AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾ ನಿರ್ಮಾಣಕ್ಕೆ ಮುಂದಾದ ಕನ್ನಡದ ‘ಕೆಆರ್​ಜಿ ಸ್ಟುಡಿಯೋಸ್’

ಮಲಯಾಲಂನಲ್ಲಿ ‘ಫ್ರೈಡೇ ಫಿಲ್ಮ್​ ಹೌಸ್’ ಸಾಕಷ್ಟು ಹೆಸರು ಮಾಡಿದೆ. ‘ಸೂಫಿಯುಂ ಸುಜಾತಯುಂ’, ‘‌ಹೋಮ್’ ಅಂಥ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆ ಜೊತೆ ‘ಕೆಆರ್​ಜಿ’ ಸ್ಟುಡಿಯೋ ಸಹಯೋಗ ಬೆಳೆಸಿ ಮಲಯಾಳಂ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಗೆ ಮನು ಸ್ವರಾಜ್ ನಿರ್ದೇಶನ ಇರಲಿದೆ.

ಮಲಯಾಳಂ ಸಿನಿಮಾ ನಿರ್ಮಾಣಕ್ಕೆ ಮುಂದಾದ ಕನ್ನಡದ ‘ಕೆಆರ್​ಜಿ ಸ್ಟುಡಿಯೋಸ್’
ಕೆಆರ್​ಜಿ
ರಾಜೇಶ್ ದುಗ್ಗುಮನೆ
|

Updated on: Mar 02, 2024 | 10:54 AM

Share

ಕನ್ನಡದ ನಿರ್ಮಾಣ ಸಂಸ್ಥೆಗಳು ಪರಭಾಷೆಗೆ ಲಗ್ಗೆ ಇಟ್ಟು ಮೆಚ್ಚುಗೆಗೆ ಪಾತ್ರವಾಗುವಂಥ ಸಿನಿಮಾಗಳನ್ನು ಮಾಡುತ್ತಿವೆ. ‘ಹೊಂಬಾಳೆ ಫಿಲ್ಮ್ಸ್’ ಈಗಾಗಲೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ನಿರ್ಮಿಸುತ್ತಿದೆ. ಅದೇ ರೀತಿ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ. ರಾಜ್‍ ಒಡೆತನದ ಕೆಆರ್​ಜಿ ಸ್ಟುಡಿಯೋಸ್‍ ಕೂಡ ಕನ್ನಡದ ಜೊತೆ ಪರಭಾಷೆಯಲ್ಲೂ ಸಿನಿಮಾ ನಿರ್ಮಾಣ ಮಾಡುತ್ತಿವೆ. ಇತ್ತೀಚೆಗೆ ತಮಿಳಿನಲ್ಲಿ ಅವರು ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಮಲಯಾಳಂ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದಾರೆ.

ಮಲಯಾಲಂನಲ್ಲಿ ‘ಫ್ರೈಡೇ ಫಿಲ್ಮ್​ ಹೌಸ್’ ಸಾಕಷ್ಟು ಹೆಸರು ಮಾಡಿದೆ. ‘ಸೂಫಿಯುಂ ಸುಜಾತಯುಂ’, ‘‌ಹೋಮ್’ ಅಂಥ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆ ಜೊತೆ ‘ಕೆಆರ್​ಜಿ’ ಸ್ಟುಡಿಯೋ ಸಹಯೋಗ ಬೆಳೆಸಿ ಮಲಯಾಳಂ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಗೆ ಮನು ಸ್ವರಾಜ್ ನಿರ್ದೇಶನ ಇರಲಿದೆ.

ಕೆಆರ್​ಜಿ ಸ್ಟುಡಿಯೋಸ್ 2017ರಲ್ಲಿ ಹಂಚಿಕೆ ಆರಂಭಿಸಿತು. ಆ ಬಳಿಕ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ಹಂಚಿಕೆ ಮಾಡಿದ್ದಾರೆ. 2021ರಲ್ಲಿ ಇವರು ನಿರ್ಮಾಣಕ್ಕೆ ಇಳಿದರು. ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಇವರು ನಿರ್ಮಾಣ ಆರಂಭಿಸಿದರು. ನಂತರ ‘ಗುರುದೇವ ಹೊಯ್ಸಳ’ ಸಿನಿಮಾ ನಿರ್ಮಾಣ ಮಾಡಿದರು. ಈಗ ಕೆಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್​ಜಿ ಸ್ಟುಡಿಯೋಸ್ ಪಾದಾರ್ಪಣೆ

ಈ ಮೊದಲು ‘ಕೆಆರ್​ಜಿ ಸ್ಟುಡಿಯೋಸ್’ ಮಲಯಾಳಂ ಸಿನಿಮಾ ‘ವಾಲಟಿ’ಯನ್ನು ಕನ್ನಡಕ್ಕೆ ಡಬ್ ಮಾಡಿ ಹಂಚಿಕೆ ಹಕ್ಕನ್ನು ಪಡೆದಿತ್ತು. ಈಗ ಮಲಯಾಳಂನಲ್ಲಿ ಸಿನಿಮಾ ನಿರ್ಮಾಣ ಮಾಡಿ ಅಲ್ಲಿನ ಚಿತ್ರರಂಗದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಂತೆ ಆಗಿದೆ. 2023ರಲ್ಲಿ ‘ಕೆಆರ್​ಜಿ ಸ್ಟುಡಿಯೋಸ್’ ಹಲವು ಸಿನಿಮಾಗಳನ್ನು ಹಂಚಿಕೆ ಮಾಡಿದೆ. ಕನ್ನಡದಲ್ಲಿ ‘ಪೌಡರ್’, ‘ಕಿರಿಕೆಟ್ 11’, ‘ಉತ್ತರಕಾಂಡ’ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ