‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ. ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? 25 ದಿನಗಳಲ್ಲಿ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?
ಮಾಳವಿಕಾ-ಗಣೇಶ್
Follow us
|

Updated on: Sep 10, 2024 | 12:44 PM

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಯಿತು. ಈ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿದೆ. ಮಂಕಾಗಿದ್ದ ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ದೊಡ್ಡ ಚೈತನ್ಯ ತುಂಬಿದೆ. ಅದೇ ರೀತಿ ಗಣೇಶ್​ಗೂ ದೊಡ್ಡ ಗೆಲುವು ನೀಡಿದೆ. ಈ ಸಿನಿಮಾ ಇತ್ತೀಚೆಗೆ 25ನೇ ದಿನ ಪೂರೈಸಿದೆ. ಆ ಪ್ರಯುಕ್ತ ತಂಡ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಹಾಗಾದರೆ, ಈವರೆಗೆ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಕಳೆದ ಭಾನುವಾರ (ಸೆಪ್ಟೆಂಬರ್ 8) ಸಿನಿಮಾ ಬರೋಬ್ಬರಿ 56 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಸಿನಿಮಾಗೆ ನಾಲ್ಕನೇ ಭಾನುವಾರ. ಆದಾಗ್ಯೂ ಸಿನಿಮಾ ಒಳ್ಳೆಯ ಟ್ರ್ಯಾಕ್​ ರೆಕಾರ್ಡ್ ಮೂಲಕ ಸಾಗುತ್ತಿದೆ. ಇದು ಸಿನಿಮಾ ತಂಡದ ಖುಷಿ ಹೆಚ್ಚಿಸಿದೆ. ಹಾಗಾದರೆ, ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? 25 ದಿನಗಳಲ್ಲಿ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಭಾನುವಾರ 25ನೇ ದಿನಕ್ಕೆ ಕಾಲಿಟ್ಟಿದೆ. ಈ ಸಿನಿಮಾ ಭಾನುವಾರವೂ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 18.87 ಕೋಟಿ ರೂಪಾಯಿ (ಗ್ರಾಸ್ ಕಲೆಕ್ಷನ್) ಎಂದು sacnilk ವರದಿ ಮಾಡಿದೆ. ಈ ಮೂಲಕ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರಕ್ಕೆ ಥಿಯೇಟರ್​ನ ಜೊತೆಗೆ ಟಿವಿ ಹಕ್ಕು, ಒಟಿಟಿ ಹಕ್ಕಿನಿಂದಲೂ ಒಳ್ಳೆಯ ಆದಾಯ ಹರಿದು ಬಂದಿದೆ. ಈ ಚಿತ್ರದಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಬುಕ್ ಮೈ ಶೋನಲ್ಲೂ ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. ಈ ಸಿನಿಮಾಗೆ 16 ಸಾವಿರ ಮಂದಿ ರೇಟಿಂಗ್ ನೀಡಿದ್ದು, 8.6 ರೇಟಿಂಗ್ ದೊರೆತಿದೆ. ಈ ಚಿತ್ರದಲ್ಲಿ ಗಣೇಶ್, ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು