AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ 50 ದಿನದ ಸಂಭ್ರಮ; ಪ್ರೇಕ್ಷಕರಿಗೆ ಸಿಹಿ ಹಂಚಲಿರುವ ಮಿಲನಾ-ಕೃಷ್ಣ

‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ತೆರೆಕಂಡ ಬಳಿಕ ಬೇರೆ ಬೇರೆ ಸಿನಿಮಾಗಳು ಬಿಡುಗಡೆ ಆಗಿ ಅಬ್ಬರಿಸಿದವು. ಅವುಗಳಿಗೆಲ್ಲ ಪೈಪೋಟಿ ನೀಡುವ ಮೂಲಕ ಈ ಸಿನಿಮಾ 50ನೇ ದಿನದ ಸಂಭ್ರಮಕ್ಕೆ ಸಾಕ್ಷಿ ಆಗುತ್ತಿದೆ. ಭಾರತ ವರ್ಸಸ್​ ಪಾಕಿಸ್ತಾನ ಕ್ರಿಕೆಟ್​ ಪಂದ್ಯ ಇದ್ದಾಗಲೂ ಕೂಡ ಪ್ರೇಕ್ಷಕರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ.

‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ 50 ದಿನದ ಸಂಭ್ರಮ; ಪ್ರೇಕ್ಷಕರಿಗೆ ಸಿಹಿ ಹಂಚಲಿರುವ ಮಿಲನಾ-ಕೃಷ್ಣ
ಕೌಸಲ್ಯ ಸುಪ್ರಜಾ ರಾಮ
ಮದನ್​ ಕುಮಾರ್​
|

Updated on: Sep 13, 2023 | 7:06 PM

Share

2023ರ ದ್ವಿತೀಯಾರ್ಧದಲ್ಲಿ ಅನೇಕ ಸಿನಿಮಾಗಳು ಬಿಡುಗಡೆ ಆಗಿವೆ. ಆ ಪೈಕಿ 50 ಡೇಸ್​ ಸಂಭ್ರಮವನ್ನು ಆಚರಿಸಿಕೊಂಡಿದ್ದು ಕೆಲವೇ ಚಿತ್ರಗಳು ಮಾತ್ರ. ಈಗ ಕನ್ನಡದ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ (Kousalya Supraja Rama) ಕೂಡ ಅರ್ಧ ಶತಕ ಬಾರಿಸುತ್ತಿದೆ. ಈ ಖುಷಿಯನ್ನು ಪ್ರೇಕ್ಷಕರ ಜೊತೆ ಹಂಚಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ. ಕೌಟುಂಬಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ (Darling Krishna), ಮಿಲನಾ ನಾಗರಾಜ್​, ಬೃಂದಾ ಆಚಾರ್ಯ, ನಾಗಭೂಷಣ್​ ಮುಂತಾದವರು ನಟಿಸಿದ್ದಾರೆ. ನಿರ್ದೇಶಕ ಶಶಾಂಕ್​ (Director Shashank) ಅವರು ಹೇಳಿದ ಕಥೆ ಎಲ್ಲರಿಗೂ ಇಷ್ಟ ಆಗಿದೆ. ಈಗ 50ನೇ ದಿನದ ಸಂಭ್ರಮಕ್ಕಾಗಿ ಚಿತ್ರತಂಡ ಒಂದು ಪ್ಲ್ಯಾನ್​ ಮಾಡಿಕೊಂಡಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಬೆಂಗಳೂರಿನ ‘ವೀರೇಶ್​’ ಚಿತ್ರಮಂದಿರದಲ್ಲಿ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸೆಪ್ಟೆಂಬರ್​ 14ರಂದು ಸಂಜೆ 4.15ಕ್ಕೆ ಪ್ರೇಕ್ಷಕರೊಂದಿಗೆ ಮಿಲನಾ ನಾಗರಾಜ್​, ಡಾರ್ಲಿಂಗ್​ ಕೃಷ್ಣ, ಶಶಾಂಕ್​ ಮುಂತಾದವರು ಸಿನಿಮಾ ನೋಡಲಿದ್ದಾರೆ. ಟಿಕೆಟ್​ ಕೌಂಟರ್​ನಲ್ಲಿ ಮಿಲನಾ ಮತ್ತು ಕೃಷ್ಣ ಅವರು ಟಿಕೆಟ್​ ನೀಡಲಿದ್ದಾರೆ. ಅದರೊಂದಿಗೆ ಸಿಹಿ ಕೂಡ ಹಂಚಲಿದ್ದಾರೆ. ಈ ಸಂಭ್ರಮದಲ್ಲಿ ಭಾಗಿ ಆಗುವಂತೆ ಪ್ರೇಕ್ಷಕರಿಗೆ ಚಿತ್ರತಂಡದವರು ಸೋಶಿಯಲ್​ ಮೀಡಿಯಾ ಮೂಲಕ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: Kausalya Supraja Rama Review: ನೀವು ನಿಜವಾದ ಗಂಡಸು ಹೌದಾ? ಕೌಸಲ್ಯ ಸುಪ್ರಜಾ ರಾಮ ಚಿತ್ರ ನೋಡಿದ್ರೆ ಬಯಲಾಗುತ್ತೆ ಸತ್ಯ

‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ತೆರೆಕಂಡ ಬಳಿಕ ಬೇರೆ ಬೇರೆ ಸಿನಿಮಾಗಳು ಬಿಡುಗಡೆ ಆದವು. ಪರಭಾಷೆಯಲ್ಲಿ ಹಲವು ಸಿನಿಮಾಗಳು ಅಬ್ಬರಿಸಿದವು. ಅವುಗಳಿಗೆಲ್ಲ ಸರಿಯಾದ ಪೈಪೋಟಿ ನೀಡುವ ಮೂಲಕ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ 50ನೇ ದಿನದ ಸಂಭ್ರಮಕ್ಕೆ ಸಾಕ್ಷಿ ಆಗುತ್ತಿದೆ. ಭಾರತ ವರ್ಸಸ್​ ಪಾಕಿಸ್ತಾನ್​ ಕ್ರಿಕೆಟ್​ ಪಂದ್ಯ ಇದ್ದಾಗಲೂ ಕೂಡ ಪ್ರೇಕ್ಷಕರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಒಳ್ಳೆಯ ಕಂಟೆಂಟ್​ ಇದ್ದರೆ ಪ್ರೇಕ್ಷಕರು ಖಂಡಿತವಾಗಿಯೂ ಸಿನಿಮಾವನ್ನು ಗೆಲ್ಲಿಸುತ್ತಾರೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ.

ಇದನ್ನೂ ಓದಿ: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಟಿಎನ್​ ಸೀತಾರಾಮ್​ ಮೆಚ್ಚುಗೆ; ಸಾಹಿತಿಗಳಿಗೆ ಇಷ್ಟವಾಯ್ತು ಶಶಾಂಕ್​ ಸಿನಿಮಾ

ಅಚ್ಯುತ್​ ಕುಮಾರ್​, ರಂಗಾಯಣ ರಘು, ಸುಧಾ ಬೆಳವಾಡಿ ಮುಂತಾದವರು ಕೂಡ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ನಟಿಸಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನೀಡಿದ ಹಾಡುಗಳು ಸೂಪರ್​ ಹಿಟ್​ ಆಗಿವೆ. ‘ಶಿವಾನಿ..’, ‘ಪ್ರೀತಿಸುವೆ..’, ‘90 ಹಾಕು..’ ಗೀತೆಗಳು ವೈರಲ್​ ಆಗಿವೆ. ಸಿನಿಮಾದ ಗೆಲುವಿನಲ್ಲಿ ಈ ಹಾಡುಗಳ ಕೊಡುಗೆ ಕೂಡ ಇದೆ.

ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸುವಂತಹ ಕಥಾಹಂದರ ಈ ಸಿನಿಮಾದಲ್ಲಿದೆ. ತಾಯಿ ಸೆಂಟಿಮೆಂಟ್​ ಚೆನ್ನಾಗಿದೆ. ಇದು ಪ್ರೇಕ್ಷಕರಿಗೆ ಇಷ್ಟ ಆಗಿದೆ. ಈ ಸಿನಿಮಾದ ಮೂಲಕ ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಜೋಡಿಗೆ ಮತ್ತೊಂದು ಗೆಲುವು ಸಿಕ್ಕಂತೆ ಆಗಿದೆ. ವಿಮರ್ಶಕರಿಂದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದೆ. ಬೃಂದಾ ಆಚಾರ್ಯ ಅವರ ಜನಪ್ರಿಯತೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ