AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾರ್ಟ್ನರ್’ ಚಿತ್ರದ ‘ಅಮೋರಾ’ ಹಾಡಿನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಅಜಯ್ ರಾವ್, ಬೃಂದಾ

‘ಪಾರ್ಟ್ನರ್’ ಸಿನಿಮಾದ ‘ಅಮೋರಾ ಅಮೋರಾ’ ಹಾಡು ಇತ್ತೀಚೆಗೆ ರಿಲೀಸ್ ಆಗಿದೆ. ನಕುಲ್ ಅಭ್ಯಂಕರ್ ಸಂಗೀತ ನೀಡಿರುವ ಈ ಹಾಡು ಕುನಾಲ್ ಗಾಂಜಾವಾಲ ಅವರ ಕಂಠದಲ್ಲಿ ಮೂಡಿಬಂದಿದೆ. ಈ ಸಿನಿಮಾ ಬಗ್ಗೆ ನಟ ಕೃಷ್ಣ ಅಜಯ್ ರಾವ್ ಅವರು ಸಖತ್ ಭರವಸೆ ಇಟ್ಟುಕೊಂಡಿದ್ದಾರೆ.

‘ಪಾರ್ಟ್ನರ್’ ಚಿತ್ರದ ‘ಅಮೋರಾ’ ಹಾಡಿನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಅಜಯ್ ರಾವ್, ಬೃಂದಾ
Ajay Rao, Brinda Acharya
ಮದನ್​ ಕುಮಾರ್​
|

Updated on: Jul 29, 2026 | 9:29 PM

Share

ಬೃಂದಾ ಆಚಾರ್ಯ ಹಾಗೂ ಕೃಷ್ಣ ಅಜಯ್ ರಾವ್ (Krishna Ajay Rao) ಅವರು ಜೋಡಿಯಾಗಿ ನಟಿಸಿರುವ ‘ಪಾರ್ಟ್ನರ್’ (Partner) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ. ‘ಹೆಚ್.ಪಿ.ಆರ್. ಎಂಟರ್ ಪ್ರೈಸಸ್’ ಮೂಲಕ ಹರೀಶ್ ದೇವಿತಂದ್ರೆ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಕವಿರಾಜ್, ಪ್ರಮೋದ್ ಮರವಂತೆ, ನಾಗಾರ್ಜುನ ಶರ್ಮಾ ಸಾಹಿತ್ಯ ರಚಿಸಿದ್ದಾರೆ. ಇತ್ತೀಚೆಗೆ ‘ಪಾರ್ಟ್ನರ್’ ಸಿನಿಮಾದ ‘ಅಮೋರಾ ಅಮೋರಾ’ ಸಾಂಗ್ ಬಿಡುಗಡೆ ಮಾಡಲಾಯಿತು.

ಈ ಸಿನಿಮಾಗೆ ಸುಜ್ಞಾನ್ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ‘ಮಳೆ’, ‘ಧೈರ್ಯಂ’, ‘ದಿಲ್ ಪಸಂದ್’ ಸಿನಿಮಾಗಳ ನಂತರ ನಿರ್ದೇಶಕ ಶಿವತೇಜಸ್ ಅವರು ‘ಪಾರ್ಟ್ನರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈಗಿನ ಜೆನ್ ಜಿ ಹುಡುಗ-ಹುಡುಗಿಯರ ಲವ್, ಬ್ರೇಕಪ್, ಲಿವಿಂಗ್ ಟುಗೆದರ್ ಮುಂತಾದ ವಿಷಯಗಳನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಜೀವನ ಎಂದರೆ ಇದಲ್ಲ, ಅದು ಬೇರೇನೇ ಇದೆ ಎಂದು ನಿರ್ದೇಶಕ ಶಿವತೇಜಸ್ ಅವರು ಈ ಸಿನಿಮಾ ಮೂಲಕ ಹೇಳಹೊರಟಿದ್ದಾರೆ.

ಈಗ ರಿಲೀಸ್ ಆಗಿರುವ ‘ಅಮೋರಾ ಅಮೋರಾ’ ಹಾಡಿಗೆ ನಾಗಾರ್ಜುನ ಶರ್ಮಾ ಅವರು ಸಾಹಿತ್ಯ ಬರೆದಿದ್ದಾರೆ. ಕುನಾಲ್ ಗಂಜಾವಾಲಾ ಅವರ ಕಂಠದಲ್ಲಿ ಈ ಗೀತೆ ಮೂಡಿಬಂದಿದೆ. ನಕುಲ್ ಅಭ್ಯಂಕರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ಹರೀಶ್ ದೇವಿತಂದ್ರೆ ಅವರಿಗೆ ಪಾಠ ಹೇಳಿಕೊಟ್ಟ ಗುರುಗಳಾದ ನಾಗಭೂಷಣ್ ದಂಪತಿ ‘ಅಮೋರಾ ಅಮೋರಾ’ ಹಾಡನ್ನು ವೇದಿಕೆಯಲ್ಲಿ ರಿಲೀಸ್ ಮಾಡಿದರು.

ಹಾಡಿನ ಬಿಡುಗಡೆ ವೇಳೆ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು. ಅಜಯ್ ರಾವ್ ಅವರು ಮಾತನಾಡಿ, ‘ನನ್ನ ಮನಸಿಗೆ ತುಂಬಾ ಹತ್ತಿರವಾದ ಸಿನಿಮಾ ಇದು. ನನ್ನ ಹೃದಯದ ಒಂದು ಭಾಗವನ್ನೇ ಇದರಲ್ಲಿ ಹಾಕಿದ್ದೇನೆ. ಕೆಲವು ಸಿನಿಮಾಗಳು ಆರಂಭದಿಂದಲೇ ಏನೋ ಒಂದು ಮ್ಯಾಜಿಕ್ ಮಾಡುತ್ತವೆ ಎನಿಸುತ್ತದೆ. ಅಂತಹ ಒಂದು ಸಿನಿಮಾ ಇದು. ಈ ಚಿತ್ರದ ಮೇಲೆ ನನಗೆ ತುಂಬಾ ಭರವಸೆ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಬೃಂದಾ ಆಚಾರ್ಯ ಜೊತೆ ಸ್ಟೆಪ್ ಹಾಕಿದ ಅಜಯ್ ರಾವ್

‘ಯಾವುದೇ ಮುಜುಗರ ಇಲ್ಲದೇ ಕುಟುಂಬ ಸಮೇತ ಕುಳಿತು ನೋಡುವಂಥ ಸಿನಿಮಾ ನಿರ್ಮಿಸಿದ್ದೇವೆ’ ಎಂದು ನಿರ್ಮಾಪಕ ಹರೀಶ್ ಹೇಳಿದ್ದಾರೆ. ಇದು ತಮ್ಮ ವೃತ್ತಿಜೀವನದ ಬೆಸ್ಟ್ ಸಾಂಗ್ ಎಂದು ನಟಿ ಬೃಂದಾ ಆಚಾರ್ಯ ಅವರು ಹೇಳಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆ ಆಗಿದ್ದು, ಒಂದೇ ದಿನದಲ್ಲಿ 5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?