AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ರಾಜ್​ಕುಮಾರ್​ ನಟನೆಯ ‘ಪೆಪೆ’ ಸಿನಿಮಾ ‘ಕೆಆರ್‌ಜಿ’ ಮೂಲಕ ಸದ್ಯದಲ್ಲೇ ರಿಲೀಸ್​

ನಟ ವಿನಯ್ ರಾಜ್‌ಕುಮಾರ್ ಅವರು ಇಲ್ಲಿಯವರೆಗೆ ಕ್ಲಾಸ್​ ಆದಂತಹ ಪಾತ್ರಗಳನ್ನು ಮಾಡಿದ್ದೇ ಹೆಚ್ಚು. ಈಗ ಅವರು ‘ಪೆಪೆ’ ಸಿನಿಮಾದಲ್ಲಿ ಮಾಸ್​ ಪಾತ್ರ ಮಾಡಿದ್ದಾರೆ. ರಗಡ್​ ಲುಕ್​ನಲ್ಲಿ ಅವರು ಜನರ ಎದುರು ಬರಲಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ತೆರೆಕಾಣಲಿದೆ. ಈ ಚಿತ್ರದ ವಿತರಣೆ ಹಕ್ಕನ್ನು ‘ಕೆಆರ್‌ಜಿ ಸ್ಟುಡಿಯೋಸ್’ ಸಂಸ್ಥೆ ಪಡೆದುಕೊಂಡಿದೆ.

ವಿನಯ್​ ರಾಜ್​ಕುಮಾರ್​ ನಟನೆಯ ‘ಪೆಪೆ’ ಸಿನಿಮಾ ‘ಕೆಆರ್‌ಜಿ’ ಮೂಲಕ ಸದ್ಯದಲ್ಲೇ ರಿಲೀಸ್​
ವಿನಯ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Aug 11, 2024 | 3:31 PM

Share

ಕನ್ನಡ ಚಿತ್ರರಂಗದ ಯುವ ನಟ ವಿನಯ್ ರಾಜ್​ಕುಮಾರ್ ಅವರು ಬೇರೆ ಬೇರೆ ಬಗೆಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಟಿಸಿರುವ ‘ಪೆಪೆ’ ಸಿನಿಮಾ ಒಂದಷ್ಟು ಕಾರಣಗಳಿಂದ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ರಿಲೀಸ್​ಗೆ ಸಜ್ಜಾಗಿರುವ ಈ ಸಿನಿಮಾ ಬಗ್ಗೆ ಇನ್ನೊಂದು ನ್ಯೂಸ್​ ಸಿಕ್ಕಿದೆ. ಈ ಚಿತ್ರವನ್ನು ವಿತರಣೆ ಮಾಡಲು ‘ಕೆಆರ್​ಜಿ’ ಸಂಸ್ಥೆ ಮುಂದೆ ಬಂದಿದೆ. ಹೌದು, ‘ಕೆಆರ್‌ಜಿ ಸ್ಟುಡಿಯೋಸ್’ ಮೂಲಕ ‘ಪೆಪೆ’ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ. ರಾಜ್ ಅವರು ರಾಜ್ಯಾದ್ಯಂತ ವಿತರಣೆ ಮಾಡಲಿದ್ದಾರೆ.

‘ಪೆಪೆ’ ಮತ್ತು ‘ಕೆಆರ್​ಜಿ ಸ್ಟುಡಿಯೋಸ್’ ಕೈ ಜೋಡಿಸಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಇಷ್ಟು ದಿನ ಕ್ಲಾಸ್ ಹೀರೋ ಪಾತ್ರಗಳಲ್ಲಿ ಸೈ ಎನಿಸಿಕೊಂಡ ವಿನಯ್ ರಾಜ್​ಕುಮಾರ್​ ಅವರು ಈಗ ‘ಪೆಪೆ’ ಸಿನಿಮಾದಲ್ಲಿ ಮಾಸ್ ಗೆಟಪ್​ ತಾಳಿದ್ದಾರೆ. ಇದು ಕೂಡ ಸಿನಿಮಾದ ವಿಶೇಷತೆಗಳಲ್ಲಿ ಒಂದು. ಈಗಾಗಲೇ ಹೊರಬಂದಿರುವ ಟೈಟಲ್​ ಸಾಂಗ್​ ಸದ್ದು ಮಾಡಿದೆ.

ಇದನ್ನೂ ಓದಿ: ‘ಓಂ’ ಕ್ಲೈಮ್ಯಾಕ್ಸ್​ನಲ್ಲಿ ವಿನಯ್ ರಾಜ್​ಕುಮಾರ್-ಯುವ ಇದ್ರು; ಯಾವ ದೃಶ್ಯ ಎಂದು ಊಹಿಸುತ್ತೀರಾ?

ಸದ್ಯದಲ್ಲೇ ‘ಪೆಪೆ’ ಸಿನಿಮಾ ಬಿಡುಗಡೆ ಆಗಲಿದೆ. ರವಿವರ್ಮ, ಡಿಫರೆಂಟ್‌ ಡ್ಯಾನಿ, ಚೇತನ್‌ ಡಿಸೋಜಾ, ನರಸಿಂಹ ಅವರು ಈ ಸಿನಿಮಾಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ಮೈಸೂರು, ಬೆಂಗಳೂರು, ಕೊಡಗು, ಸಕಲೇಶಪುರ ಮುಂತಾದೆಡೆ ಸಿನಿಮಾದ ಶೂಟಿಂಗ್​ ನಡೆದಿದೆ. ‘ಉದಯ್‌ ಸಿನಿ ವೆಂಚರ್‌’, ‘ದೀಪಾ ಫಿಲ್ಮ್ಸ್ ಬ್ಯಾನರ್‌’ ಮೂಲಕ ಉದಯ್ ಶಂಕರ್ ಎಸ್. ಮತ್ತು ಬಿ.ಎಮ್. ಶ್ರೀರಾಮ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

‘ಪೆಪೆ’ ಸಿನಿಮಾಗೆ ಶ್ರೀಲೇಶ್ ಎಸ್. ನಾಯರ್ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ಡಿಫರೆಂಟ್​ ಆದಂತಹ ಸಿನಿಮಾವನ್ನು ಅವರು ಪ್ರೇಕ್ಷಕರಿಗೆ ನೀಡುವ ಭರವಸೆ ನೀಡಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ಅವರು ನಟಿಸಿದ್ದಾರೆ. ಮಯೂರ್‌ ಪಟೇಲ್‌, ಬಲ ರಾಜ್‌ವಾಡಿ, ಯಶ್‌ ಶೆಟ್ಟಿ, ಮೇದಿನಿ ಕೆಳಮನೆ, ನವೀನ್‌ ಡಿ. ಪಡೀಲ್‌, ಅರುಣಾ ಬಾಲರಾಜ್‌ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಅಭಿಷೇಕ್‌ ಜಿ. ಕಾಸರಗೋಡು ಅವರು ಛಾಯಾಗ್ರಹಣ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!