AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣನ ಲೀಲಾಳಾದ ಶ್ರದ್ಧಾ ಶ್ರೀನಾಥ್

ಒಂದ್ ಕಾಲ ಇತ್ತು. ಯಾವ್ ಸಿನಿಮಾ ನೋಡೋದು. ಯಾವ ಸಿನಿಮಾ ಬಿಡೋದು ಅನ್ನೊ ಕಾಲವಿತ್ತು. ಆದ್ರೀಗ ಕೊರೊನಾ ಸಿನಿಮಾ ರಸಿಕರ ಈ ಸಂಭ್ರಮಕ್ಕೆ ತಣ್ಣೀರು ಸುರಿಸಿದೆ. ಹೊಚ್ಚ ಹೊಸ ಸಿನಿಮಾಗಳು ಥಿಯೇಟರ್​ನಲ್ಲಿ ಓಟಿಟಿಯಲ್ಲಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿವೆ. ಇಂತಹ ಸಿನಿಮಾಗಳಲ್ಲೊಂದು ಕೃಷ್ಣ ಆ್ಯಂಡ್ ಹಿಸ್ ಲೀಲಾ.. ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾ ಕಳೆದ ವರ್ಷದಿಂದ್ಲೇ ಪ್ರಚಾರ ಆರಂಭಿಸಿತ್ತು. ಆದ್ರೆ ಇನ್ನೇನು ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲಿ ಕೊರೊನಾ ವಕ್ಕರಿಸಿ, ಎಲ್ಲಾ ಆಸೆಗಳಿಗೂ ತಣ್ಣೀರು ಸುರಿಸಿದೆ. ಅಂದ್ಹಾಗೆ ಈ […]

ಕೃಷ್ಣನ ಲೀಲಾಳಾದ ಶ್ರದ್ಧಾ ಶ್ರೀನಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 22, 2020 | 6:57 PM

Share

ಒಂದ್ ಕಾಲ ಇತ್ತು. ಯಾವ್ ಸಿನಿಮಾ ನೋಡೋದು. ಯಾವ ಸಿನಿಮಾ ಬಿಡೋದು ಅನ್ನೊ ಕಾಲವಿತ್ತು. ಆದ್ರೀಗ ಕೊರೊನಾ ಸಿನಿಮಾ ರಸಿಕರ ಈ ಸಂಭ್ರಮಕ್ಕೆ ತಣ್ಣೀರು ಸುರಿಸಿದೆ. ಹೊಚ್ಚ ಹೊಸ ಸಿನಿಮಾಗಳು ಥಿಯೇಟರ್​ನಲ್ಲಿ ಓಟಿಟಿಯಲ್ಲಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿವೆ. ಇಂತಹ ಸಿನಿಮಾಗಳಲ್ಲೊಂದು ಕೃಷ್ಣ ಆ್ಯಂಡ್ ಹಿಸ್ ಲೀಲಾ..

ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾ ಕಳೆದ ವರ್ಷದಿಂದ್ಲೇ ಪ್ರಚಾರ ಆರಂಭಿಸಿತ್ತು. ಆದ್ರೆ ಇನ್ನೇನು ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲಿ ಕೊರೊನಾ ವಕ್ಕರಿಸಿ, ಎಲ್ಲಾ ಆಸೆಗಳಿಗೂ ತಣ್ಣೀರು ಸುರಿಸಿದೆ. ಅಂದ್ಹಾಗೆ ಈ ಸಿನಿಮಾ ಬಗ್ಗೆ ಯಾಕಿಷ್ಟು ಕುತೂಹಲ ಅಂದ್ರೆ, ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟಿಸಿದ್ದಾರೆ ಅನ್ನೋದು ಒಂದೆಡೆಯಾದ್ರೆ, ಇನ್ನೊಂದೆಡೆ ರಾಣಾ ದಗ್ಗುಬಾಟಿ ನಿರ್ಮಾಣ ಹಾಗೂ ರವಿಕಾಂತ್ ಪೆರುಪು ಅವರ ನಿರ್ದೇಶನವಿದೆ.

ನ್ಯಾಚುರಲ್ ಸ್ಟಾರ್ ನಾನಿ ಜೊತೆ ನಟಿಸಿದ್ದ ಶ್ರದ್ಧಾ ಶ್ರೀನಾಥ್​ಗೆ ತೆಲುಗು ಮಂದಿ ಭೇಷ್ ಅಂದಿದ್ರು. ಈ ವೇಳೆ ನಟಿಸಿದ ಮತ್ತೊಂದು ಸಿನಿಮಾನೇ ಕೃಷ್ಣ ಆ್ಯಂಡ್ ಹಿಸ್ ಲೀಲಾ. ಆದ್ರೆ, ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವಷ್ಟರಲ್ಲೇ ಕೊರೊನಾ ಮಾಹಾಮಾರಿ ಎಂಟ್ರಿ ಕೊಟ್ಟಿತ್ತು. ಹೀಗಾಗಿ ಈ ಸಿನಿಮಾ ಕಾದೂ ಕಾದು ಕೊನೆಗೂ ಓಟಿಟಿಯಲ್ಲಿ ಬಿಡುಗಡೆ ಸಿದ್ಧತೆ ನಡೆಸಿದೆ.

ಶ್ರದ್ಧಾ ಶ್ರೀನಾಥ್ ಜೊತೆ ಸೀರತ್ ಕಪೂರ್, ಶಾಲಿನಿ ವದ್ನಿಕಟ್ಟಿ ನಟಿಸಿದ್ರೆ, ಮೂವರಿಗೂ ಹೀರೋ ಆಗಿ ಸಿದ್ದು ಜಿನ್ನಲಗಡ್ಡ ಕಾಣಿಸಿಕೊಂಡಿದ್ದಾರೆ. ಮೂವರು ಯುವತಿಯರೊಂದಿಗೆ ಪ್ರೀತಿಯಲ್ಲಿ ಬೀಳುವ ನಾಯಕ ಯಾರನ್ನ ಆಯ್ಕೆ ಮಾಡಿಕೊಳ್ಳುತ್ತಾನೆ. ಅವರ ಭಾವನೆಗಳೇನು? ಅನ್ನೋದ ಸಿನಿಮಾದ ಕಥೆ. ಕೃಷ್ಣ ಆ್ಯಂಡ್ ಹಿಸ್ ಲೀಲಾ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿರೋ ಚಿತ್ರತಂಡ, ಎಲ್ಲಿ ಬಿಡುಗಡೆಯಾಗುತ್ತೆ ಅಂತ ಹೇಳಿದ್ದಾರೆ. ಆದ್ರೆ, ಬಿಡುಗಡೆ ದಿನಾಂಕವನ್ನ ಮಾತ್ರ ರಿವೀಲ್ ಮಾಡಿಲ್ಲ -ಮುರಳಿ

Published On - 6:56 pm, Mon, 22 June 20

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ