Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್

‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್​ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಕ್ರಿಕೆಟ್​ ಕುರಿತ ಕಥೆ ಇದೆ. ಹಾಗಾಗಿ ಕ್ರಿಕೆಟರ್​ ಕೃಷ್ಣಪ್ಪ ಗೌತಮ್​ ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ. ‘ಪಿಆರ್​ಕೆ ಆಡಿಯೋ’ ಮೂಲಕ ಟ್ರೇಲರ್​ ರಿಲೀಸ್​ ಆಗಿದೆ. ‘ಸಹಾರಾ’ ಸಿನಿಮಾಗೆ ಮಂಜೇಶ್ ಭಗವತ್ ಅವರು ನಿರ್ದೇಶನ, ಎಂ. ಗೌಡ ಅವರು ನಿರ್ಮಾಣ ಮಾಡಿದ್ದಾರೆ.

ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್
‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ
Follow us
ಮದನ್​ ಕುಮಾರ್​
|

Updated on: May 26, 2024 | 3:00 PM

ಈಗ ಎಲ್ಲೆಲ್ಲೂ ಕ್ರಿಕೆಟ್​ನದ್ದೇ ಹವಾ. ಅದಕ್ಕೆ ಕಾರಣ ಐಪಿಎಲ್​. ಸಿನಿಮಾರಂಗದಲ್ಲೂ ಕ್ರಿಕೆಟ್​ (Cricket) ಕಥೆಗಳು ಬರುತ್ತಿವೆ. ಕನ್ನಡದಲ್ಲಿ ಮಹಿಳಾ ಕ್ರಿಕೆಟರ್​ ಜೀವನಾಧಾರಿತ ‘ಸಹಾರಾ’ ಸಿನಿಮಾ (Sahara Movie) ಟ್ರೇಲರ್ ಬಿಡುಗಡೆ ಆಗಿದೆ. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಈ ಸಿನಿಮಾದ ಟ್ರೇಲರ್ ಅನಾವರಣ ಮಾಡಲಾಯಿತು. ಕ್ರಿಕೆಟರ್​ ಕೃಷ್ಣಪ್ಪ ಗೌತಮ್ (Krishnappa Gowtham) ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ‘ಟ್ರೇಲರ್ ರಿಯಲಿಸ್ಟಿಕ್ ಆಗಿ ಮೂಡಿಬಂದಿದೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ವಿಶ್​ ಮಾಡಿದರು.

‘ಸಹಾರಾ’ ಸಿನಿಮಾದಲ್ಲಿ ನಟಿ ಸಾರಿಕಾ ರಾವ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರು ಮಾತನಾಡಿ, ‘ಇದು ಸ್ಫೂರ್ತಿದಾಯಕ ಕಹಾನಿ. ಜವಾಬ್ದಾರಿಯಿಂದ ನಾನು ನನ್ನ ಪಾತ್ರವನ್ನು ಮಾಡಿದ್ದೇನೆ. ಮಹಿಳಾ ಪ್ರಧಾನ ಸಿನಿಮಾವನ್ನು ನಿರ್ದೇಶಕರಾದ ಮಂಜೇಶ್ ಅವರು ಕನ್ನಡ ಚಿತ್ರರಂಗಕ್ಕೆ ನೀಡುತ್ತಿದ್ದಾರೆ. ಕಿಚ್ಚ ಸುದೀಪ್, ಸಿಂಪಲ್ ಸುನಿ, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರೆಲ್ಲ ಸೇರಿ ಹೊಸಬರಿಗೆ ಬೆಂಬಲ ನೀಡಿದ್ದಾರೆ’ ಎಂದರು.

ವಿಶೇಷ ಏನೆಂದರೆ, ಇದು ಕನ್ನಡದಲ್ಲಿ ಕ್ರಿಕೆಟ್ ಕಥೆ ಇರುವ ಮೊದಲ ಮಹಿಳಾ ಪ್ರಧಾನ ಸಿನಿಮಾ. ಮಂಡ್ಯ ಹುಡುಗಿಯು ಕ್ರಿಕೆಟರ್ ಆದ ಕಥೆಯನ್ನು ಈ ಸಿನಿಮಾ ಕಟ್ಟಿಕೊಡಲಾಗಿದೆ. ಮಂಡ್ಯ ಯುವತಿಯ ಪಾತ್ರದಲ್ಲಿ ಸಾರಿಕಾ ರಾವ್ ನಟಿಸಿದ್ದಾರೆ. ಆ ಪಾತ್ರಕ್ಕಾಗಿ ಅವರು ರಣಜಿ ಆಟಗಾರ ಕೆ.ಬಿ. ಪವನ್ ಬಳಿ ತರಬೇತಿ ಪಡೆದುಕೊಂಡಿದ್ದಾರೆ. ನಂತರ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ.

‘ಸಹಾರಾ’ ಸಿನಿಮಾ ಟ್ರೇಲರ್​:

ಮಂಜೇಶ್ ಭಗವತ್ ಅವರು ‘ಸಹಾರಾ’ ಸಿನಿಮಾಗೆ ನಿರ್ದೇಶ ಮಾಡಿದ್ದಾರೆ. ಕಳೆದ 8 ವರ್ಷಗಳಿಂದ ಸ್ಯಾಂಡಲ್​ವುಡ್​ನಲ್ಲಿ ಅವರು ಸಹನಿರ್ದೇಶಕರಾಗಿ ಅನುಭವ ಪಡೆದಿದ್ದಾರೆ. ಈಗ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ‘ಸಹಾರಾ’ ಚಿತ್ರಕ್ಕೆ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅವರೇ ಬರೆದಿದ್ದಾರೆ. ‘ಮಾ ಕ್ರಿಯೆಷನ್ಸ್’ ಸಿನಿಮಾ ನಿರ್ಮಾಣ ಆಗಿದೆ. ಎಂ. ಗೌಡ ಅವರು ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಜಾನ್ವಿ ಕಪೂರ್​ ಬೆನ್ನಿನಲ್ಲಿ ಕ್ರಿಕೆಟ್​ ಬಾಲ್​ಗಳ ಸಾಲು; ಇದೆಂಥಾ ಡ್ರೆಸ್​?

ಈ ಸಿನಿಮಾಗೆ ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಿದ್ದಾರೆ. ಆಂಥೋನಿ ರುತ್ ವಿನ್ಸೆಂಟ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ನೃತ್ಯ ನಿರ್ದೇಶನ ಈ ಸಿನಿಮಾಗಿದೆ. ‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್​ ಜೊತೆ ಮಂಜುನಾಥ ಹೆಗಡೆ, ಅಂಕುಶ್ ರಜತ್, ಕುರಿ ಸುನಿಲ್, ರಂಜನ್, ಪ್ರಕಾಶ್ ಶೆಟ್ಟಿ, ಮಂಜುಳಾ ರೆಡ್ಡಿ ಮುಂತಾದ ಕಲಾವಿದರು ನಟಿಸಿದ್ದಾರೆ. ‘ಪಿ.ಆರ್.ಕೆ’ ಸಂಸ್ಥೆಯು ಈ ಸಿನಿಮಾದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಡಿಜಿಟಲ್​ನಲ್ಲಿ ಟ್ರೇಲರ್​ ಅನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಬಿಡುಗಡೆ ಮಾಡಿದ್ದಾರೆ. ‘ಕೆಆರ್.ಜಿ.’ ಸಂಸ್ಥೆಯು ಈ ಸಿನಿಮಾದ ವಿತರಣೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ