AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ

Kotigobba 3 Audio Launch: ಕೋಟಿಗೊಬ್ಬ 3 ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ
ಕೋಟಿಗೊಬ್ಬ 3
Skanda
| Edited By: |

Updated on: Feb 04, 2021 | 12:47 PM

Share

ಕೊರೊನಾದಿಂದ ತಣ್ಣಗಾಗಿದ್ದ ಚಿತ್ರರಂಗದಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಿವೆ. ಒಂದರ ಹಿಂದೊಂದು ಹೊಸ ಸಿನಿಮಾಗಳು ತೆರೆಕಾಣಲು ಸಜ್ಜಾಗುತ್ತಿವೆ. ಇದೀಗ ಸುದೀಪ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಕುರಿತಾದ ಬಿಸಿಬಿಸಿ ಸುದ್ದಿಯೊಂದು ಹೊರಬಿದ್ದಿದ್ದು, ಆಡಿಯೋ ರಿಲೀಸ್​ ಶೀಘ್ರದಲ್ಲೇ ಆಗಲಿದೆ ಎನ್ನುವ ವಿಚಾರವನ್ನು ಸುದೀಪ್ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಕಿಚ್ಚ ಸುದೀಪ ಚಿತ್ರರಂಗಕ್ಕೆ ಕಾಲಿಟ್ಟು 25ವರ್ಷ ಪೂರೈಸಿದ ಸಂಭ್ರಮದಲ್ಲಿ ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ನಿಂತು ತಮ್ಮ ಹೊಸ ಸಿನಿಮಾ ವಿಕ್ರಾಂತ್​ ರೋಣ ಟೈಟಲ್​ ಅನಾವರಣಗೊಳಿಸಿದ್ದಾರೆ. ಈ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ ಅವರ ಹೊಸ ಸಿನಿಮಾ ವಿಕ್ರಾಂತ್​ ರೋಣ ಭಾರತದ ಭಾಷೆಗಳಲ್ಲಷ್ಟೇ ಅಲ್ಲದೇ ವಿದೇಶಿ ಭಾಷೆಯಲ್ಲೂ ತೆರೆಕಾಣಲಿದೆ ಎನ್ನಲಾಗಿದೆ.

ಇದೀಗ ವಿಕ್ರಾಂತ್​ ರೋಣಕ್ಕೂ ಮುನ್ನ ತೆರೆಗಪ್ಪಳಿಸಲು ಸಜ್ಜಾಗಿರುವ ಕೋಟಿಗೊಬ್ಬ 3 ಸಿನಿಮಾ ಕುರಿತು ಸುದೀಪ್​ ಅಭಿಮಾನಿಗಳು ಬಹಳ ಉತ್ಸುಕರಾಗಿದ್ದಾರೆ. ಹೀಗಾಗಿ ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

ಕೆಲ ಮೂಲಗಳ ಪ್ರಕಾರ ಕೋಟಿಗೊಬ್ಬ3 ಚಿತ್ರತಂಡ ಕೂಡ ಮಾರ್ಚ್​ 28ಕ್ಕೆ ಆಡಿಯೋ ಬಿಡುಗಡೆ ಮಾಡಲು ಸಜ್ಜಾಗಿದ್ದು, ಏಪ್ರಿಲ್​ 29ಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎನ್ನಲಾಗುತ್ತಿದೆ. ಸದ್ಯ ಟ್ವಿಟರ್​ನಲ್ಲಿ #Kotigobba3audioonmarch28 #K3audioonmarch28 ಎಂಬ ಹ್ಯಾಶ್​ಟ್ಯಾಗ್​ಗಳು ಸಖತ್​ ಸದ್ದು ಮಾಡುತ್ತಿದ್ದು, ಸಿನಿಪ್ರೇಮಿಗಳ ಕುತೂಹಲ ಕೆರಳಿಸಿದೆ.

Vikrant Rona On Burj Khalifa ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್