AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್

Sandalwood Baadshah Kichcha Sudeepa: ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ.

Kotigobba 3 Trailer: ಆ್ಯಕ್ಷನ್​ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್​ನಲ್ಲಿ ಮಿಂಚಿದ ಸುದೀಪ್
ಸುದೀಪ್​
Follow us
TV9 Web
| Updated By: Digi Tech Desk

Updated on:Oct 08, 2021 | 9:40 AM

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಸಿನಿಮಾ ಅಕ್ಟೋಬರ್​ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ‘ಕೋಟಿಗೊಬ್ಬ 3’ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ. ಟ್ರೇಲರ್​ನಲ್ಲಿ ಆ್ಯಕ್ಷನ್​, ಸ್ಟಂಟ್ಸ್​ ಹಾಗೂ ಅದ್ದೂರಿತನ ಹೈಲೈಟ್​ ಆಗಿದೆ.ಇಂದು (ಅಕ್ಟೋಬರ್​ 7) ಸಂಜೆ ಈ ಟ್ರೇಲರ್​ ರಿಲೀಸ್​ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ ಎನ್ನುವುದಕ್ಕೆ ಟ್ರೇಲರ್​ ಸಾಕ್ಷ್ಯ ನೀಡಿದೆ. ‘ಕೋಟಿಗೊಬ್ಬ 2’ ಸಿನಿಮಾದಲ್ಲಿ ಸುದೀಪ್​ ಎರಡು ಶೇಡ್​ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದು ಸಿನಿಮಾದ ಹೈಲೈಟ್​ ಕೂಡ ಆಗಿತ್ತು. ‘ಕೋಟಿಗೊಬ್ಬ 3’ ಸಿನಿಮಾದಲ್ಲೂ ಇದು ಮುಂದುವರಿದಿದೆ. ಇನ್ನು, ಚಿತ್ರದ ಟ್ರೇಲರ್​ನಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳನ್ನು ತೋರಿಸಲಾಗಿದೆ.

‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಆಶಿಕಾ ರಂಗನಾಥ್​ ವಿಶೇಷ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದರ ಒಂದು ತುಣುಕನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಮಡೋನಾ ಸಬಾಸ್ಟಿಯನ್​ ಸಖತ್​ ಗ್ಲಾರಮ್​ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ, ಈ ಸಿನಿಮಾದ ಟ್ರೇಲರ್​ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಿಲೀಸ್​ ಆದ ಗಂಟೆ ಒಳಗೆ  ಟ್ರೇಲರ್​ ಲಕ್ಷ ವೀಕ್ಷಣೆ ಕಂಡಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಕಾಪಿಯ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರು ಸೈಬರ್​ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಶ್ರದ್ಧಾ ದಾಸ್​, ರವಿಶಂಕರ್​, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್​ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ: ಸುದೀಪ್​ಗಾಗಿ ಸಿದ್ಧವಾಗ್ತಿದೆ 120 ಅಡಿ ಕಟೌಟ್​

ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

Published On - 5:48 pm, Thu, 7 October 21

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ