AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾ ನಿರ್ಮಾಣಕ್ಕೆ ಮುಂದಾದ ಕನ್ನಡದ ‘ಕೆಆರ್​ಜಿ ಸ್ಟುಡಿಯೋಸ್’

ಮಲಯಾಲಂನಲ್ಲಿ ‘ಫ್ರೈಡೇ ಫಿಲ್ಮ್​ ಹೌಸ್’ ಸಾಕಷ್ಟು ಹೆಸರು ಮಾಡಿದೆ. ‘ಸೂಫಿಯುಂ ಸುಜಾತಯುಂ’, ‘‌ಹೋಮ್’ ಅಂಥ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆ ಜೊತೆ ‘ಕೆಆರ್​ಜಿ’ ಸ್ಟುಡಿಯೋ ಸಹಯೋಗ ಬೆಳೆಸಿ ಮಲಯಾಳಂ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಗೆ ಮನು ಸ್ವರಾಜ್ ನಿರ್ದೇಶನ ಇರಲಿದೆ.

ಮಲಯಾಳಂ ಸಿನಿಮಾ ನಿರ್ಮಾಣಕ್ಕೆ ಮುಂದಾದ ಕನ್ನಡದ ‘ಕೆಆರ್​ಜಿ ಸ್ಟುಡಿಯೋಸ್’
ಕೆಆರ್​ಜಿ
ರಾಜೇಶ್ ದುಗ್ಗುಮನೆ
|

Updated on: Mar 02, 2024 | 10:54 AM

Share

ಕನ್ನಡದ ನಿರ್ಮಾಣ ಸಂಸ್ಥೆಗಳು ಪರಭಾಷೆಗೆ ಲಗ್ಗೆ ಇಟ್ಟು ಮೆಚ್ಚುಗೆಗೆ ಪಾತ್ರವಾಗುವಂಥ ಸಿನಿಮಾಗಳನ್ನು ಮಾಡುತ್ತಿವೆ. ‘ಹೊಂಬಾಳೆ ಫಿಲ್ಮ್ಸ್’ ಈಗಾಗಲೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ನಿರ್ಮಿಸುತ್ತಿದೆ. ಅದೇ ರೀತಿ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ. ರಾಜ್‍ ಒಡೆತನದ ಕೆಆರ್​ಜಿ ಸ್ಟುಡಿಯೋಸ್‍ ಕೂಡ ಕನ್ನಡದ ಜೊತೆ ಪರಭಾಷೆಯಲ್ಲೂ ಸಿನಿಮಾ ನಿರ್ಮಾಣ ಮಾಡುತ್ತಿವೆ. ಇತ್ತೀಚೆಗೆ ತಮಿಳಿನಲ್ಲಿ ಅವರು ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಮಲಯಾಳಂ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದಾರೆ.

ಮಲಯಾಲಂನಲ್ಲಿ ‘ಫ್ರೈಡೇ ಫಿಲ್ಮ್​ ಹೌಸ್’ ಸಾಕಷ್ಟು ಹೆಸರು ಮಾಡಿದೆ. ‘ಸೂಫಿಯುಂ ಸುಜಾತಯುಂ’, ‘‌ಹೋಮ್’ ಅಂಥ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆ ಜೊತೆ ‘ಕೆಆರ್​ಜಿ’ ಸ್ಟುಡಿಯೋ ಸಹಯೋಗ ಬೆಳೆಸಿ ಮಲಯಾಳಂ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಗೆ ಮನು ಸ್ವರಾಜ್ ನಿರ್ದೇಶನ ಇರಲಿದೆ.

ಕೆಆರ್​ಜಿ ಸ್ಟುಡಿಯೋಸ್ 2017ರಲ್ಲಿ ಹಂಚಿಕೆ ಆರಂಭಿಸಿತು. ಆ ಬಳಿಕ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ಹಂಚಿಕೆ ಮಾಡಿದ್ದಾರೆ. 2021ರಲ್ಲಿ ಇವರು ನಿರ್ಮಾಣಕ್ಕೆ ಇಳಿದರು. ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಇವರು ನಿರ್ಮಾಣ ಆರಂಭಿಸಿದರು. ನಂತರ ‘ಗುರುದೇವ ಹೊಯ್ಸಳ’ ಸಿನಿಮಾ ನಿರ್ಮಾಣ ಮಾಡಿದರು. ಈಗ ಕೆಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್​ಜಿ ಸ್ಟುಡಿಯೋಸ್ ಪಾದಾರ್ಪಣೆ

ಈ ಮೊದಲು ‘ಕೆಆರ್​ಜಿ ಸ್ಟುಡಿಯೋಸ್’ ಮಲಯಾಳಂ ಸಿನಿಮಾ ‘ವಾಲಟಿ’ಯನ್ನು ಕನ್ನಡಕ್ಕೆ ಡಬ್ ಮಾಡಿ ಹಂಚಿಕೆ ಹಕ್ಕನ್ನು ಪಡೆದಿತ್ತು. ಈಗ ಮಲಯಾಳಂನಲ್ಲಿ ಸಿನಿಮಾ ನಿರ್ಮಾಣ ಮಾಡಿ ಅಲ್ಲಿನ ಚಿತ್ರರಂಗದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಂತೆ ಆಗಿದೆ. 2023ರಲ್ಲಿ ‘ಕೆಆರ್​ಜಿ ಸ್ಟುಡಿಯೋಸ್’ ಹಲವು ಸಿನಿಮಾಗಳನ್ನು ಹಂಚಿಕೆ ಮಾಡಿದೆ. ಕನ್ನಡದಲ್ಲಿ ‘ಪೌಡರ್’, ‘ಕಿರಿಕೆಟ್ 11’, ‘ಉತ್ತರಕಾಂಡ’ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ