AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ

Kichcha Sudeep: ನಟ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ಸ್ಪಷ್ಟನೆ ನೀಡಿದ್ದಾರೆ.

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್
TV9 Web
| Edited By: |

Updated on:Oct 14, 2021 | 12:21 PM

Share

‘ಕೋಟಿಗೊಬ್ಬ 3’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಚಿತ್ರ ಬಿಡುಗಡೆಯಾಗುತ್ತಿಲ್ಲ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ವಿಡಿಯೋ ಮೂಲಕ ಮನವಿ ಮಾಡಿದ್ದು, ನಾಳೆಯಿಂದ(ಶುಕ್ರವಾರ) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ವಿತರಕರ ಷಡ್ಯಂತ್ರದಿಂದ ಇಂದು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿಡಿಯೋ ಮುಖಾಂತರ ಮಾಹಿತಿ ನೀಡಿರುವ ಅವರು, ‘‘ಇಂದು ಕೋಟಿಗೊಬ್ಬ3 ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನನ್ನನ್ನ ಕ್ಷಮಿಸಿ. ಕೆಲವರ ಷಡ್ಯಂತರದಿಂದ ಕೋಟಿಗೊಬ್ಬ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು. ನಾಳೆ ಬೆಳಗ್ಗೆ (ಅಕ್ಟೋಬರ್ 15) ಆರು ಗಂಟೆಯಿಂದ ಶೋ ಆರಂಭವಾಗಲಿವೆ’’ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ಸುದೀಪ್ ಅವರಲ್ಲೂ ಕ್ಷಮೆ ಕೋರಿರುವ ಸೂರಪ್ಪ ಬಾಬು, ಅಭಿಮಾನಿಗಳಿಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಬೇಕೆಂದು ಕೋರಿದ್ದಾರೆ.

ಸುದೀಪ್ ಇಂದು ಟ್ವೀಟ್ ಮಾಡಿ ಅಭಿಮಾನಿಗಳು ಶಾಂತ ರೀತಿಯಿಂದ ಇರುವಂತೆ ಕೋರಿಕೊಂಡಿದ್ಧಾರೆ. ಕೋಟಿಗೊಬ್ಬ 3 ಚಿತ್ರ ಬಿಡುಗಡೆಯಾಗದ ಹಿನ್ನಲೆಯಲ್ಲಿ ಸುದೀಪ್ ಪತ್ರ ಬರೆದಿದ್ದು, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ತಾಳ್ಮೆ ಕಳೆದುಕೊಳ್ಳದಂತೆ ಅಭಿಮಾನಿಗಳಲ್ಲಿ ಅವರು ಮನವಿ ಮಾಡಿದ್ದು, ಚಿತ್ರಮಂದಿರದ ಆವರಣಕ್ಕೆ ಧಕ್ಕೆ ತರದಂತೆ ಕೇಳಿಕೊಂಡಿದ್ದಾರೆ. ನಿಗಾವಹಿಸಬೇಕಾದವರ ನಿರ್ಲಕ್ಷ್ಯ ದಿಂದ ಅವ್ಯವಸ್ಥೆಯಾಗಿದ್ದು, ಇದಕ್ಕೆ ಕ್ಷಮೆಯಾಚಿಸುತ್ತೇನೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಅವರು ತಿಳಿಸಿದ್ದಾರೆ.

Published On - 12:09 pm, Thu, 14 October 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ