AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಯ್ಸಳ ಕಲೆಕ್ಷನ್ ಬಗ್ಗೆ ನಿರ್ಮಾಪಕ ಟ್ವೀಟ್, ಸ್ಪಷ್ಟ ಸಂಖ್ಯೆ ಕೊಡಿ ಎಂದ ನೆಟ್ಟಿಗರು

ಹೊಯ್ಸಳ ಸಿನಿಮಾ ಹಿಟ್? ಅಥವಾ ಫ್ಲಾಪ್? ಸಿನಿಮಾದ ಒಟ್ಟು ಕಲೆಕ್ಷನ್ ಎಷ್ಟು? ಕಾರ್ತಿಕ್ ಗೌಡ ಟ್ವೀಟ್ ಬಳಿಕ ಸ್ಪಷ್ಟ ಸಂಖ್ಯೆ ಕೇಳಿದ ನೆಟ್ಟಿಗರು.

ಹೊಯ್ಸಳ ಕಲೆಕ್ಷನ್ ಬಗ್ಗೆ ನಿರ್ಮಾಪಕ ಟ್ವೀಟ್, ಸ್ಪಷ್ಟ ಸಂಖ್ಯೆ ಕೊಡಿ ಎಂದ ನೆಟ್ಟಿಗರು
ಹೊಯ್ಸಳ
ಮಂಜುನಾಥ ಸಿ.
|

Updated on: Apr 09, 2023 | 8:19 PM

Share

ಡಾಲಿ ಧನಂಜಯ್ (Daali Dhananjay) ನಟನೆಯ ಹೊಯ್ಸಳ (Hoysala) ಸಿನಿಮಾ ಬಿಡುಗಡೆ ಆಗಿ ಎರಡು ವಾರಗಳು ಕಳೆದಿವೆ. ಸಿನಿಮಾದ ಉತ್ತಮ ಪ್ರತಿಕ್ರಿಯೆಯೇ ವ್ಯಕ್ತವಾಗಿತ್ತು. ಆದರೆ ಸಿನಿಮಾದ ಕಲೆಕ್ಷನ್ (Collection) ಬಗ್ಗೆ ಮಿಶ್ರ ಅಭಿಪ್ರಾಯಗಳು ಹೊರಹೊಮ್ಮಿದ್ದವು. ಸಿನಿಮಾದ ಕಲೆಕ್ಷನ್ ಸೂಪರ್ ಎಂದು ಕೆಲವೆರೆಂದರೆ, ಆವರೇಜ್ ಎಂದು ಇನ್ನು ಕೆಲವರೆಂದರು. ಈ ನಡುವೆ ಸಿನಿಮಾದ ಕಲೆಕ್ಷನ್ ಬಗ್ಗೆ ನಿರ್ಮಾಪಕರಲ್ಲೊಬ್ಬರಾದ ಕಾರ್ತಿಕ್ ಗೌಡ (Karthik Gowda)

ಆಗಿದ್ದಿಷ್ಟು, ಹೊಯ್ಸಳ ಸಿನಿಮಾದ ಕಲೆಕ್ಷನ್ 2.60 ರಿಂದ 2.90 ಕೋಟಿ ಆಗಿದೆ ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. ಆ ಟ್ವೀಟ್​ಗೆ ಪ್ರತಿಕ್ರಿಯಿಸಿದ ನಿರ್ಮಾಪಕ ಕಾರ್ತಿಕ್ ಗೌಡ, ಅದಕ್ಕಿಂತಲೂ ಹೆಚ್ಚು ಕಲೆಕ್ಷನ್ ಆಗಿದೆ ಎಂದಿದ್ದರು. ಆದರೆ ಕಾರ್ತಿಕ್ ಗೌಡರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಕೆಲವರು ಹಾಗಿದ್ದರೆ ಸರಿಯಾದ ಕಲೆಕ್ಷನ್ ಮೊತ್ತ ಎಷ್ಟು ಎಂಬುದನ್ನು ನೀವೇ ತಿಳಿಸಿ ಎಂದು ಒತ್ತಾಯಿಸಿದ್ದರು. ಇದೀಗ ಸ್ವತಃ ಕೆಆರ್​ಜಿ ಸ್ಟುಡಿಯೋಸ್, ಹೊಯ್ಸಳ ಸಿನಿಮಾ ಹಿಟ್ ಆಗಿರುವ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು, ಚಿತ್ರ ಎರಡನೆಯ ವಾರಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಚುನಾವಣೆಗಳ ಕಾವು ಮತ್ತು ಐಪಿಎಲ್ ಜ್ವರದ ನಡುವೆಯೂ ಚಿತ್ರಕ್ಕೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಡಿ ಗೆಲ್ಲಿಸಿದ್ದಾರೆ. ಈ ಪ್ರಶಂಸೆಯಿಂದ ನಮ್ಮ ತಂಡಕ್ಕೆ ಸಾರ್ಥಕ್ಯದ ಭಾವ ಮೂಡಿದೆ. ನಮ್ಮ ಕೆ ಆರ್ ಜಿ ಸ್ಟುಡಿಯೋಸ್ ನ ಎರಡನೆಯ ಚಿತ್ರಕ್ಕೂ ಜನಮನ್ನಣೆ ಸಿಕ್ಕಿರುವುದು ನಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮರ್ಯಾದೆ ಹತ್ಯೆ ಎಂಬ ಗಹನವಾದ ಸಮಸ್ಯೆಯ ಕುರಿತ ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ನಮಗೆ ಈ ತರಹದ ಇನ್ನಷ್ಟು ಸೂಕ್ಷ್ಮ ಸಂವೇದನೆಯ ಚಿತ್ರಗಳನ್ನು ನಿರ್ಮಿಸುವುದಕ್ಕೆ ಪ್ರೇರೇಪಿಸಿದೆ ಎಂದಿದ್ದಾರೆ.

ನಮ್ಮ ಎರಡೂ ಚಿತ್ರಗಳ ಯಶಸ್ಸಿನ ಬೆನ್ನಲ್ಲೆ ನಮ್ಮ ಸಂಸ್ಥೆಯ ಮೂರನೆಯ ಪ್ರಯತ್ನವಾದ ಉತ್ತರಕಾಂಡ ಚಿತ್ರವನ್ನು ಸದ್ಯದಲ್ಲೇ ಶುರು ಮಾಡಲಿದ್ದೇವೆ. ಉತ್ತರ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಡೆಯುವ ಈ ಕಥೆಯಲ್ಲೂ ಧನಂಜಯ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನಷ್ಟು ಚಿತ್ರಗಳನ್ನು ನಮ್ಮ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ಘೋಷಣೆಯಾಗಲಿದೆ. ನಮ್ಮ ಈ ಗೆಲುವಿನಲ್ಲಿ ಸಿನಿಮಾ ಪ್ರೇಮಿಗಳು ಮತ್ತು ಮಾಧ್ಯಮದವರ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಮುಂದಿನ ಕನಸುಗಳಿಗೆ ಅವರೇ ಸ್ಫೂರ್ತಿ ಎಂದರೆ ತಪ್ಪಿಲ್ಲ. ಜತೆಗೆ ವಿಮರ್ಶಕರು, ಸೋಷಿಯಲ್ ಮೀಡಿಯಾದ ಇನ್ಫ್ಲೂಯೆನ್ಸ್ ಪ್ರೋತ್ಸಾಹ ಮತ್ತು ಸಿನಿಮಾ ಪ್ರೀತಿ ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ನಮಗೆ ಸಲಹೆ, ಸೂಚನೆ ಮತ್ತು ಅಪರಿಮಿತ ಪ್ರೀತಿ ತೋರಿಸುತ್ತಾ ಬಂದಿರುವ ಸಹೋದರರಾದ ವಿಜಯ್ ಕಿರಗಂದೂರು ಮತ್ತು ನನ್ನ ಎಲ್ಲ ಹಿತೈಷಿಗಳಿಗೂ ನಾನು ಚಿರಋಣಿ. ಇಂದು ಕೆ ಆರ್ ಜಿ ಸ್ಟುಡಿಯೋಸ್ ಮತ್ತು ಕೆ ಆರ್ ಜಿ ಕನೆಕ್ಟ್ಸ್ ಈ ಹಂತಕ್ಕೆ ಬೆಳೆಯುತ್ತಿರುವುದಕ್ಕೆ ನಮ್ಮ ತಂಡದ ಪ್ರೀತಿ ಮತ್ತು ಪರಿಶ್ರಮ ಸಹ ಕಾರಣ. ಮುಂದಿನ ದಿನಗಳಲ್ಲಿ ನಿಮ್ಮನ್ನು ಇನ್ನಷ್ಟು ಮನರಂಜಿಸುವುದಕ್ಕೆ ಉತ್ಸುಕರಾಗಿದ್ದೇವೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!