AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

Sandalwood Baadshah Kichcha Sudeepa: ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್
ಸುದೀಪ್​
TV9 Web
| Edited By: |

Updated on:Oct 08, 2021 | 9:40 AM

Share

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಸಿನಿಮಾ ಅಕ್ಟೋಬರ್​ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ‘ಕೋಟಿಗೊಬ್ಬ 3’ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ. ಟ್ರೇಲರ್​ನಲ್ಲಿ ಆ್ಯಕ್ಷನ್​, ಸ್ಟಂಟ್ಸ್​ ಹಾಗೂ ಅದ್ದೂರಿತನ ಹೈಲೈಟ್​ ಆಗಿದೆ.ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ. ‘ಕೋಟಿಗೊಬ್ಬ 2’ ಸಿನಿಮಾದಲ್ಲಿ ಸುದೀಪ್​ ಎರಡು ಶೇಡ್​ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದು ಸಿನಿಮಾದ ಹೈಲೈಟ್​ ಕೂಡ ಆಗಿತ್ತು. ‘ಕೋಟಿಗೊಬ್ಬ 3’ ಸಿನಿಮಾದಲ್ಲೂ ಇದು ಮುಂದುವರಿದಿದೆ. ಇನ್ನು, ಚಿತ್ರದ ಟ್ರೇಲರ್​ನಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳನ್ನು ತೋರಿಸಲಾಗಿದೆ.

‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಆಶಿಕಾ ರಂಗನಾಥ್​ ವಿಶೇಷ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದರ ಒಂದು ತುಣುಕನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಮಡೋನಾ ಸಬಾಸ್ಟಿಯನ್​ ಸಖತ್​ ಗ್ಲಾರಮ್​ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ, ಈ ಸಿನಿಮಾದ ಟ್ರೇಲರ್​ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಿಲೀಸ್​ ಆದ ಗಂಟೆ ಒಳಗೆ  ಟ್ರೇಲರ್​ ಲಕ್ಷ ವೀಕ್ಷಣೆ ಕಂಡಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಕಾಪಿಯ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರು ಸೈಬರ್​ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಶ್ರದ್ಧಾ ದಾಸ್​, ರವಿಶಂಕರ್​, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್​ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ: ಸುದೀಪ್​ಗಾಗಿ ಸಿದ್ಧವಾಗ್ತಿದೆ 120 ಅಡಿ ಕಟೌಟ್​

ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

Published On - 5:48 pm, Thu, 7 October 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ