ಮಿಲನಾ ಜತೆ ಸಿಡಿಮಿಡಿ ಮಾಡುತ್ತಿರುವ ಡಾರ್ಲಿಂಗ್​ ಕೃಷ್ಣ; ಇದಕ್ಕೆಲ್ಲ ಕಾರಣ ಶಿವಾನಿ ಸಹವಾಸ

Shivani song | Darling Krishna: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಡಾರ್ಲಿಂಗ್​ ಕೃಷ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸುವ ರೀತಿಯಲ್ಲಿ ಈ ಟೀಸರ್​ ಮೂಡಿಬಂದಿದೆ. ‘ಶಿವಾನಿ..’ ಹಾಡು ಏ.21ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ.

ಮಿಲನಾ ಜತೆ ಸಿಡಿಮಿಡಿ ಮಾಡುತ್ತಿರುವ ಡಾರ್ಲಿಂಗ್​ ಕೃಷ್ಣ; ಇದಕ್ಕೆಲ್ಲ ಕಾರಣ ಶಿವಾನಿ ಸಹವಾಸ
ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ, ಬೃಂದಾ ಆಚಾರ್ಯ
Follow us
|

Updated on:Apr 18, 2023 | 5:00 PM

ನಟ ಡಾರ್ಲಿಂಗ್​ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್​ (Milana Nagaraj) ನಡುವೆ ಉತ್ತಮ ಹೊಂದಾಣಿಕೆ ಇದೆ. ಇಬ್ಬರೂ ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. ‘ಲವ್​ ಮಾಕ್ಟೇಲ್​’ ಸಿನಿಮಾ ಗೆದ್ದ ಬಳಿಕ ತಮ್ಮ ಪ್ರೀತಿಯನ್ನು ಬಹಿರಂಗಪಡಿಸಿದರು. ಈಗ ಇವರಿಬ್ಬರು ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಆದರೆ ಇತ್ತೀಚೆಗೆ ಡಾರ್ಲಿಂಗ್​ ಕೃಷ್ಣ ಅವರು ಮಿಲನಾ ನಾಗರಾಜ್​ ಜೊತೆ ಸಿಡಿಮಿಡಿ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಶಿವಾನಿ! ಯಾರು ಈ ಶಿವಾನಿ? ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ಸಂಸಾರದಲ್ಲಿ ಈಕೆ ಯಾಕೆ ಮೂಗು ತೂರಿಸುತ್ತಿದ್ದಾಳೆ? ಇಂಥ ಪ್ರಶ್ನೆ ಮೂಡಿದರೆ ಅದಕ್ಕೆ ಉತ್ತರ ‘ಕೌಸಲ್ಯ ಸುಪ್ರಜಾ ರಾಮಾ’ (Kousalya Supraja Rama) ಸಿನಿಮಾದ ಸಾಂಗ್​ ಟೀಸರ್​ನಲ್ಲಿದೆ. ಹೌದು, ಈ ಸಿನಿಮಾದ ತಂಡದಿಂದ ಹೊಸ ಹಾಡಿನ ಟೀಸರ್​ ಬಿಡುಗಡೆ ಆಗಿದೆ. ಅದರಲ್ಲಿ ಡಾರ್ಲಿಂಗ್​ ಕೃಷ್ಣ (Darling Krishna) ಅವರು ಎಲ್ಲರ ಮೇಲೂ ಸಿಡಿಮಿಡಿ ಮಾಡುವಂತಹ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ.

‘ಮೊಗ್ಗಿನ ಮನಸು’ ಖ್ಯಾತಿಯ ಶಶಾಂಕ್​ ಅವರು ‘ಕೌಸಲ್ಯ ಸುಪ್ರಜಾ ರಾಮಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಡಾರ್ಲಿಂಗ್​ ಕೃಷ್ಣ ಜೊತೆ ಬೃಂದಾ ಆಚಾರ್ಯ ನಟಿಸಿದ್ದಾರೆ. ಅರ್ಜುನ್​ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಶಿವಾನಿ..’ ಎಂಬ ಹಾಡನ್ನು ಬಿಡುಗಡೆ ಮಾಡುವುದಕ್ಕೂ ಮುನ್ನ ಫನ್ನಿಯಾದ ಒಂದು ಟೀಸರ್​ ರಿಲೀಸ್​ ಮಾಡಲಾಗಿದೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಕೆಲಸ ಆರಂಭಿಸಿದ ಡಾರ್ಲಿಂಗ್​ ಕೃಷ್ಣ; ಮುಂದುವರಿಯಲಿದೆ ಆದಿ-ನಿಧಿ ಕಥೆ

ಇದನ್ನೂ ಓದಿ
Image
Milana Nagaraj: ‘ಡಿಯರ್​​ ವಿಕ್ರಮ್​’ ಹೇಗಿದೆ? ಸತೀಶ್​ ನೀನಾಸಂ, ಶ್ರದ್ಧಾ ಶ್ರೀನಾಥ್​ ನಟನೆಯ ಚಿತ್ರಕ್ಕೆ ಮಿಲನಾ ವಿಮರ್ಶೆ
Image
Darling Krishna Birthday: ಬರ್ತ್​ಡೇ ಪ್ರಯುಕ್ತ ಮಾಲ್ಡೀವ್ಸ್​ಗೆ ತೆರಳಿದ ಡಾರ್ಲಿಂಗ್​ ಕೃಷ್ಣ-ಮಿಲನಾ; ಇಲ್ಲಿವೆ ಕ್ಯೂಟ್​ ಜೋಡಿಯ ಫೋಟೋ
Image
‘ಅವತಾರ ಪುರುಷ’ ಸಿನಿಮಾ ನೋಡಿ ಕಣ್ಣಲ್ಲಿ ನೀರು ಬರುವಷ್ಟು ನಕ್ಕುಬಿಟ್ಟೆ ಎಂದ ಮಿಲನಾ ನಾಗರಾಜ್
Image
ಸಿಂಗಾಪುರದಲ್ಲಿ ಮಿಲನಾ ನಾಗರಾಜ್​-ಡಾರ್ಲಿಂಗ್ ಕೃಷ್ಣ; ವೈರಲ್ ಆಯ್ತು ಫೋಟೋ

‘ಶಿವಾನಿ..’ ಸಾಂಗ್​ ಟೀಸರ್​ನಲ್ಲಿ ಏನಿದೆ?

ಸಿನಿಮಾದ​ ಬಗ್ಗೆ ಮಾತನಾಡಲು ಶಶಾಂಕ್​, ಡಾರ್ಲಿಂಗ್​ ಕೃಷ್ಣ ಒಂದು ಆಫೀಸ್​ನಲ್ಲಿ ಕುಳಿತಿರುತ್ತಾರೆ. ಆಗ ಅಲ್ಲಿಗೆ ನಟಿ ಬೃಂದಾ ಆಚಾರ್ಯ ಬರುತ್ತಾರೆ. ‘ಎಷ್ಟು ಹೊತ್ತಿಗೆ ಬರೋದು? ಟೈಮ್​ ಸೆನ್ಸ್​ ಇಲ್ಲವಾ’ ಎಂದು ಕೃಷ್ಣ ರೇಗುತ್ತಾರೆ. ‘ಶೂಟಿಂಗ್​ ಮುಗಿದರೂ ಇವರು ಪಾತ್ರದಿಂದ ಹೊರಗೆ ಬಂದಿಲ್ಲವಲ್ಲ ಸರ್​. ಇಲ್ಲೇ ಹೀಗಾದರೆ ಮನೆಯಲ್ಲಿ ಮಿಲನಾ ಕಥೆ ಏನಾಗಿರಬಹುದು’ ಎಂದು ನಿರ್ದೇಶಕ ಶಶಾಂಕ್​ ಬಳಿ ಬೃಂದಾ ಕೇಳುತ್ತಾರೆ. ಆಗ ಕೃಷ್ಣಗೆ ಮಿಲನಾ ಕಡೆಯಿಂದ ಫೋನ್​ ಕರೆ ಬರುತ್ತದೆ.

‘ಟ್ರಿಪ್​ಗೆ ಹೋಗೋಕೆ ಟಿಕೆಟ್​ ಬುಕ್​ ಮಾಡುತ್ತಿದ್ದೇನೆ. ಸ್ವಿಜರ್​ಲ್ಯಾಂಡ್​ಗೆ ಹೋಗೋಣ’ ಅಂತ ಮಿಲನಾ ಹೇಳ್ತಾರೆ. ‘ಸ್ವಿಜರ್​ಲ್ಯಾಂಡ್​ ಬೇಡ. ಪ್ಯಾರಿಸ್​ಗೆ ಹೋಗೋಣ’ ಎಂದು ಕೃಷ್ಣ ಸಿಡುಕಿನಿಂದ ಉತ್ತರಿಸುತ್ತಾರೆ. ಇದರಿಂದ ಸಿಟ್ಟಾದ ಮಿಲನಾ ಅವರು ನಿರ್ದೇಶಕರ ಮೇಲೆ ಕೋಪ ಮಾಡಿಕೊಳ್ಳುತ್ತಾರೆ. ಈ ರೀತಿಯ ಫನ್ನಿ ಕಾನ್ಸೆಪ್ಟ್​ನಲ್ಲಿ ಟೀಸರ್​ ಸಿದ್ಧವಾಗಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸುವ ರೀತಿಯಲ್ಲಿ ಈ ಟೀಸರ್​ ಮೂಡಿಬಂದಿದೆ. ‘ಶಿವಾನಿ..’ ಹಾಡು ಏಪ್ರಿಲ್​ 21ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ. ‘ಶಶಾಂಕ್​ ಸಿನಿಮಾಸ್​’ ಮತ್ತು ‘ಕೌರವ ಪ್ರೊಡಕ್ಷನ್​ ಹೌಸ್​’ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Tue, 18 April 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು