AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

Sandalwood Baadshah Kichcha Sudeepa: ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್
ಸುದೀಪ್​
TV9 Web
| Updated By: Digi Tech Desk|

Updated on:Oct 08, 2021 | 9:40 AM

Share

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಸಿನಿಮಾ ಅಕ್ಟೋಬರ್​ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ‘ಕೋಟಿಗೊಬ್ಬ 3’ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ. ಟ್ರೇಲರ್​ನಲ್ಲಿ ಆ್ಯಕ್ಷನ್​, ಸ್ಟಂಟ್ಸ್​ ಹಾಗೂ ಅದ್ದೂರಿತನ ಹೈಲೈಟ್​ ಆಗಿದೆ.ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ. ‘ಕೋಟಿಗೊಬ್ಬ 2’ ಸಿನಿಮಾದಲ್ಲಿ ಸುದೀಪ್​ ಎರಡು ಶೇಡ್​ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದು ಸಿನಿಮಾದ ಹೈಲೈಟ್​ ಕೂಡ ಆಗಿತ್ತು. ‘ಕೋಟಿಗೊಬ್ಬ 3’ ಸಿನಿಮಾದಲ್ಲೂ ಇದು ಮುಂದುವರಿದಿದೆ. ಇನ್ನು, ಚಿತ್ರದ ಟ್ರೇಲರ್​ನಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳನ್ನು ತೋರಿಸಲಾಗಿದೆ.

‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಆಶಿಕಾ ರಂಗನಾಥ್​ ವಿಶೇಷ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದರ ಒಂದು ತುಣುಕನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಮಡೋನಾ ಸಬಾಸ್ಟಿಯನ್​ ಸಖತ್​ ಗ್ಲಾರಮ್​ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ, ಈ ಸಿನಿಮಾದ ಟ್ರೇಲರ್​ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಿಲೀಸ್​ ಆದ ಗಂಟೆ ಒಳಗೆ  ಟ್ರೇಲರ್​ ಲಕ್ಷ ವೀಕ್ಷಣೆ ಕಂಡಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಕಾಪಿಯ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರು ಸೈಬರ್​ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಶ್ರದ್ಧಾ ದಾಸ್​, ರವಿಶಂಕರ್​, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್​ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ: ಸುದೀಪ್​ಗಾಗಿ ಸಿದ್ಧವಾಗ್ತಿದೆ 120 ಅಡಿ ಕಟೌಟ್​

ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

Published On - 5:48 pm, Thu, 7 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ