AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ

Kichcha Sudeep: ನಟ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ಸ್ಪಷ್ಟನೆ ನೀಡಿದ್ದಾರೆ.

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್
TV9 Web
| Edited By: |

Updated on:Oct 14, 2021 | 12:21 PM

Share

‘ಕೋಟಿಗೊಬ್ಬ 3’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಚಿತ್ರ ಬಿಡುಗಡೆಯಾಗುತ್ತಿಲ್ಲ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ವಿಡಿಯೋ ಮೂಲಕ ಮನವಿ ಮಾಡಿದ್ದು, ನಾಳೆಯಿಂದ(ಶುಕ್ರವಾರ) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ವಿತರಕರ ಷಡ್ಯಂತ್ರದಿಂದ ಇಂದು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿಡಿಯೋ ಮುಖಾಂತರ ಮಾಹಿತಿ ನೀಡಿರುವ ಅವರು, ‘‘ಇಂದು ಕೋಟಿಗೊಬ್ಬ3 ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನನ್ನನ್ನ ಕ್ಷಮಿಸಿ. ಕೆಲವರ ಷಡ್ಯಂತರದಿಂದ ಕೋಟಿಗೊಬ್ಬ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು. ನಾಳೆ ಬೆಳಗ್ಗೆ (ಅಕ್ಟೋಬರ್ 15) ಆರು ಗಂಟೆಯಿಂದ ಶೋ ಆರಂಭವಾಗಲಿವೆ’’ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ಸುದೀಪ್ ಅವರಲ್ಲೂ ಕ್ಷಮೆ ಕೋರಿರುವ ಸೂರಪ್ಪ ಬಾಬು, ಅಭಿಮಾನಿಗಳಿಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಬೇಕೆಂದು ಕೋರಿದ್ದಾರೆ.

ಸುದೀಪ್ ಇಂದು ಟ್ವೀಟ್ ಮಾಡಿ ಅಭಿಮಾನಿಗಳು ಶಾಂತ ರೀತಿಯಿಂದ ಇರುವಂತೆ ಕೋರಿಕೊಂಡಿದ್ಧಾರೆ. ಕೋಟಿಗೊಬ್ಬ 3 ಚಿತ್ರ ಬಿಡುಗಡೆಯಾಗದ ಹಿನ್ನಲೆಯಲ್ಲಿ ಸುದೀಪ್ ಪತ್ರ ಬರೆದಿದ್ದು, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ತಾಳ್ಮೆ ಕಳೆದುಕೊಳ್ಳದಂತೆ ಅಭಿಮಾನಿಗಳಲ್ಲಿ ಅವರು ಮನವಿ ಮಾಡಿದ್ದು, ಚಿತ್ರಮಂದಿರದ ಆವರಣಕ್ಕೆ ಧಕ್ಕೆ ತರದಂತೆ ಕೇಳಿಕೊಂಡಿದ್ದಾರೆ. ನಿಗಾವಹಿಸಬೇಕಾದವರ ನಿರ್ಲಕ್ಷ್ಯ ದಿಂದ ಅವ್ಯವಸ್ಥೆಯಾಗಿದ್ದು, ಇದಕ್ಕೆ ಕ್ಷಮೆಯಾಚಿಸುತ್ತೇನೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಅವರು ತಿಳಿಸಿದ್ದಾರೆ.

Published On - 12:09 pm, Thu, 14 October 21

Follow Us
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ