AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಇಷ್ಟೊಂದಾ?

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಒಳ್ಳೆಯ ರೀತಿಯಲ್ಲಿ ಇದೆ.

‘ಕೃಷ್ಣಂ ಪ್ರಣಯ ಸಖಿ’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಇಷ್ಟೊಂದಾ?
‘ಕೃಷ್ಣಂ ಪ್ರಣಯ ಸಖಿ’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಇಷ್ಟೊಂದಾ?
ರಾಜೇಶ್ ದುಗ್ಗುಮನೆ
|

Updated on: Sep 03, 2024 | 8:31 AM

Share

ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆದ ಅತ್ಯುತ್ತಮ ಫ್ಯಾಮಿಲಿ ಎಂಟರ್​ಟೇನ್​ ಸಿನಿಮಾ ಎಂದರೆ ಅದು ‘ಕೃಷ್ಣಂ ಪ್ರಣಯ ಸಖಿ’. ಗಣೇಶ್, ಶರಣ್ಯಾ ಶೆಟ್ಟಿ, ಮಾಳವಿಕಾ ನಾಯರ್ ಮೊದಲಾದವರು ನಟಿಸಿರೋ ಈ ಸಿನಿಮಾ ಗೆದ್ದು ಬೀಗಿದೆ. ಗಣೇಶ್ ವೃತ್ತಿ ಜೀವನಕ್ಕೆ ಈ ಚಿತ್ರ ಮೈಲೇಜ್ ಕೊಟ್ಟಿದೆ. ಪರಭಾಷೆಯ ಹಲವು ಸಿನಿಮಾಗಳ ರಿಲೀಸ್ ಮಧ್ಯೆಯೂ ಈ ಸಿನಿಮಾ ಇನ್ನೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ.

ಬಾಕ್ಸ್ ಆಫೀಸ್ ಬಗ್ಗೆ ಲೆಕ್ಕ ಕೊಡುವ sacnilk ವರದಿ ಮಾಡಿರುವ ಪ್ರಕಾರ ‘ಕೃಷ್ಣಂ ಪ್ರಣಯ ಸಖಿ’ ಈವರೆಗೆ ವಿಶ್ವಮಟ್ಟದಲ್ಲಿ 17.3 ಕೋಟಿ ರೂಪಾಯಿ (ಗ್ರಾಸ್​ ಕಲೆಕ್ಷನ್) ಮಾಡಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ 20 ಕೋಟಿ ರೂಪಾಯಿ ಗಳಿಕೆ ಮಾಡಲು ಒದ್ದಾಡುತ್ತಿರುವಾಗ ಕನ್ನಡದ ಸಿನಿಮಾಗಳು ಈ ರೀತಿಯ ಕಲೆಕ್ಷನ್ ಮಾಡುತ್ತಿರುವುದು ನಿಜಕ್ಕೂ ವಿಶೇಷ ಎನ್ನಬಹುದು.

ಗಣೇಶ್ ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಒಂದು ದೊಡ್ಡ ಯಶಸ್ಸಿಗಾಗಿ ಅವರು ಕಾದಿದ್ದರು. ಹೀಗಾಗಿ, ‘ಕೃಷ್ಣಂ ಪ್ರಣಯ ಸಖಿ’ ಯಶಸ್ಸು ಅವರ ಜನಪ್ರಿಯತೆ ಹೆಚ್ಚಿಸಿದೆ. ಮಾಳವಿಕಾ ನಾಯರ್ ಅವರು ಕನ್ನಡಕ್ಕೆ ಬಂದು ಮಿಂಚಿದ್ದಾರೆ. ಈ ಚಿತ್ರದ ಗೆಲುವು ಕನ್ನಡ ಚಿತ್ರರಂಗಕ್ಕೆ ಹೊಸ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಮೂಡಿಬಂದಿದೆ. ಪ್ರಶಾಂತ್ ಜಿ. ರುದ್ರಪ್ಪ ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಗಮನ ಸೆಳೆದಿದೆ. ಅಬುದಾಬಿ ಮತ್ತು ದುಬೈನಲ್ಲೂ ಸಿನಿಮಾದ ಪ್ರದರ್ಶನ ಇಡಲಾಗಿತ್ತು. ಅಲ್ಲಿರೋ ಕನ್ನಡಿಗರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!