AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ

Kichcha Sudeep: ನಟ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ಸ್ಪಷ್ಟನೆ ನೀಡಿದ್ದಾರೆ.

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್
TV9 Web
| Edited By: |

Updated on:Oct 14, 2021 | 12:21 PM

Share

‘ಕೋಟಿಗೊಬ್ಬ 3’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಚಿತ್ರ ಬಿಡುಗಡೆಯಾಗುತ್ತಿಲ್ಲ. ಈ ಕುರಿತು ನಿರ್ಮಾಪಕ ಸೂರಪ್ಪ ಬಾಬು ವಿಡಿಯೋ ಮೂಲಕ ಮನವಿ ಮಾಡಿದ್ದು, ನಾಳೆಯಿಂದ(ಶುಕ್ರವಾರ) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ವಿತರಕರ ಷಡ್ಯಂತ್ರದಿಂದ ಇಂದು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿಡಿಯೋ ಮುಖಾಂತರ ಮಾಹಿತಿ ನೀಡಿರುವ ಅವರು, ‘‘ಇಂದು ಕೋಟಿಗೊಬ್ಬ3 ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನನ್ನನ್ನ ಕ್ಷಮಿಸಿ. ಕೆಲವರ ಷಡ್ಯಂತರದಿಂದ ಕೋಟಿಗೊಬ್ಬ ರಿಲೀಸ್ ಮಾಡಲು ಸಾಧ್ಯವಾಗಿಲ್ಲ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು. ನಾಳೆ ಬೆಳಗ್ಗೆ (ಅಕ್ಟೋಬರ್ 15) ಆರು ಗಂಟೆಯಿಂದ ಶೋ ಆರಂಭವಾಗಲಿವೆ’’ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ಸುದೀಪ್ ಅವರಲ್ಲೂ ಕ್ಷಮೆ ಕೋರಿರುವ ಸೂರಪ್ಪ ಬಾಬು, ಅಭಿಮಾನಿಗಳಿಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಬೇಕೆಂದು ಕೋರಿದ್ದಾರೆ.

ಸುದೀಪ್ ಇಂದು ಟ್ವೀಟ್ ಮಾಡಿ ಅಭಿಮಾನಿಗಳು ಶಾಂತ ರೀತಿಯಿಂದ ಇರುವಂತೆ ಕೋರಿಕೊಂಡಿದ್ಧಾರೆ. ಕೋಟಿಗೊಬ್ಬ 3 ಚಿತ್ರ ಬಿಡುಗಡೆಯಾಗದ ಹಿನ್ನಲೆಯಲ್ಲಿ ಸುದೀಪ್ ಪತ್ರ ಬರೆದಿದ್ದು, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ತಾಳ್ಮೆ ಕಳೆದುಕೊಳ್ಳದಂತೆ ಅಭಿಮಾನಿಗಳಲ್ಲಿ ಅವರು ಮನವಿ ಮಾಡಿದ್ದು, ಚಿತ್ರಮಂದಿರದ ಆವರಣಕ್ಕೆ ಧಕ್ಕೆ ತರದಂತೆ ಕೇಳಿಕೊಂಡಿದ್ದಾರೆ. ನಿಗಾವಹಿಸಬೇಕಾದವರ ನಿರ್ಲಕ್ಷ್ಯ ದಿಂದ ಅವ್ಯವಸ್ಥೆಯಾಗಿದ್ದು, ಇದಕ್ಕೆ ಕ್ಷಮೆಯಾಚಿಸುತ್ತೇನೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಅವರು ತಿಳಿಸಿದ್ದಾರೆ.

Published On - 12:09 pm, Thu, 14 October 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!