AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ. ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? 25 ದಿನಗಳಲ್ಲಿ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?
ಮಾಳವಿಕಾ-ಗಣೇಶ್
ರಾಜೇಶ್ ದುಗ್ಗುಮನೆ
|

Updated on: Sep 10, 2024 | 12:44 PM

Share

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಯಿತು. ಈ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿದೆ. ಮಂಕಾಗಿದ್ದ ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ದೊಡ್ಡ ಚೈತನ್ಯ ತುಂಬಿದೆ. ಅದೇ ರೀತಿ ಗಣೇಶ್​ಗೂ ದೊಡ್ಡ ಗೆಲುವು ನೀಡಿದೆ. ಈ ಸಿನಿಮಾ ಇತ್ತೀಚೆಗೆ 25ನೇ ದಿನ ಪೂರೈಸಿದೆ. ಆ ಪ್ರಯುಕ್ತ ತಂಡ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಹಾಗಾದರೆ, ಈವರೆಗೆ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಕಳೆದ ಭಾನುವಾರ (ಸೆಪ್ಟೆಂಬರ್ 8) ಸಿನಿಮಾ ಬರೋಬ್ಬರಿ 56 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಸಿನಿಮಾಗೆ ನಾಲ್ಕನೇ ಭಾನುವಾರ. ಆದಾಗ್ಯೂ ಸಿನಿಮಾ ಒಳ್ಳೆಯ ಟ್ರ್ಯಾಕ್​ ರೆಕಾರ್ಡ್ ಮೂಲಕ ಸಾಗುತ್ತಿದೆ. ಇದು ಸಿನಿಮಾ ತಂಡದ ಖುಷಿ ಹೆಚ್ಚಿಸಿದೆ. ಹಾಗಾದರೆ, ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? 25 ದಿನಗಳಲ್ಲಿ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಭಾನುವಾರ 25ನೇ ದಿನಕ್ಕೆ ಕಾಲಿಟ್ಟಿದೆ. ಈ ಸಿನಿಮಾ ಭಾನುವಾರವೂ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 18.87 ಕೋಟಿ ರೂಪಾಯಿ (ಗ್ರಾಸ್ ಕಲೆಕ್ಷನ್) ಎಂದು sacnilk ವರದಿ ಮಾಡಿದೆ. ಈ ಮೂಲಕ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರಕ್ಕೆ ಥಿಯೇಟರ್​ನ ಜೊತೆಗೆ ಟಿವಿ ಹಕ್ಕು, ಒಟಿಟಿ ಹಕ್ಕಿನಿಂದಲೂ ಒಳ್ಳೆಯ ಆದಾಯ ಹರಿದು ಬಂದಿದೆ. ಈ ಚಿತ್ರದಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಬುಕ್ ಮೈ ಶೋನಲ್ಲೂ ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. ಈ ಸಿನಿಮಾಗೆ 16 ಸಾವಿರ ಮಂದಿ ರೇಟಿಂಗ್ ನೀಡಿದ್ದು, 8.6 ರೇಟಿಂಗ್ ದೊರೆತಿದೆ. ಈ ಚಿತ್ರದಲ್ಲಿ ಗಣೇಶ್, ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು