ್ಸು ಕಂಡಿದೆ.

ಚಿತ್ರದ ಕಲೆಕ್ಷನ್ ಕುರಿತು ಕಿಚ್ಚ ಸುದೀಪ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಬಿಡುಗಡೆಯಾಯ್ತು ‘ಕೋಟಿಗೊಬ್ಬ 3’ ತೆಲುಗು ಟ್ರೈಲರ್: ‘ಕೋಟಿಗೊಬ್ಬ 3’ ಚಿತ್ರವು ತೆಲುಗಿನಲ್ಲೂ ತೆರೆಕಾಣುತ್ತಿದೆ. ‘ಕೆ3 ಕೋಟಿಕೊಕ್ಕಡು’ ಹೆಸರಿನಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಸುದೀಪ್​ಗೆ ತೆಲುಗಿನಲ್ಲೂ ಅಪಾರ ಅಭಿಮಾನಿಗಳಿರುವ ಕಾರಣ, ಚಿತ್ರ ಅಲ್ಲೂ ಯಶಸ್ವಿಯಾಗುವುದನ್ನು ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಟ್ರೈಲರ್ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ.

‘ಕೆ3 ಕೋಟಿಕೊಕ್ಕಡು’ ಟ್ರೈಲರ್ ಇಲ್ಲಿದೆ:

‘ಕೋಟಿಗೊಬ್ಬ 3’ ಚಿತ್ರವನ್ನು ಶಿವ ಕಾರ್ತಿಕ್ ನಿರ್ದೇಶಿಸಿದ್ದು, ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಸುದೀಪ್ ಅವರೊಂದಿಗೆ ಮಡೋನ್ನಾ ಸೆಬಾಸ್ಟಿಯನ್, ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿಶಂಕರ್ ಮೊದಲಾದವರು ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

ವಾಲ್ಮೀಕಿ ಜಯಂತಿಯ ಶುಭಾಶಯ ಕೋರಿದ ಕಿಚ್ಚ:

ಇದನ್ನೂ ಓದಿ:

ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು