AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಇಷ್ಟೊಂದಾ?

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಒಳ್ಳೆಯ ರೀತಿಯಲ್ಲಿ ಇದೆ.

‘ಕೃಷ್ಣಂ ಪ್ರಣಯ ಸಖಿ’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಇಷ್ಟೊಂದಾ?
‘ಕೃಷ್ಣಂ ಪ್ರಣಯ ಸಖಿ’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದು ಇಷ್ಟೊಂದಾ?
ರಾಜೇಶ್ ದುಗ್ಗುಮನೆ
|

Updated on: Sep 03, 2024 | 8:31 AM

Share

ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆದ ಅತ್ಯುತ್ತಮ ಫ್ಯಾಮಿಲಿ ಎಂಟರ್​ಟೇನ್​ ಸಿನಿಮಾ ಎಂದರೆ ಅದು ‘ಕೃಷ್ಣಂ ಪ್ರಣಯ ಸಖಿ’. ಗಣೇಶ್, ಶರಣ್ಯಾ ಶೆಟ್ಟಿ, ಮಾಳವಿಕಾ ನಾಯರ್ ಮೊದಲಾದವರು ನಟಿಸಿರೋ ಈ ಸಿನಿಮಾ ಗೆದ್ದು ಬೀಗಿದೆ. ಗಣೇಶ್ ವೃತ್ತಿ ಜೀವನಕ್ಕೆ ಈ ಚಿತ್ರ ಮೈಲೇಜ್ ಕೊಟ್ಟಿದೆ. ಪರಭಾಷೆಯ ಹಲವು ಸಿನಿಮಾಗಳ ರಿಲೀಸ್ ಮಧ್ಯೆಯೂ ಈ ಸಿನಿಮಾ ಇನ್ನೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ.

ಬಾಕ್ಸ್ ಆಫೀಸ್ ಬಗ್ಗೆ ಲೆಕ್ಕ ಕೊಡುವ sacnilk ವರದಿ ಮಾಡಿರುವ ಪ್ರಕಾರ ‘ಕೃಷ್ಣಂ ಪ್ರಣಯ ಸಖಿ’ ಈವರೆಗೆ ವಿಶ್ವಮಟ್ಟದಲ್ಲಿ 17.3 ಕೋಟಿ ರೂಪಾಯಿ (ಗ್ರಾಸ್​ ಕಲೆಕ್ಷನ್) ಮಾಡಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ 20 ಕೋಟಿ ರೂಪಾಯಿ ಗಳಿಕೆ ಮಾಡಲು ಒದ್ದಾಡುತ್ತಿರುವಾಗ ಕನ್ನಡದ ಸಿನಿಮಾಗಳು ಈ ರೀತಿಯ ಕಲೆಕ್ಷನ್ ಮಾಡುತ್ತಿರುವುದು ನಿಜಕ್ಕೂ ವಿಶೇಷ ಎನ್ನಬಹುದು.

ಗಣೇಶ್ ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಒಂದು ದೊಡ್ಡ ಯಶಸ್ಸಿಗಾಗಿ ಅವರು ಕಾದಿದ್ದರು. ಹೀಗಾಗಿ, ‘ಕೃಷ್ಣಂ ಪ್ರಣಯ ಸಖಿ’ ಯಶಸ್ಸು ಅವರ ಜನಪ್ರಿಯತೆ ಹೆಚ್ಚಿಸಿದೆ. ಮಾಳವಿಕಾ ನಾಯರ್ ಅವರು ಕನ್ನಡಕ್ಕೆ ಬಂದು ಮಿಂಚಿದ್ದಾರೆ. ಈ ಚಿತ್ರದ ಗೆಲುವು ಕನ್ನಡ ಚಿತ್ರರಂಗಕ್ಕೆ ಹೊಸ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಮೂಡಿಬಂದಿದೆ. ಪ್ರಶಾಂತ್ ಜಿ. ರುದ್ರಪ್ಪ ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಗಮನ ಸೆಳೆದಿದೆ. ಅಬುದಾಬಿ ಮತ್ತು ದುಬೈನಲ್ಲೂ ಸಿನಿಮಾದ ಪ್ರದರ್ಶನ ಇಡಲಾಗಿತ್ತು. ಅಲ್ಲಿರೋ ಕನ್ನಡಿಗರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್