AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾ ಶೂಟಿಂಗ್ ವೇಳೆ ಹೋಟೆಲ್​ನಲ್ಲಿ ಕೃತಿ ಕರಬಂಧ​ಗೆ ಕೆಟ್ಟ ಅನುಭವ; ನಟಿ ದೂರಿದ್ದು ಯಾರನ್ನ?

ಹೋಟೆಲ್​ಗಳಲ್ಲಿ ತಂಗಿದ್ದಾಗ ಸಾಕಷ್ಟು ಎಚ್ಚರಿಕೆ ಬೇಕು. ಏಕೆಂದರೆ ಕೆಲವರು ಕದ್ದು ಶೂಟ್ ಮಾಡಲು ಕ್ಯಾಮೆರಾ ಇಟ್ಟಿರುತ್ತಾರೆ. ಕೃತಿಗೆ ಆದ ಅನುಭವ ಕೂಡ ಇಂಥದ್ದೇ. ಅದೂ ಕನ್ನಡ ಸಿನಿಮಾ ಶೂಟಿಂಗ್ ವೇಳೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಹೇಗೆ ಕ್ಯಾಮೆರಾ ಪತ್ತೆ ಹಚ್ಚಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ.

ಕನ್ನಡ ಸಿನಿಮಾ ಶೂಟಿಂಗ್ ವೇಳೆ ಹೋಟೆಲ್​ನಲ್ಲಿ ಕೃತಿ ಕರಬಂಧ​ಗೆ ಕೆಟ್ಟ ಅನುಭವ; ನಟಿ ದೂರಿದ್ದು ಯಾರನ್ನ?
ಕೃತಿ ಕರಬಂಧ
ರಾಜೇಶ್ ದುಗ್ಗುಮನೆ
|

Updated on: Aug 23, 2023 | 11:33 AM

Share

ನಟಿ ಕೃತಿ ಕರಬಂಧ (Kriti Kharbanda) ಅವರು ಹಲವು ಭಾಷೆಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರು ಹಲವು ಸಿನಿಮಾಗಳು ಸೂಪರ್ ಹಿಟ್ ಎನಿಸಿಕೊಂಡಿವೆ. ಈಗ ಕೃತಿ ಕರಬಂಧ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಕನ್ನಡ ಸಿನಿಮಾ ಶೂಟಿಂಗ್​ಗಾಗಿ ಆಗಮಿಸಿದ್ದ ವೇಳೆ ಅವರಿಗೆ ಹಾರಿಬಲ್ ಅನುಭವ ಆಗಿತ್ತು. ಇದನ್ನು ಅವರು ವಿವರಿಸಿದ್ದಾರೆ. ಒಂದೊಮ್ಮೆ ಅವರು ಸ್ವಲ್ಪ ಎಚ್ಚರ ತಪ್ಪಿದ್ದರೂ ಅವರ ಖಾಸಗಿ ವಿಡಿಯೋ ಲೀಕ್ ಆಗುತ್ತಿತ್ತು.

ಹೋಟೆಲ್​ಗಳಲ್ಲಿ ತಂಗಿದ್ದಾಗ ಸಾಕಷ್ಟು ಎಚ್ಚರಿಕೆ ಬೇಕು. ಏಕೆಂದರೆ ಕೆಲವರು ಕದ್ದು ಶೂಟ್ ಮಾಡಲು ಕ್ಯಾಮೆರಾ ಇಟ್ಟಿರುತ್ತಾರೆ. ಕೃತಿಗೆ ಆದ ಅನುಭವ ಕೂಡ ಇಂಥದ್ದೇ. ಅದೂ ಕನ್ನಡ ಸಿನಿಮಾ ಶೂಟಿಂಗ್ ವೇಳೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಹೇಗೆ ಕ್ಯಾಮೆರಾ ಪತ್ತೆ ಹಚ್ಚಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ.

‘ಕನ್ನಡ ಸಿನಿಮಾ ಶೂಟಿಂಗ್​ನ ಸಂದರ್ಭದ ಒಂದು ಘಟನೆ ನನಗೆ ಇನ್ನೂ ನೆನಪಿದೆ. ಹೋಟೆಲ್ ಬಾಯ್ ನನ್ನ ರೂಂನಲ್ಲಿ ಕ್ಯಾಮೆರಾ ಇಟ್ಟಿದ್ದ. ನಾನು ಮತ್ತು ನನ್ನ ಸ್ಟಾಫ್​ಗಳು ಹೋಟೆಲ್​ಗೆ ಹೋದ ತಕ್ಷಣ ಒಮ್ಮೆ ಎಲ್ಲವನ್ನೂ ಪರೀಕ್ಷೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದೇವೆ. ಕ್ಯಾಮೆರಾ ಇಟ್ಟವನು ಪ್ರೋ ಆಗಿರಲಿಲ್ಲ. ಹೀಗಾಗಿ, ನನಗೆ ಆ ಕ್ಯಾಮೆರಾ ಸುಲಭದಲ್ಲಿ ಕಂಡಿತು. ಸೆಟ್​ಟಾಪ್ ಬಾಕ್ಸ್ ಹಿಂಭಾಗದಲ್ಲಿ ಆತ ಕ್ಯಾಮೆರಾ ಇಟ್ಟಿದ್ದ. ನಿಜಕ್ಕೂ ಇದು ಭಯಾನಕ ಅನುಭವ ಆಗಿತ್ತು’ ಎಂದು ಕೃತಿ ಕರಬಂಧ ಹೇಳಿದ್ದಾರೆ.

ಇದನ್ನೂ ಓದಿ: ಬಿಕಿನಿ ಧರಿಸಿ ಗ್ಲಾಮರಸ್ ಅವತಾರ ತಾಳಿದ;ಗೂಗ್ಲಿ; ಚೆಲುವೆ ಕೃತಿ ಕರಬಂಧ

ಕನ್ನಡ ಚಿತ್ರರಂಗದ ಜೊತೆ ಕೃತಿ ಒಳ್ಳೆಯ ನಂಟು ಹೊಂದಿದ್ದಾರೆ. 2010ರಲ್ಲಿ ರಿಲೀಸ್ ಆದ ‘ಚಿರು’ ಅವರ ನಟನೆಯ ಕನ್ನಡದ ಮೊದಲ ಸಿನಿಮಾ. ‘ಪ್ರೇಮ್ ಅಡ್ಡ’, ‘ಗಲಾಟೆ’ ಸಿನಿಮಾಗಳಲ್ಲಿ ಅವರು ನಟಿಸಿದರು. ‘ಗೂಗ್ಲಿ’ ಸಿನಿಮಾದಲ್ಲಿ ಯಶ್ ಜೊತೆ ತೆರೆಹಂಚಿಕೊಂಡು ಮಿಂಚಿದರು. ಬಳಿಕ ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. 2018ರ ‘ದಳಪತಿ’ ಅವರು ಕೊನೆಯದಾಗಿ ನಟಿಸಿದ ಕನ್ನಡ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!