AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಶಾಖ್ ಅಂತ್ಯಕ್ರಿಯೆಯಲ್ಲಿ ಹೈಡ್ರಾಮಾ, ನಟಿ ಕೃಷಿ ವಿರುದ್ಧ ಕುಟುಂಬಸ್ಥರ ಆಕ್ರೋಶ

Krishi Thapanda: ಅರವಿಂದ್ ರೆಡ್ಡಿ, ಕೃಷಿ ಮತ್ತು ಈಗ ಮೃತರಾಗಿರುವ ವೈಶಾಖ್ ವಿರುದ್ಧ ದೂರು ನೀಡಿದ್ದರು. ಇದೀಗ ವೈಶಾಖ್ ನಿಧನ ಹೊಂದಿದ್ದಾರೆ. ಕೃಷಿ ತಾಪಂಡ ಅವರ ಅಪಾರ್ಟ್​​ಮೆಂಟ್​​ನಲ್ಲಿಯೇ ಉದ್ಯಮಿ ವೈಶಾಖ್ ನಿಧನ ಹೊಂದಿದ್ದು, ಇದೀಗ ಗೆಳೆಯನ ಅಂತ್ಯಕ್ರಿಯೆಗೂ ಹೋಗದ ಪರಿಸ್ಥಿತಿ ಕೃಷಿ ಅವರಿಗೆ ಎದುರಾಗಿದೆ.

ವೈಶಾಖ್ ಅಂತ್ಯಕ್ರಿಯೆಯಲ್ಲಿ ಹೈಡ್ರಾಮಾ, ನಟಿ ಕೃಷಿ ವಿರುದ್ಧ ಕುಟುಂಬಸ್ಥರ ಆಕ್ರೋಶ
Krishi Thapanda
ಮಂಜುನಾಥ ಸಿ.
|

Updated on: Jun 25, 2026 | 9:03 PM

Share

ನಟಿ ಕೃಷಿ ತಾಪಂಡ (Krishi Thapanda) ಅವರ ಜೀವನದಲ್ಲಿ ಕಳೆದ ಕೆಲ ತಿಂಗಳಿಂದ ಸಾಕಷ್ಟು ಸಂಕಷ್ಟಗಳು ಎದುರಾಗಿವೆ. ಮೊದಲಿಗೆ ಉದ್ಯಮಿ ಅರವಿಂದ್ ರೆಡ್ಡಿ ಜೊತೆಗೆ ವಿವಾದ ಎದ್ದಿತ್ತು. ಅರವಿಂದ್ ರೆಡ್ಡಿ ವಿರುದ್ಧ ದೂರು ಸಹ ಕೃಷಿ ದಾಖಲಿಸಿದ್ದರು. ಆ ಬಳಿಕ ಅರವಿಂದ್ ರೆಡ್ಡಿ, ಕೃಷಿ ಮತ್ತು ಈಗ ಮೃತರಾಗಿರುವ ವೈಶಾಖ್ ವಿರುದ್ಧ ದೂರು ನೀಡಿದ್ದರು. ಇದೀಗ ವೈಶಾಖ್ ನಿಧನ ಹೊಂದಿದ್ದಾರೆ. ಕೃಷಿ ತಾಪಂಡ ಅವರ ಅಪಾರ್ಟ್​​ಮೆಂಟ್​​ನಲ್ಲಿಯೇ ಉದ್ಯಮಿ ವೈಶಾಖ್ ನಿಧನ ಹೊಂದಿದ್ದು, ಇದೀಗ ಗೆಳೆಯನ ಅಂತ್ಯಕ್ರಿಯೆಗೂ ಹೋಗದ ಪರಿಸ್ಥಿತಿ ಕೃಷಿ ಅವರಿಗೆ ಎದುರಾಗಿದೆ.

ವೈಶಾಖ್ ಅವರ ಅಂತ್ಯಕ್ರಿಯೆ ಇಂದು (ಜೂನ್ 25) ಚಾಮರಾಜನಗರದ ಚಿತಾಗಾರದಲ್ಲಿ ಅಂತ್ಯಕ್ರಿಯ ನಡೆಯಿತು. ನಟಿ ಕೃಷಿ ತಾಪಂಡ ಅಂತಿಮ ದರ್ಶನ ಪಡೆಯಲು ಬರುತ್ತಿದ್ದಂತೆ ಸ್ಥಳದಲ್ಲಿ ಹೈಡ್ರಾಮಾ ನಡೆಯಿತು. ವೈಶಾಖ್ ಕುಟುಂಬದವರು ನಟಿಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ವೈಶಾಖ್ ಅವರ ಮಾವ ಇನ್ನಿತತರರು ಸೇರಿ ನಟಿಯನ್ನು ಅಂತಿಮ ದರ್ಶನ ಪಡೆಯುವುದರಿಂದ ತಡೆದುದ್ದಲ್ಲದೆ, ನಟಿಯನ್ನು ಅಲ್ಲಿಂದ ಹೊರಗೆ ಕಳಿಸಿದರು. ಗೆಳೆಯನ ಅಂತಿಮ ದರ್ಶನ ಪಡೆಯಲಾಗದೆ, ಅಂತಿಮ ಸಂಸ್ಕಾರದಲ್ಲಿ ಭಾಗಿ ಆಗಲಾರದೆ ನಟಿ ಅಲ್ಲಿಂದ ಹೊರನಡೆದರು.

ಕೃಷಿ ತಾಪಂಡ ಮತ್ತು ವೈಶಾಖ್ ಲಿವಿನ್ ರಿಲೇಷನ್​​ನಲ್ಲಿದ್ದರು ಎನ್ನಲಾಗಿದೆ. ವೈಶಾಖ್​​ಗೆ ಅದಾಗಲೆ ಮದುವೆ ಆಗಿತ್ತು. ಕಾರು, ಆಟೊಮೊಬೈಲ್, ಗ್ಯಾರೇಜ್, ಸ್ಪೇರ್ ಪಾರ್ಟ್ಸ್ ಉದ್ಯಮದಲ್ಲಿ ತೊಡಗಿಕೊಂಡಿದ್ದ ವೈಶಾಖ್, ಪತ್ನಿಯೊಂದಿಗೆ ವೈಮನಸ್ಯ ಮಾಡಿಕೊಂಡಿದ್ದರು. ವೈಶಾಖ್, ಬಹುತೇಕ ಕೃಷಿ ಅವರ ಆರ್​​ಆರ್ ನಗರದ ಅಪಾರ್ಟ್​​ಮೆಂಟ್​​ ಫ್ಲ್ಯಾಟ್​​ನಲ್ಲಿಯೇ ಇರುತ್ತಿದ್ದರು. ಇಬ್ಬರ ನಡುವೆ ‘ಆತ್ಮೀಯ ಸಂಬಂಧ’ ಇತ್ತು.

ಇದನ್ನೂ ಓದಿ:ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?

ಈ ಹಿಂದೆ ಕೃಷಿ ತಾಪಂಡ, ಉದ್ಯಮಿ ಅರವಿಂದ್ ರೆಡ್ಡಿ ನಡುವೆ ವಿವಾದ ಉಂಟಾದಾಗ, ವೈಶಾಖ್, ಉದ್ಯಮಿ ಅರವಿಂದ್ ರೆಡ್ಡಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು ಎನ್ನಲಾಗಿತ್ತು. ಈ ಕುರಿತಾಗಿ ಅರವಿಂದ್ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ವೈಶಾಖ್ ಅವರನ್ನು ಬಂಧಿಸಲಾಗಿತ್ತು. ಆ ಬಳಿಕವೂ ವೈಶಾಖ್ ಹಾಗೂ ಕೃಷಿ ಜೊತೆಗೇ ಇದ್ದರು.

ಉದ್ಯಮದಲ್ಲಿ ಹಿನ್ನಡೆ, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಸಮಸ್ಯೆಗಳು ಇನ್ನಿತರೆಗಳಿಂದ ಬೇಸತ್ತು ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಕೃಷಿ ಅವರ ಫ್ಲ್ಯಾಟ್​​ಗೆ ಬಂದ ವೈಶಾಖ್, ಕೃಷಿ ಅವರಿಗೆ ಕೊನೆಯ ಸಂದೇಶ ಕಳಿಸಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದಾಗ ಕೃಷಿ ಅವರು ನೆಲಮಂಗಲಕ್ಕೆ ಹೋಗಿದ್ದರಂತೆ. ಕೃಷಿ ಅವರು ವೈಶಾಖ್ ಮನೆಯವರಿಗೆ ಮಾಹಿತಿ ನೀಡಿದ್ದರಾದರೂ ಅವರು ಬರುವುದಷ್ಟರಲ್ಲಿ ವೈಶಾಖ್ ಮೃತಪಟ್ಟಿದ್ದರು. ಇದೀಗ ಪ್ರಕರಣ ಕುರಿತಾಗಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?