AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ

KRG Studios: ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಕಾರ್ತಿಕ್​ ಗೌಡ ತಿಳಿಸಿದ್ದಾರೆ.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 13, 2023 | 8:06 AM

Share

ಜೂನ್​ 16ರಂದು ‘ಆದಿಪುರುಷ್​’ ಸಿನಿಮಾ (Adipurush Movie) ಬಹಳ ಗ್ರ್ಯಾಂಡ್​ ಆಗಿ ರಿಲೀಸ್​ ಆಗಲಿದೆ. ಈ ಸಿನಿಮಾ ಮೇಲೆ ಪ್ರಭಾಸ್​ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಕಾತುರರಾಗಿದ್ದಾರೆ. ಈ ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ಕೆಆರ್​ಜಿ ಸ್ಟುಡಿಯೋಸ್​ (KRG Studios) ಸಂಸ್ಥೆ ಕಡೆಯುಂದ ಈಗ ಒಂದು ಮಸ್ತ್​ ನ್ಯೂಸ್​ ಸಿಕ್ಕಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ‘ಆದಿಪುರುಷ್​’ ಸಿನಿಮಾದ ಪ್ರೀಮಿಯರ್​ ಶೋ ನಡೆಸಲು ಕೆಆರ್​ಜಿ ಸ್ಟುಡಿಯೋಸ್​ ಸಂಸ್ಥೆ ತೀರ್ಮಾನಿಸಿದೆ. ಈ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ (Karthik Gowda) ಮಾಹಿತಿ ಹಂಚಿಕೊಂಡಿದ್ದಾರೆ. ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸೆಲೆಬ್ರಿಟಿ ಶೋ ನಡೆದರೆ ‘ಆದಿಪುರುಷ್​’ ಚಿತ್ರಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗುತ್ತದೆ. ‘ಕೆಜಿಎಫ್​ ಸ್ಟುಡಿಯೋಸ್​’ ಜೊತೆ ಅನೇಕ ನಟ-ನಟಿಯರು, ನಿರ್ದೇಶಕರು ನಂಟು ಹೊಂದಿದ್ದಾರೆ. ರಮ್ಯಾ, ಡಾಲಿ ಧನಂಜಯ್​, ಯಶ್​, ರಾಧಿಕಾ ಪಂಡಿತ್​, ಜಗ್ಗೇಶ್​, ಸಂತೋಷ್​ ಆನಂದ್​ರಾಮ್​, ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಯುವ ರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಪ್ರೀಮಿಯರ್ ಶೋನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಸಿಗಬೇಕಿದೆ.

ಈಗಾಗಲೇ ‘ಆದಿಪುರುಷ್​’ ಚಿತ್ರದ ಬುಕ್ಕಿಂಗ್​ ಓಪನ್​ ಆಗಿದೆ. ಮೊದಲ ದಿನ ಕರ್ನಾಟಕದಲ್ಲಿ ಹಾಗೂ ವಿಶ್ವಾದ್ಯಂತ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಓಂ ರಾವತ್​ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ಮತ್ತು ಕೃತಿ ಸನೋನ್​ ಅವರು ರಾಮ-ಸೀತೆಯ ಪಾತ್ರ ಮಾಡಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನಾಗಿ ಕಾಣಿಸಿಕೊಂಡಿದ್ದಾರೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ. ಸೈಫ್​ ಅಲಿ ಖಾನ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಸಿನಿಮಾದ ಬಗ್ಗೆ ಭಾರಿ ಹೈಪ್​ ಕ್ರಿಯೇಟ್​ ಆಗಿದೆ.

ಇದನ್ನೂ ಓದಿ: ಒಂದೇ ದಿನದಲ್ಲಿ 39,000 ಟಿಕೆಟ್​ಗಳ ಮಾರಾಟ: ಕೆಜಿಎಫ್ 2 ದಾಖಲೆ ಮುರಿಯಲಿದೆಯೇ ಆದಿಪುರುಷ್?

ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್​ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್​ ಕಪೂರ್​ ಅವರು ಬರೋಬ್ಬರಿ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಣಬೀರ್​ ಕಪೂರ್​ ರೀತಿಯೇ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್​ವಾಲ್ ಅವರು ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ‘ಆದಿಪುರುಷ್​’ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್​ ಮೀಸಲಿಡಲು ತೀರ್ಮಾನಿಸಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ