AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಯೆಟ್ನಾಂನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ತಂಡ

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಅನುಭವ ಇರುವ ನಿರ್ದೇಶಕ ಶ್ರೀನಿವಾಸರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್ ಜೊತೆ ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮೊದಲಾದವರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು.

ವಿಯೆಟ್ನಾಂನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ತಂಡ
ಗಣೇಶ್ ಟೀಂ
ರಾಜೇಶ್ ದುಗ್ಗುಮನೆ
|

Updated on:Mar 19, 2024 | 8:56 AM

Share

ನಟ ಗಣೇಶ್ (Ganesh) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ನಟನೆಯ ಹಲವು ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿವೆ. ಈಗ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ತಂಡ ವಿಯೆಟ್ನಾಂಗೆ ತೆರಳಿತ್ತು. ಈಗ ಶೂಟಿಂಗ್ ಪೂರ್ಣಗೊಂಡಿದೆ. ಅಲ್ಲಿ ಚಿತ್ರದ ಎರಡು ಸಾಂಗ್ ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ.  ಇದರೊಂದಿಗೆ ಸಿನಿಮಾದ ಶೂಟಿಂಗ್ ಪೂರ್ತಿಗೊಂಡಿದೆ. ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಆಗಲಿದೆ.

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಅನುಭವ ಇರುವ ನಿರ್ದೇಶಕ ಶ್ರೀನಿವಾಸರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್ ಜೊತೆ ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮೊದಲಾದವರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ರೀ-ರೆಕಾರ್ಡಿಂಗ್ ಕೆಲಸಗಳು ನಡೆಯುತ್ತಿದ್ದು ಶೀಘ್ರವೇ ಸಿನಿಮಾ ರಿಲೀಸ್ ಆಗಲಿದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಐದು ಸಾಂಗ್​ಗಳು ಇರಲಿವೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕೆ ಇದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಫ್ಯಾಮಿಲಿ ಡ್ರಾಮಾ ಇದೆ. ಈ ಚಿತ್ರವನ್ನು ತ್ರಿಶೂಲ್ ಎಂಟರ್​​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೂರನೇ ಸಿನಿಮಾ.

ಇದನ್ನೂ ಓದಿ: ‘ಅನುಬಂಧ’ ವೇದಿಕೆ ಮೇಲೆ ‘ಮುಂಗಾರು ಮಳೆ’ ಮರು ಸೃಷ್ಟಿ; ಗಣೇಶ್ ಡೈಲಾಗ್​ಗೆ ಅಭಿಮಾನಿಗಳು ಖುಷ್

ಗಣೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ಗಣೇಶ್ ನಟನೆಯ 41ನೇ ಸಿನಿಮಾ. ಗಣೇಶ್​ಗೆ ನಾಯಕಿಯಾಗಿ ಮಾಳವಿಕಾ ನಾಯರ್ ಕಾಣಿಸಿಕೊಂಡಿದ್ದಾರೆ. ಶರಣ್ಯಾ ಶೆಟ್ಟಿ, ಶ್ರೀನಿವಾಸಮೂರ್ತಿ, ರಂಗಾಯಣ ರಘು, ಸಾಧುಕೋಕಿಲ, ಶ್ರುತಿ, ಶಶಿಕುಮಾರ್, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ಮಾನಸಿ ಸುಧೀರ್, ರಘುರಾಮ್, ಗಿರಿ ಶಿವಣ್ಣ, ಅಂಬುಜ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:52 am, Tue, 19 March 24

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು