AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್​ಜಿ ಸ್ಟುಡಿಯೋಸ್ ಪಾದಾರ್ಪಣೆ

KRG Studios: ಕನ್ನಡ ಚಿತ್ರರಂಗದಲ್ಲಿ ಕೆಲ ಹೊಸ ಪ್ರಯತ್ನಗಳನ್ನು ಮಾಡುತ್ತಿರುವ ಕೆಆರ್​ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಇದೀಗ ಪರಭಾಷೆಗೂ ಕಾಲಿರಿಸಿದೆ.

ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್​ಜಿ ಸ್ಟುಡಿಯೋಸ್ ಪಾದಾರ್ಪಣೆ
ಮಂಜುನಾಥ ಸಿ.
|

Updated on: Feb 29, 2024 | 10:57 PM

Share

ಕನ್ನಡ ಚಿತ್ರರಂಗದಲ್ಲಿ (Sandalwood) ಹೊಸ ಪ್ರಯತ್ನಗಳನ್ನು ಮಾಡುತ್ತಿರುವ ನಿರ್ಮಾಣ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್. ಸಿನಿಮಾ ನಿರ್ಮಾಣದ ಜೊತೆಗೆ ಸಿನಿಮಾ ವಿತರಣೆಯನ್ನೂ ಮಾಡುತ್ತಿರುವ ಈ ಸಂಸ್ಥೆ ಈಗಾಗಲೇ ಕೆಲವು ಒಳ್ಳೆಯ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ, ನೀಡುವ ಹಾದಿಯಲ್ಲಿದೆ. ಇದೀಗ ಕೆಆರ್​ಜಿ ಸ್ಟುಡಿಯೋಸ್ ಪರಭಾಷೆಗೂ ಕಾಲಿಟ್ಟಿದ್ದು, ಪರಭಾಷೆಯ ಸಿನಿಮಾ ಒಂದರ ಮೇಲೆ ಬಂಡವಾಳ ತೊಡಗಿಸುತ್ತಿದೆ.

‘ಸೂಫಿಯುಂ ಸುಜಾತಯುಂ‘, ‘‌ಹೋಮ್‘, ‘ಅಂಗಮಲೇ ಬಾಯ್ಸ್‘ ನಂತಹ ಯಶಸ್ವಿ ಮಲಯಾಳಂ ಚಿತ್ರಗಳನ್ನು ನೀಡಿರುವ ಫ್ರೈಡೇ ಫಿಲಂ ಹೌಸ್ ಜೊತೆಗೆ ಕೈ ಜೋಡಿಸಿರುವ ಕೆಆರ್​ಜಿ ‘ಪಡಕ್ಕಲಂ’ ಎಂಬ ಮಲಯಾಳಂ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಕ್ಕೆ ಚಿತ್ರಕತೆಯನ್ನು ಮನು ಸ್ವರಾಜ್ ಬರೆದಿದ್ದು ನಿರ್ದೇಶನವನ್ನೂ ಅವರೇ ಮಾಡುತ್ತಿದ್ದಾರೆ. ಬಾಸಿಲ್ ಜೋಸೆಫ್ ಅಂಥಹಾ ಖ್ಯಾತ ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ಖ್ಯಾತಿ ಮನು ಸ್ವರಾಜ್ ಅವರಿಗಿದೆ.

ಇದನ್ನೂ ಓದಿ:ಗುಣಮಟ್ಟದ ಭಿನ್ನ ಕತೆಗಳಿಗಾಗಿ ಟಿವಿಎಫ್​ ಜೊತೆ ಕೆಆರ್​ಜಿ ಸಹಭಾಗಿತ್ವ

ಕೆ ಆರ್ ಜಿ ಸ್ಟುಡಿಯೋಸ್ ಮತ್ತು ಫ್ರೈಡೇ ಫಿಲಮ್ ಹೌಸ್ ಸಹಯೋಗದಲ್ಲಿ ಈಗಾಗಲೇ ಮೂಡಿ ಬಂದಿರುವ ‘ಅಬ್ಬಬ್ಬ’ ಹಾಸ್ಯಭರಿತ ಕನ್ನಡ ಚಿತ್ರ, ‘ವಾಲಟಿ’ ಎಂಬ ಮಲಯಾಳಂ ಚಿತ್ರದ ಕನ್ನಡ ಡಬ್ಬಿಂಗ್ ಹಾಗೂ ಬಿಡುಗಡೆ ಎಲ್ಲೆಡೆ ಸದ್ದು ಮಾಡಿತ್ತು. ಇನ್ನು ಹೆಸರಾಂತ ಹಿಂದಿ ಚಿತ್ರ ನಿರ್ಮಾಣ ಸಂಸ್ಥೆಯಾದ ಟಿ.ವಿ.ಎಫ್ ಜೊತೆಗೆ ಕೈಜೋಡಿಸಿರುವ ಕೆಆರ್​ಜಿ ‘ಪೌಡರ್’ ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸುತ್ತಿದ್ದು ಶೀಘ್ರವೇ ಆ ಸಿನಿಮಾ ಸಹ ಬಿಡುಗಡೆ ಆಗಲಿದೆ. ‘ಪೌಡರ್’ ಸಿನಿಮಾದಲ್ಲಿ ದಿಗಂತ್ ಮಂಚಾಲೆ ನಾಯಕರಾಗಿ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ‘ಬ್ಯಾಂಗಳೂರು ಡೇಸ್’, ‘ಉಸ್ತಾದ್ ಹೊಟೇಲ್’ ಸಿನಿಮಾಗಳನ್ನು ನಿರ್ದೇಶಿಸಿರುವ ಅಂಜಲಿ ಮೆನನ್ ನಿರ್ದೇಶನದಲ್ಲಿ ತಮಿಳು ಚಿತ್ರವೊಂದನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಕಾಲಿಡಲಿದೆ ಕೆಆರ್​ಜಿ.

ಇನ್ನು ಇಂತಹ ಅನೇಕ ಹೊಸ ಕಥಾ ವಸ್ತುವನ್ನು ಚಿತ್ರರಂಗಕ್ಕೆ ಪರಿಚಯಿಸುವ ಪ್ರಯತ್ನವನ್ನು ಕೆಆರ್​ಜಿ ಸ್ಟುಡಿಯೋಸ್ ಮಾಡುತ್ತಿದೆ. ಅಲ್ಲದೆ ಪರಭಾಷೆಯ ಹಾಗೂ ಕನ್ನಡದ ಕೆಲವು ಪ್ರತಿಭಾವಂತ ಬರಹಗಾರರನ್ನು, ತಂತ್ರಜ್ಞರನ್ನು ಒಟ್ಟಿಗೆ ಸೇರಿಸುವ ಕೆಲಸವನ್ನು ಸಹ ಕೆಆರ್​ಜಿ ಮಾಡುತ್ತಿದೆ. ಈ ಮೂಲಕ ಕನ್ನಡ ಚಿತ್ರಗಳ ಮಾರ್ಕೆಟಿಂಗ್ ವ್ಯಾಪ್ತಿಯನ್ನು ಹೊರ ರಾಜ್ಯಗಳಲ್ಲಿ ವಿಸ್ತರಿಸುವ ಪ್ರಯತ್ನ ಮಾಡುತ್ತಿದೆ. ಸದ್ಯಕ್ಕೆ ಕೆಆರ್ ಜಿ ಬ್ಯಾನರ್ ನಲ್ಲಿ ‘ಪೌಡರ್’, ‘ಉತ್ತರಕಾಂಡ’, ‘ಕಿರಿಕೆಟ್ 11’, ‘ಕೆ.ಕೆ’ ಮುಂತಾದ ಸಿನಿಮಾಗಳು ತಯಾರಾಗುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ