AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ

Kotigobba 3 Audio Launch: ಕೋಟಿಗೊಬ್ಬ 3 ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ
ಕೋಟಿಗೊಬ್ಬ 3
Skanda
| Edited By: |

Updated on: Feb 04, 2021 | 12:47 PM

Share

ಕೊರೊನಾದಿಂದ ತಣ್ಣಗಾಗಿದ್ದ ಚಿತ್ರರಂಗದಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಿವೆ. ಒಂದರ ಹಿಂದೊಂದು ಹೊಸ ಸಿನಿಮಾಗಳು ತೆರೆಕಾಣಲು ಸಜ್ಜಾಗುತ್ತಿವೆ. ಇದೀಗ ಸುದೀಪ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಕುರಿತಾದ ಬಿಸಿಬಿಸಿ ಸುದ್ದಿಯೊಂದು ಹೊರಬಿದ್ದಿದ್ದು, ಆಡಿಯೋ ರಿಲೀಸ್​ ಶೀಘ್ರದಲ್ಲೇ ಆಗಲಿದೆ ಎನ್ನುವ ವಿಚಾರವನ್ನು ಸುದೀಪ್ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಕಿಚ್ಚ ಸುದೀಪ ಚಿತ್ರರಂಗಕ್ಕೆ ಕಾಲಿಟ್ಟು 25ವರ್ಷ ಪೂರೈಸಿದ ಸಂಭ್ರಮದಲ್ಲಿ ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ನಿಂತು ತಮ್ಮ ಹೊಸ ಸಿನಿಮಾ ವಿಕ್ರಾಂತ್​ ರೋಣ ಟೈಟಲ್​ ಅನಾವರಣಗೊಳಿಸಿದ್ದಾರೆ. ಈ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ ಅವರ ಹೊಸ ಸಿನಿಮಾ ವಿಕ್ರಾಂತ್​ ರೋಣ ಭಾರತದ ಭಾಷೆಗಳಲ್ಲಷ್ಟೇ ಅಲ್ಲದೇ ವಿದೇಶಿ ಭಾಷೆಯಲ್ಲೂ ತೆರೆಕಾಣಲಿದೆ ಎನ್ನಲಾಗಿದೆ.

ಇದೀಗ ವಿಕ್ರಾಂತ್​ ರೋಣಕ್ಕೂ ಮುನ್ನ ತೆರೆಗಪ್ಪಳಿಸಲು ಸಜ್ಜಾಗಿರುವ ಕೋಟಿಗೊಬ್ಬ 3 ಸಿನಿಮಾ ಕುರಿತು ಸುದೀಪ್​ ಅಭಿಮಾನಿಗಳು ಬಹಳ ಉತ್ಸುಕರಾಗಿದ್ದಾರೆ. ಹೀಗಾಗಿ ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

ಕೆಲ ಮೂಲಗಳ ಪ್ರಕಾರ ಕೋಟಿಗೊಬ್ಬ3 ಚಿತ್ರತಂಡ ಕೂಡ ಮಾರ್ಚ್​ 28ಕ್ಕೆ ಆಡಿಯೋ ಬಿಡುಗಡೆ ಮಾಡಲು ಸಜ್ಜಾಗಿದ್ದು, ಏಪ್ರಿಲ್​ 29ಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎನ್ನಲಾಗುತ್ತಿದೆ. ಸದ್ಯ ಟ್ವಿಟರ್​ನಲ್ಲಿ #Kotigobba3audioonmarch28 #K3audioonmarch28 ಎಂಬ ಹ್ಯಾಶ್​ಟ್ಯಾಗ್​ಗಳು ಸಖತ್​ ಸದ್ದು ಮಾಡುತ್ತಿದ್ದು, ಸಿನಿಪ್ರೇಮಿಗಳ ಕುತೂಹಲ ಕೆರಳಿಸಿದೆ.

Vikrant Rona On Burj Khalifa ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ