AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌಸಲ್ಯ ಸುಪ್ರಜಾ ರಾಮ’ ಟ್ರೈಲರ್ ಬಿಡುಗಡೆ: ಪುರುಷ ಅಹಂಕಾರದ ಸುತ್ತ ಪ್ರೇಮಕತೆ

Kausalya Supraja Rama: ಡಾರ್ಲಿಂಗ್ ಕೃಷ್ಣ ನಟಿಸಿರುವ ಕೌಸಲ್ಯ ಸುಪ್ರಜಾ ರಾಮ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

'ಕೌಸಲ್ಯ ಸುಪ್ರಜಾ ರಾಮ' ಟ್ರೈಲರ್ ಬಿಡುಗಡೆ: ಪುರುಷ ಅಹಂಕಾರದ ಸುತ್ತ ಪ್ರೇಮಕತೆ
ಕೌಸಲ್ಯ ಸುಪ್ರಜಾ ರಾಮ
ಮಂಜುನಾಥ ಸಿ.
|

Updated on:Jul 14, 2023 | 8:28 PM

Share

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಕೌಸಲ್ಯ ಸುಪ್ರಜಾ ರಾಮ‘ (Kausalya Supraja Rama) ಸಿನಿಮಾದ ಟ್ರೈಲರ್ ಅನ್ನು ಇಂದು (ಜುಲೈ 14) ನಟ ಸುದೀಪ್ (Sudeep) ಬಿಡುಗಡೆ ಮಾಡಿದ್ದಾರೆ. ಪುರುಷ ಅಹಾಂಕರದ ಕುರಿತಾದ ಕತೆಯನ್ನು ಸಿನಿಮಾ ಒಳಗೊಂಡಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ಗಂಡು ಮೇಲು, ಹೆಣ್ಣು ಕೀಳು ಅಥವಾ ಗಂಡಿನ ಆಳು ಅಂದುಕೊಂಡಿರುವ ಯುವಕನೊಬ್ಬ ಪ್ರೀತಿಯಲ್ಲಿ ಬಿದ್ದಾಗಿನ ಆ ನಂತರದ ಕತೆಯನ್ನು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಒಳಗೊಂಡಿದೆ.

ಸಿನಿಮಾದ ಟ್ರೈಲರ್​ನಲ್ಲಿ ಕೆಲವು ಅಂಶಗಳನ್ನು ನಿರ್ದೇಶಕ ಶಶಾಂಕ್ ಬಿಟ್ಟುಕೊಟ್ಟಿದ್ದಾರೆ. ಡಾರ್ಲಿಂಗ್ ಕೃಷ್ಣ ಮಹಿಳಾ ದ್ವೇಷಿಯಾಗಲು ಅಪ್ಪನೇ ಕಾರಣ, ಅಪ್ಪನ ಮಾತುಗಳಿಂದ ಸ್ಪೂರ್ತಿ ಪಡೆದು ಪುರುಷ ಅಹಂಕಾರವನ್ನು ಬೆಳೆಸಿಕೊಂಡಿದ್ದಾನೆ ನಾಯಕ. ಆದರೆ ಅಮ್ಮ ಹಾಗಲ್ಲ ಆಕೆ ಕರುಣಾಮಯಿ, ಪ್ರೇಮಮಯಿ, ಆದರೆ ನಾಯಕ ಡಾರ್ಲಿಂಗ್ ಕೃಷ್ಣ ಕೇಳಿರುವುದು ಪಾಲಿಸುತ್ತಿರುವುದು ಅಪ್ಪನ ಮಾತನ್ನು ಹೀಗಿರುವಾಗ ಅವನಿಗೆ ಚಂದದ ಹುಡುಗಿಯೊಟ್ಟಿಗೆ ಲವ್ ಆಗುತ್ತದೆ. ಮುಂದೇನು? ಸಿನಿಮಾದಲ್ಲಿಯೇ ನೋಡಬೇಕು.

ಇದನ್ನೂ ಓದಿ:Darling Krishna: ಬಿಲ್ಡಪ್​, ಹೈಪ್​ ಇಲ್ಲದೇ ರಿಲೀಸ್​ ಡೇಟ್​ ತಿಳಿಸಿದ ‘ಕೌಸಲ್ಯ ಸುಪ್ರಜಾ ರಾಮ’; ಜುಲೈ 28ಕ್ಕೆ ಬರಲಿದೆ ಶಶಾಂಕ್​-ಡಾರ್ಲಿಂಗ್​ ಕೃಷ್ಣ ಸಿನಿಮಾ

ತಮ್ಮ ಹಿಂದಿನ ಸಿನಿಮಾಗಳಿಗೆ ಹೋಲಿಸಿದರೆ ನಟ ಡಾರ್ಲಿಂಗ್ ಕೃಷ್ಣ ಹೆಚ್ಚು ಮಾಸ್ ಆಗಿ, ಹೆಚ್ಚು ಖಡಕ್ ಆಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವು ಮಾಸ್ ಡೈಲಾಗ್​ಗಳನ್ನು ಸಹ ಡಾರ್ಲಿಂಗ್ ಕೃಷ್ಣ ಹೊಡೆದಿರುವುದು ಟ್ರೈಲರ್​ನಲ್ಲಿ ತಿಳಿದು ಬಂದಿದೆ. ಹಾಸ್ಯಕ್ಕೆ ನಾಗಭೂಷಣ ಇದ್ದಾರೆ. ಡಾರ್ಲಿಂಗ್ ಕೃಷ್ಣನ ತಂದೆಯ ಪಾತ್ರದಲ್ಲಿ ರಂಗಾಯಣ ರಘು ಮಿಂಚಿದ್ದಾರೆ, ಅಹಂಕಾರಿ ಅಪ್ಪನ ಪಾತ್ರದಲ್ಲಿ ರಘು ನಟಿಸಿದ್ದಾರೆ. ಅಮ್ಮನ ಪಾತ್ರದಲ್ಲಿ ಸ್ಯಾಂಡಲ್​ವುಡ್ ತಾಯಿ ಎಂದೇ ಖ್ಯಾತವಾಗಿರುವ ಸುಧಾ ಬೆಳವಾಡಿ ನಟಿಸಿದ್ದಾರೆ.

ಟ್ರೈಲರ್​ನಲ್ಲಿ ಕೆಲ ಮಾಸ್ ಅಂಶಗಳು, ಭಾವುಕ ಅಂಶಗಳು, ಪ್ರೀತಿ-ತಮಾಷೆಯ ದೃಶ್ಯಗಳನ್ನು ಸೇರಿಸಲಾಗಿದೆ. ಟ್ರೈಲರ್​ನಲ್ಲಿ ನಾಯಕಿ ಬೃಂದಾ ಆಚಾರ್ಯ ಗಮನ ಸೆಳೆದಿದ್ದಾರೆ. ಕೊನೆಯಲ್ಲಿ ಎಂಟ್ರಿ ಕೊಡುವ ಮಿಲನಾ ನಾಗರಾಜ್ ಪಾತ್ರವೇನು ಎಂಬುದು ಸಿನಿಮಾ ನೋಡಿದ ಬಳಿಕವೇ ತಿಳಿಯಲಿದೆ. ಸಿನಿಮಾಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಟ್ರೈಲರ್​ನಲ್ಲಿಯೇ ಅವರ ಸಂಗೀತದ ಕೆಲವು ಝಲಕ್​ಗಳು ಕೇಳ ಸಿಗುತ್ತವೆ.

ಸಿನಿಮಾವನ್ನು ಹಿರಿಯ ನಿರ್ದೇಶಕ ಶಶಾಂಕ್ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಮಾಜಿ ಸಚಿವ ಬಿಸಿ ಪಾಟೀಲ್ ನಿರ್ಮಾಣ ಮಾಡಿದ್ದಾರೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರೂ ಸಹ ಹಾಜರಿದ್ದರಲ್ಲದೆ ಸಿನಿಮಾ ಚೆನ್ನಾಗಿ ಬಂದಿದೆಯೆಂದೂ ಗೆಲ್ಲುವ ಭರವಸೆ ಇದೆಯೆಂದೂ ಹೇಳಿದರು. ಸಿನಿಮಾ ಜುಲೈ 28ಕ್ಕೆ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Fri, 14 July 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ