AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

Sandalwood Baadshah Kichcha Sudeepa: ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್
ಸುದೀಪ್​
TV9 Web
| Edited By: |

Updated on:Oct 08, 2021 | 9:40 AM

Share

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಸಿನಿಮಾ ಅಕ್ಟೋಬರ್​ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ‘ಕೋಟಿಗೊಬ್ಬ 3’ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ. ಟ್ರೇಲರ್​ನಲ್ಲಿ ಆ್ಯಕ್ಷನ್​, ಸ್ಟಂಟ್ಸ್​ ಹಾಗೂ ಅದ್ದೂರಿತನ ಹೈಲೈಟ್​ ಆಗಿದೆ.ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ. ‘ಕೋಟಿಗೊಬ್ಬ 2’ ಸಿನಿಮಾದಲ್ಲಿ ಸುದೀಪ್​ ಎರಡು ಶೇಡ್​ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದು ಸಿನಿಮಾದ ಹೈಲೈಟ್​ ಕೂಡ ಆಗಿತ್ತು. ‘ಕೋಟಿಗೊಬ್ಬ 3’ ಸಿನಿಮಾದಲ್ಲೂ ಇದು ಮುಂದುವರಿದಿದೆ. ಇನ್ನು, ಚಿತ್ರದ ಟ್ರೇಲರ್​ನಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳನ್ನು ತೋರಿಸಲಾಗಿದೆ.

‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಆಶಿಕಾ ರಂಗನಾಥ್​ ವಿಶೇಷ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದರ ಒಂದು ತುಣುಕನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಮಡೋನಾ ಸಬಾಸ್ಟಿಯನ್​ ಸಖತ್​ ಗ್ಲಾರಮ್​ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ, ಈ ಸಿನಿಮಾದ ಟ್ರೇಲರ್​ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಿಲೀಸ್​ ಆದ ಗಂಟೆ ಒಳಗೆ  ಟ್ರೇಲರ್​ ಲಕ್ಷ ವೀಕ್ಷಣೆ ಕಂಡಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಕಾಪಿಯ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರು ಸೈಬರ್​ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಶ್ರದ್ಧಾ ದಾಸ್​, ರವಿಶಂಕರ್​, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್​ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ: ಸುದೀಪ್​ಗಾಗಿ ಸಿದ್ಧವಾಗ್ತಿದೆ 120 ಅಡಿ ಕಟೌಟ್​

ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

Published On - 5:48 pm, Thu, 7 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ