AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲನಾ ಜತೆ ಸಿಡಿಮಿಡಿ ಮಾಡುತ್ತಿರುವ ಡಾರ್ಲಿಂಗ್​ ಕೃಷ್ಣ; ಇದಕ್ಕೆಲ್ಲ ಕಾರಣ ಶಿವಾನಿ ಸಹವಾಸ

Shivani song | Darling Krishna: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಡಾರ್ಲಿಂಗ್​ ಕೃಷ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸುವ ರೀತಿಯಲ್ಲಿ ಈ ಟೀಸರ್​ ಮೂಡಿಬಂದಿದೆ. ‘ಶಿವಾನಿ..’ ಹಾಡು ಏ.21ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ.

ಮಿಲನಾ ಜತೆ ಸಿಡಿಮಿಡಿ ಮಾಡುತ್ತಿರುವ ಡಾರ್ಲಿಂಗ್​ ಕೃಷ್ಣ; ಇದಕ್ಕೆಲ್ಲ ಕಾರಣ ಶಿವಾನಿ ಸಹವಾಸ
ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ, ಬೃಂದಾ ಆಚಾರ್ಯ
ಮದನ್​ ಕುಮಾರ್​
|

Updated on:Apr 18, 2023 | 5:00 PM

Share

ನಟ ಡಾರ್ಲಿಂಗ್​ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್​ (Milana Nagaraj) ನಡುವೆ ಉತ್ತಮ ಹೊಂದಾಣಿಕೆ ಇದೆ. ಇಬ್ಬರೂ ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. ‘ಲವ್​ ಮಾಕ್ಟೇಲ್​’ ಸಿನಿಮಾ ಗೆದ್ದ ಬಳಿಕ ತಮ್ಮ ಪ್ರೀತಿಯನ್ನು ಬಹಿರಂಗಪಡಿಸಿದರು. ಈಗ ಇವರಿಬ್ಬರು ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಆದರೆ ಇತ್ತೀಚೆಗೆ ಡಾರ್ಲಿಂಗ್​ ಕೃಷ್ಣ ಅವರು ಮಿಲನಾ ನಾಗರಾಜ್​ ಜೊತೆ ಸಿಡಿಮಿಡಿ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಶಿವಾನಿ! ಯಾರು ಈ ಶಿವಾನಿ? ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ಸಂಸಾರದಲ್ಲಿ ಈಕೆ ಯಾಕೆ ಮೂಗು ತೂರಿಸುತ್ತಿದ್ದಾಳೆ? ಇಂಥ ಪ್ರಶ್ನೆ ಮೂಡಿದರೆ ಅದಕ್ಕೆ ಉತ್ತರ ‘ಕೌಸಲ್ಯ ಸುಪ್ರಜಾ ರಾಮಾ’ (Kousalya Supraja Rama) ಸಿನಿಮಾದ ಸಾಂಗ್​ ಟೀಸರ್​ನಲ್ಲಿದೆ. ಹೌದು, ಈ ಸಿನಿಮಾದ ತಂಡದಿಂದ ಹೊಸ ಹಾಡಿನ ಟೀಸರ್​ ಬಿಡುಗಡೆ ಆಗಿದೆ. ಅದರಲ್ಲಿ ಡಾರ್ಲಿಂಗ್​ ಕೃಷ್ಣ (Darling Krishna) ಅವರು ಎಲ್ಲರ ಮೇಲೂ ಸಿಡಿಮಿಡಿ ಮಾಡುವಂತಹ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ.

‘ಮೊಗ್ಗಿನ ಮನಸು’ ಖ್ಯಾತಿಯ ಶಶಾಂಕ್​ ಅವರು ‘ಕೌಸಲ್ಯ ಸುಪ್ರಜಾ ರಾಮಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಡಾರ್ಲಿಂಗ್​ ಕೃಷ್ಣ ಜೊತೆ ಬೃಂದಾ ಆಚಾರ್ಯ ನಟಿಸಿದ್ದಾರೆ. ಅರ್ಜುನ್​ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಶಿವಾನಿ..’ ಎಂಬ ಹಾಡನ್ನು ಬಿಡುಗಡೆ ಮಾಡುವುದಕ್ಕೂ ಮುನ್ನ ಫನ್ನಿಯಾದ ಒಂದು ಟೀಸರ್​ ರಿಲೀಸ್​ ಮಾಡಲಾಗಿದೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಕೆಲಸ ಆರಂಭಿಸಿದ ಡಾರ್ಲಿಂಗ್​ ಕೃಷ್ಣ; ಮುಂದುವರಿಯಲಿದೆ ಆದಿ-ನಿಧಿ ಕಥೆ

ಇದನ್ನೂ ಓದಿ
Image
Milana Nagaraj: ‘ಡಿಯರ್​​ ವಿಕ್ರಮ್​’ ಹೇಗಿದೆ? ಸತೀಶ್​ ನೀನಾಸಂ, ಶ್ರದ್ಧಾ ಶ್ರೀನಾಥ್​ ನಟನೆಯ ಚಿತ್ರಕ್ಕೆ ಮಿಲನಾ ವಿಮರ್ಶೆ
Image
Darling Krishna Birthday: ಬರ್ತ್​ಡೇ ಪ್ರಯುಕ್ತ ಮಾಲ್ಡೀವ್ಸ್​ಗೆ ತೆರಳಿದ ಡಾರ್ಲಿಂಗ್​ ಕೃಷ್ಣ-ಮಿಲನಾ; ಇಲ್ಲಿವೆ ಕ್ಯೂಟ್​ ಜೋಡಿಯ ಫೋಟೋ
Image
‘ಅವತಾರ ಪುರುಷ’ ಸಿನಿಮಾ ನೋಡಿ ಕಣ್ಣಲ್ಲಿ ನೀರು ಬರುವಷ್ಟು ನಕ್ಕುಬಿಟ್ಟೆ ಎಂದ ಮಿಲನಾ ನಾಗರಾಜ್
Image
ಸಿಂಗಾಪುರದಲ್ಲಿ ಮಿಲನಾ ನಾಗರಾಜ್​-ಡಾರ್ಲಿಂಗ್ ಕೃಷ್ಣ; ವೈರಲ್ ಆಯ್ತು ಫೋಟೋ

‘ಶಿವಾನಿ..’ ಸಾಂಗ್​ ಟೀಸರ್​ನಲ್ಲಿ ಏನಿದೆ?

ಸಿನಿಮಾದ​ ಬಗ್ಗೆ ಮಾತನಾಡಲು ಶಶಾಂಕ್​, ಡಾರ್ಲಿಂಗ್​ ಕೃಷ್ಣ ಒಂದು ಆಫೀಸ್​ನಲ್ಲಿ ಕುಳಿತಿರುತ್ತಾರೆ. ಆಗ ಅಲ್ಲಿಗೆ ನಟಿ ಬೃಂದಾ ಆಚಾರ್ಯ ಬರುತ್ತಾರೆ. ‘ಎಷ್ಟು ಹೊತ್ತಿಗೆ ಬರೋದು? ಟೈಮ್​ ಸೆನ್ಸ್​ ಇಲ್ಲವಾ’ ಎಂದು ಕೃಷ್ಣ ರೇಗುತ್ತಾರೆ. ‘ಶೂಟಿಂಗ್​ ಮುಗಿದರೂ ಇವರು ಪಾತ್ರದಿಂದ ಹೊರಗೆ ಬಂದಿಲ್ಲವಲ್ಲ ಸರ್​. ಇಲ್ಲೇ ಹೀಗಾದರೆ ಮನೆಯಲ್ಲಿ ಮಿಲನಾ ಕಥೆ ಏನಾಗಿರಬಹುದು’ ಎಂದು ನಿರ್ದೇಶಕ ಶಶಾಂಕ್​ ಬಳಿ ಬೃಂದಾ ಕೇಳುತ್ತಾರೆ. ಆಗ ಕೃಷ್ಣಗೆ ಮಿಲನಾ ಕಡೆಯಿಂದ ಫೋನ್​ ಕರೆ ಬರುತ್ತದೆ.

‘ಟ್ರಿಪ್​ಗೆ ಹೋಗೋಕೆ ಟಿಕೆಟ್​ ಬುಕ್​ ಮಾಡುತ್ತಿದ್ದೇನೆ. ಸ್ವಿಜರ್​ಲ್ಯಾಂಡ್​ಗೆ ಹೋಗೋಣ’ ಅಂತ ಮಿಲನಾ ಹೇಳ್ತಾರೆ. ‘ಸ್ವಿಜರ್​ಲ್ಯಾಂಡ್​ ಬೇಡ. ಪ್ಯಾರಿಸ್​ಗೆ ಹೋಗೋಣ’ ಎಂದು ಕೃಷ್ಣ ಸಿಡುಕಿನಿಂದ ಉತ್ತರಿಸುತ್ತಾರೆ. ಇದರಿಂದ ಸಿಟ್ಟಾದ ಮಿಲನಾ ಅವರು ನಿರ್ದೇಶಕರ ಮೇಲೆ ಕೋಪ ಮಾಡಿಕೊಳ್ಳುತ್ತಾರೆ. ಈ ರೀತಿಯ ಫನ್ನಿ ಕಾನ್ಸೆಪ್ಟ್​ನಲ್ಲಿ ಟೀಸರ್​ ಸಿದ್ಧವಾಗಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸುವ ರೀತಿಯಲ್ಲಿ ಈ ಟೀಸರ್​ ಮೂಡಿಬಂದಿದೆ. ‘ಶಿವಾನಿ..’ ಹಾಡು ಏಪ್ರಿಲ್​ 21ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ. ‘ಶಶಾಂಕ್​ ಸಿನಿಮಾಸ್​’ ಮತ್ತು ‘ಕೌರವ ಪ್ರೊಡಕ್ಷನ್​ ಹೌಸ್​’ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Tue, 18 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್