AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ; ವರ, ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ..

ನಟಿ ಕೃತಿ ಕರಬಂಧ ಅವರ ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಅವರು ಈಗ ಹಸೆಮಣೆ ಏರಲು ಸಜ್ಜಾಗಿದ್ದಾರೆ. ‘ಗೂಗ್ಲಿ’ ಬೆಡಗಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಹಲವು ವರ್ಷಗಳಿಂದ ರಿಲೇಷನ್​ಶಿಪ್​ನಲ್ಲಿ ಇರುವ ಪ್ರಿಯಕರ ಪುಲ್ಕಿತ್​ ಸಾಮ್ರಾಟ್​ ಜೊತೆ ಅವರು ದಾಂಪತ್ಯ ಜೀವನ ಆರಂಭಿಸಲಿದ್ದಾರೆ.

‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ; ವರ, ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ..
ಪುಲ್ಕಿತ್​ ಸಾಮ್ರಾಟ್​, ಕೃತಿ ಕರಬಂಧ
ಮದನ್​ ಕುಮಾರ್​
|

Updated on: Feb 20, 2024 | 12:52 PM

Share

ಖ್ಯಾತ ನಟಿ ಕೃತಿ ಕರಬಂಧ (Kriti Kharbanda) ಅವರು ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮೂಲತಃ ದೆಹಲಿಯವರಾದ ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿ ಹೆಚ್ಚು ಫೇಮಸ್​ ಆಗಿದ್ದಾರೆ. ಕನ್ನಡದಲ್ಲಿ ಯಶ್​ ಜೊತೆ ನಟಿಸಿದ ‘ಗೂಗ್ಲಿ’ ಸಿನಿಮಾದಿಂದ ಕೃತಿ ಕರಬಂಧ ಅವರಿಗೆ ಯಶಸ್ಸು ಸಿಕ್ಕಿತು. ಸದ್ಯಕ್ಕೆ ಬಾಲಿವುಡ್​ನಲ್ಲೇ ಬ್ಯುಸಿ ಆಗಿರುವ ಅವರು ಈಗ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. ಬಾಲಿವುಡ್​ ನಟ ಪುಲ್ಕಿತ್​ ಸಾಮ್ರಾಟ್​ (Pulkit Samrat) ಜೊತೆ ಕೃತಿ ಕರಬಂಧ ಅವರು ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ಆ ವಿಚಾರ ಗುಟ್ಟಾಗಿ ಉಳಿದಿಲ್ಲ. ಪ್ರಿಯಕರನ ಜೊತೆ ಅವರು ಮಾರ್ಚ್​ 13ರಂದು ಕೃತಿ ಕರಬಂಧ ಮದುವೆ (Kriti Kharbanda Marriage) ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕೃತಿ ಕರಬಂಧ ಅವರಾಗಲಿ, ಪುಲ್ಕಿತ್​ ಸಾಮ್ರಾಟ್​ ಅವರಾಗಲಿ ಇನ್ನಷ್ಟೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಲವು ವರ್ಷಗಳಿಂದ ಕೃತಿ ಕರಬಂಧ ಮತ್ತು ಪುಲ್ಕಿತ್​ ಸಾಮ್ರಾಟ್​ ಅವರು ಪರಸ್ಪರ ಪ್ರೀತಿಸುತ್ತಿದ್ದಾರೆ. ಅವರಿಬ್ಬರು ಜೊತೆಯಾಗಿ ಇರುವ ಅನೇಕ ಫೋಟೋಗಳು ವೈರಲ್​ ಆಗಿವೆ. ತಮ್ಮ ಪ್ರೀತಿಯನ್ನು ಅವರು ಮುಚ್ಚಿಟ್ಟಿಲ್ಲ. ಈ ಸಂಬಂಧವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲು ಅವರು ನಿರ್ಧರಿಸಿದ್ದಾರೆ. ಮಾರ್ಚ್​ 13ರಂದು ಅವರ ಮದುವೆ ನಡೆಯಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಕೃತಿ ಕರಬಂಧ ಇನ್​ಸ್ಟಾಗ್ರಾಮ್​ ಪೋಸ್ಟ್​:

ಇತ್ತೀಚೆಗೆ ವ್ಯಾಲೆಂಟೈನ್ಸ್​ ಡೇ ದಿನ ಕೃತಿ ಸನೋನ್​ ಅವರು ಪುಲ್ಕಿಟ್​ ಸಾಮ್ರಾಟ್​ ಜೊತೆ ಇರುವ ಫೋಟೋ ಹಂಚಿಕೊಂಡು, ‘Let’s March together, hand in hand’ ಎಂದು ಕ್ಯಾಪ್ಷನ್​ ನೀಡಿದ್ದರು. ಅವರು ಬೇಕಂತಲೇ March ಎಂಬ ಪದವನ್ನು ಬಳಸಿದ್ದರು ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈಗಾಗಲೇ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಮದುವೆ ನಡೆಯುವ ಸ್ಥಳದ ಬಗ್ಗೆ ಮಾಹಿತಿ ಸಿಗುವುದು ಬಾಕಿ ಇದೆ. ಇತ್ತೀಚೆಗೆ ಅವರ ಎಂಗೇಜ್​ಮೆಂಟ್​ ನಡೆದಿದೆ.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟರಾ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

ಕನ್ನಡದ ಅನೇಕ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಕೃತಿ ಕರಬಂಧ ಕೆಲಸ ಮಾಡಿದ್ದಾರೆ. ‘ಚಿರು’, ‘ಪ್ರೇಮ್​ ಅಡ್ಡ’, ‘ಗಲಾಟೆ’, ‘ತಿರುಪತಿ ಎಕ್ಸ್​ಪ್ರೆಸ್​’, ‘ಸೂಪರ್​ ರಂಗ’, ‘ಬೆಳ್ಳಿ’, ‘ಮಿಂಚಾಗಿ ನೀನು ಬರಲು’, ‘ಮಾಸ್ತಿಗುಡಿ’, ‘ದಳಪತಿ’ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡದ ಪ್ರೇಕ್ಷಕರನ್ನು ಅವರು ರಂಜಿಸಿದ್ದಾರೆ. ಸ್ಯಾಂಡಲ್​ವುಡ್​ನ ಯಾವೆಲ್ಲ ಸೆಲೆಬ್ರಿಟಿಗಳಿಗೆ ಕೃತಿ ಕರಬಂಧ ಅವರ ಮದುವೆಯ ಆಹ್ವಾನ ಸಿಗಲಿದೆ ಎಂಬುದನ್ನು ಕಾದು ನೋಡಬೇಕು. ‘ಗೂಗ್ಲಿ’ ಸಿನಿಮಾದಲ್ಲಿ ಅವರ ಜೊತೆ ತೆರೆಹಂಚಿಕೊಂಡ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಈ ಮದುವೆಗೆ ಹಾಜರಿ ಹಾಕಲಿದ್ದಾರಾ ಎಂಬ ಕೌತುಕ ಅಭಿಮಾನಿಗಳಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು