AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ

KRG Studios: ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಕಾರ್ತಿಕ್​ ಗೌಡ ತಿಳಿಸಿದ್ದಾರೆ.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 13, 2023 | 8:06 AM

Share

ಜೂನ್​ 16ರಂದು ‘ಆದಿಪುರುಷ್​’ ಸಿನಿಮಾ (Adipurush Movie) ಬಹಳ ಗ್ರ್ಯಾಂಡ್​ ಆಗಿ ರಿಲೀಸ್​ ಆಗಲಿದೆ. ಈ ಸಿನಿಮಾ ಮೇಲೆ ಪ್ರಭಾಸ್​ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಕಾತುರರಾಗಿದ್ದಾರೆ. ಈ ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ಕೆಆರ್​ಜಿ ಸ್ಟುಡಿಯೋಸ್​ (KRG Studios) ಸಂಸ್ಥೆ ಕಡೆಯುಂದ ಈಗ ಒಂದು ಮಸ್ತ್​ ನ್ಯೂಸ್​ ಸಿಕ್ಕಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ‘ಆದಿಪುರುಷ್​’ ಸಿನಿಮಾದ ಪ್ರೀಮಿಯರ್​ ಶೋ ನಡೆಸಲು ಕೆಆರ್​ಜಿ ಸ್ಟುಡಿಯೋಸ್​ ಸಂಸ್ಥೆ ತೀರ್ಮಾನಿಸಿದೆ. ಈ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ (Karthik Gowda) ಮಾಹಿತಿ ಹಂಚಿಕೊಂಡಿದ್ದಾರೆ. ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸೆಲೆಬ್ರಿಟಿ ಶೋ ನಡೆದರೆ ‘ಆದಿಪುರುಷ್​’ ಚಿತ್ರಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗುತ್ತದೆ. ‘ಕೆಜಿಎಫ್​ ಸ್ಟುಡಿಯೋಸ್​’ ಜೊತೆ ಅನೇಕ ನಟ-ನಟಿಯರು, ನಿರ್ದೇಶಕರು ನಂಟು ಹೊಂದಿದ್ದಾರೆ. ರಮ್ಯಾ, ಡಾಲಿ ಧನಂಜಯ್​, ಯಶ್​, ರಾಧಿಕಾ ಪಂಡಿತ್​, ಜಗ್ಗೇಶ್​, ಸಂತೋಷ್​ ಆನಂದ್​ರಾಮ್​, ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಯುವ ರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಪ್ರೀಮಿಯರ್ ಶೋನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಸಿಗಬೇಕಿದೆ.

ಈಗಾಗಲೇ ‘ಆದಿಪುರುಷ್​’ ಚಿತ್ರದ ಬುಕ್ಕಿಂಗ್​ ಓಪನ್​ ಆಗಿದೆ. ಮೊದಲ ದಿನ ಕರ್ನಾಟಕದಲ್ಲಿ ಹಾಗೂ ವಿಶ್ವಾದ್ಯಂತ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಓಂ ರಾವತ್​ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ಮತ್ತು ಕೃತಿ ಸನೋನ್​ ಅವರು ರಾಮ-ಸೀತೆಯ ಪಾತ್ರ ಮಾಡಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನಾಗಿ ಕಾಣಿಸಿಕೊಂಡಿದ್ದಾರೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ. ಸೈಫ್​ ಅಲಿ ಖಾನ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಸಿನಿಮಾದ ಬಗ್ಗೆ ಭಾರಿ ಹೈಪ್​ ಕ್ರಿಯೇಟ್​ ಆಗಿದೆ.

ಇದನ್ನೂ ಓದಿ: ಒಂದೇ ದಿನದಲ್ಲಿ 39,000 ಟಿಕೆಟ್​ಗಳ ಮಾರಾಟ: ಕೆಜಿಎಫ್ 2 ದಾಖಲೆ ಮುರಿಯಲಿದೆಯೇ ಆದಿಪುರುಷ್?

ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್​ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್​ ಕಪೂರ್​ ಅವರು ಬರೋಬ್ಬರಿ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಣಬೀರ್​ ಕಪೂರ್​ ರೀತಿಯೇ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್​ವಾಲ್ ಅವರು ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ‘ಆದಿಪುರುಷ್​’ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್​ ಮೀಸಲಿಡಲು ತೀರ್ಮಾನಿಸಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ