AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ

KRG Studios: ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಕಾರ್ತಿಕ್​ ಗೌಡ ತಿಳಿಸಿದ್ದಾರೆ.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 13, 2023 | 8:06 AM

Share

ಜೂನ್​ 16ರಂದು ‘ಆದಿಪುರುಷ್​’ ಸಿನಿಮಾ (Adipurush Movie) ಬಹಳ ಗ್ರ್ಯಾಂಡ್​ ಆಗಿ ರಿಲೀಸ್​ ಆಗಲಿದೆ. ಈ ಸಿನಿಮಾ ಮೇಲೆ ಪ್ರಭಾಸ್​ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಕಾತುರರಾಗಿದ್ದಾರೆ. ಈ ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ಕೆಆರ್​ಜಿ ಸ್ಟುಡಿಯೋಸ್​ (KRG Studios) ಸಂಸ್ಥೆ ಕಡೆಯುಂದ ಈಗ ಒಂದು ಮಸ್ತ್​ ನ್ಯೂಸ್​ ಸಿಕ್ಕಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ‘ಆದಿಪುರುಷ್​’ ಸಿನಿಮಾದ ಪ್ರೀಮಿಯರ್​ ಶೋ ನಡೆಸಲು ಕೆಆರ್​ಜಿ ಸ್ಟುಡಿಯೋಸ್​ ಸಂಸ್ಥೆ ತೀರ್ಮಾನಿಸಿದೆ. ಈ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ (Karthik Gowda) ಮಾಹಿತಿ ಹಂಚಿಕೊಂಡಿದ್ದಾರೆ. ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸೆಲೆಬ್ರಿಟಿ ಶೋ ನಡೆದರೆ ‘ಆದಿಪುರುಷ್​’ ಚಿತ್ರಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗುತ್ತದೆ. ‘ಕೆಜಿಎಫ್​ ಸ್ಟುಡಿಯೋಸ್​’ ಜೊತೆ ಅನೇಕ ನಟ-ನಟಿಯರು, ನಿರ್ದೇಶಕರು ನಂಟು ಹೊಂದಿದ್ದಾರೆ. ರಮ್ಯಾ, ಡಾಲಿ ಧನಂಜಯ್​, ಯಶ್​, ರಾಧಿಕಾ ಪಂಡಿತ್​, ಜಗ್ಗೇಶ್​, ಸಂತೋಷ್​ ಆನಂದ್​ರಾಮ್​, ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಯುವ ರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಪ್ರೀಮಿಯರ್ ಶೋನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಸಿಗಬೇಕಿದೆ.

ಈಗಾಗಲೇ ‘ಆದಿಪುರುಷ್​’ ಚಿತ್ರದ ಬುಕ್ಕಿಂಗ್​ ಓಪನ್​ ಆಗಿದೆ. ಮೊದಲ ದಿನ ಕರ್ನಾಟಕದಲ್ಲಿ ಹಾಗೂ ವಿಶ್ವಾದ್ಯಂತ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಓಂ ರಾವತ್​ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ಮತ್ತು ಕೃತಿ ಸನೋನ್​ ಅವರು ರಾಮ-ಸೀತೆಯ ಪಾತ್ರ ಮಾಡಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನಾಗಿ ಕಾಣಿಸಿಕೊಂಡಿದ್ದಾರೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ. ಸೈಫ್​ ಅಲಿ ಖಾನ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಸಿನಿಮಾದ ಬಗ್ಗೆ ಭಾರಿ ಹೈಪ್​ ಕ್ರಿಯೇಟ್​ ಆಗಿದೆ.

ಇದನ್ನೂ ಓದಿ: ಒಂದೇ ದಿನದಲ್ಲಿ 39,000 ಟಿಕೆಟ್​ಗಳ ಮಾರಾಟ: ಕೆಜಿಎಫ್ 2 ದಾಖಲೆ ಮುರಿಯಲಿದೆಯೇ ಆದಿಪುರುಷ್?

ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್​ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್​ ಕಪೂರ್​ ಅವರು ಬರೋಬ್ಬರಿ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಣಬೀರ್​ ಕಪೂರ್​ ರೀತಿಯೇ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್​ವಾಲ್ ಅವರು ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ‘ಆದಿಪುರುಷ್​’ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್​ ಮೀಸಲಿಡಲು ತೀರ್ಮಾನಿಸಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ