AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಐಪಿ’ ಸಿನಿಮಾದ ತಾಯಿ-ಮಗನ ಬಾಂಧವ್ಯದ ಹಾಡಿಗೆ ಧ್ವನಿ ನೀಡಿದ ಕೆ.ಎಸ್. ಚಿತ್ರಾ

ಬಹುದಿನಗಳ ಬಳಿಕ ಹಿರಿಯ ಗಾಯಕಿ ಕೆ.ಎಸ್​. ಚಿತ್ರಾ ಅವರು ಕನ್ನಡದ ಸಿನಿಮಾಗೆ ಹಾಡಿದ್ದಾರೆ. ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಸಿನಿಮಾದ ಮದರ್​ ಸೆಂಟ್​ಮೆಂಟ್​ ಹಾಡು ಕೆ.ಎಸ್​. ಚಿತ್ರಾ ಅವರ ಕಂಠದಲ್ಲಿ ಮೂಡಿಬಂದಿದೆ. ಇದು ಚಿತ್ರತಂಡದ ಬಲವನ್ನು ಹೆಚ್ಚಿಸಿದೆ. ಬ್ರಹ್ಮ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದು, ಆರ್.ಎಸ್. ಮೋಹನ್ ಕುಮಾರ್ ಮತ್ತು ಆರ್. ಅಚ್ಯುತ್ ರಾವ್ ನಿರ್ಮಾಣ ಮಾಡುತ್ತಿದ್ದಾರೆ.

‘ವಿಐಪಿ’ ಸಿನಿಮಾದ ತಾಯಿ-ಮಗನ ಬಾಂಧವ್ಯದ ಹಾಡಿಗೆ ಧ್ವನಿ ನೀಡಿದ ಕೆ.ಎಸ್. ಚಿತ್ರಾ
ಕೆ.ಎಸ್​. ಚಿತ್ರಾ ಜೊತೆ ‘ವಿಐಪಿ’ ಚಿತ್ರತಂಡ
ಮದನ್​ ಕುಮಾರ್​
|

Updated on: Jul 07, 2024 | 11:24 PM

Share

ಗಾಯಕಿ ಕೆ.ಎಸ್​. ಚಿತ್ರಾ ಅವರು ಕನ್ನಡದಲ್ಲಿ ಹಲವಾರು ಸೂಪರ್​ ಹಿಟ್​ ಗೀತೆಗಳನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಇತ್ತೀಚಿನ ವರ್ಷಗಳಲ್ಲಿ ಅವರು ಕನ್ನಡದಲ್ಲಿ ಯಾವುದೇ ಗೀತೆ ಹಾಡಿರಲಿಲ್ಲ. ಈಗ ಅವರು ಕನ್ನಡದಲ್ಲಿ ಹೊಸ ಸಾಂಗ್​ ಹಾಡಿದ್ದಾರೆ. ಕನ್ನಡದ ‘ವಿಐಪಿ’ ಸಿನಿಮಾಗೆ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದ ‘ಬಾರೋ ಕಂದ..’ ಎಂಬ ಹಾಡಿಗೆ ವಿ. ನಾಗೇಂದ್ರ ಪ್ರಸಾದ್​ ಅವರು ಸಾಹಿತ್ಯ ರಚಿಸಿದ್ದಾರೆ. ಇದೇ ಹಾಡು ಕೆ.ಎಸ್​. ಚಿತ್ರಾ ಅವರ ಕಂಠದಲ್ಲಿ ಮೂಡಿಬಂದಿದೆ. ಈ ಸಿನಿಮಾಗೆ ವಸಿಷ್ಠ ಸಿಂಹ ಹೀರೋ.

ವಸಿಷ್ಠ ಸಿಂಹ ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ‘ವಿಐಪಿ’ ಸಿನಿಮಾದಲ್ಲಿನ ತಾಯಿ-ಮಗನ ಬಾಂಧವ್ಯ ಸಾರುವ ಹಾಡು ಇದು. ಕೆ.ಎಸ್. ಚಿತ್ರಾ ಅವರು ಈ ಗೀತೆ ಹಾಡಿದ್ದು, ಚಿತ್ರತಂಡಕ್ಕೆ ಖುಷಿ ನೀಡಿದೆ. ಈ ಬಗ್ಗೆ ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ಮಾತನಾಡಿದ್ದಾರೆ. ‘ಅಂತಹ ಅದ್ಭುತ ಗಾಯಕಿ ನಮ್ಮ ಸಿನಿಮಾ ಗೀತೆಯನ್ನು ಹಾಡಿದ್ದು ತುಂಬಾ ಸಂತೋಷವಾಯಿತು. ಅವರು ಅದ್ಭುತವಾಗಿ ಹಾಡಿದ್ದಾರೆ.‌ ಹಾಡಿದ ಬಳಿಕ ತಾವು ಹಾಡಿರುವುದು ಇಷ್ಟವಾಯಿತಾ ಎಂದು ಮ್ಯೂಸಿಕ್​ ಡೈರೆಕ್ಟರ್​ ಹರ್ಷವರ್ಧನ್ ರಾಜ್ ಬಳಿ ಅವರು ಕೇಳುತ್ತಿದ್ದರು. ಇಷ್ಟ ಆಗದಿದ್ದರೆ ಮತ್ತೊಮ್ಮೆ ಹಾಡುತ್ತೇನೆ ಅಂದರು. ಅಂಥ ದೊಡ್ಡ ಗಾಯಕಿ ಆದರೂ ಅವರಲ್ಲಿನ ಸರಳತೆ ಎಲ್ಲರಿಗೂ ಮಾದರಿ’ ಎಂದು ಅಫ್ಜಲ್​ ಹೇಳಿದ್ದಾರೆ.

ಆರ್.ಎಸ್. ಮೋಹನ್ ಕುಮಾರ್ ಮತ್ತು ಆರ್. ಅಚ್ಯುತ್ ರಾವ್ ಅವರು ‘ಕಲಾ ಸೃಷ್ಟಿ ಪ್ರೊಡಕ್ಷನ್ಸ್’ ಮೂಲಕ ‘ವಿಐಪಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮೇಕಿಂಗ್ ಕಾರಣದಿಂದ ಈ ಸಿನಿಮಾ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ವಸಿಷ್ಠ ಸಿಂಹ ಅವರಿಗೆ ಜೋಡಿಯಾಗಿ ತೇಜಸ್ವಿನಿ ಶರ್ಮಾ ನಟಿಸುತ್ತಿದ್ದಾರೆ. ಬಲ ರಾಜವಾಡಿ, ಸುನೀಲ್ ಪುರಾಣಿಕ್, ಅಫ್ಜಲ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಹನುಮಂತೇಗೌಡ, ರಣವೀರ್, ರಾಮ್ ಕಶ್ಯಪ್, ಸನತ್, ಶ್ರೀದತ್ತ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಜೀವ್ ಗಣೇಸನ್ ಅವರು ಛಾಯಾಗ್ರಹಣ ಹಾಗೂ ಸತೀಶ್ ಚಂದ್ರಯ್ಯ ಅವರು ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಸೆರೆಮನೆಯಲಿ ವಾಸ, ನೋವಿನಲಿ ದಾಸ..’: ದರ್ಶನ್​ ಮೇಲಿನ ಅಭಿಮಾನಕ್ಕೆ ಹೊಸ ಹಾಡು

ಬೆಂಗಳೂರು ಸುತ್ತಮುತ್ತ ‘ವಿಐಪಿ’ ಸಿನಿಮಾಗೆ ಶೂಟಿಂಗ್​ ನಡೆಯುತ್ತಿದೆ. ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್​ನಿಂದ ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇವೆ. ವಸಿಷ್ಠ ಸಿಂಹ ಅವರು ಈವರೆಗೆ ಮಾಡಿರದಂತಹ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡುತ್ತಿದ್ದಾರೆ ಎಂದಿದ್ದಾರೆ ನಿರ್ದೇಶಕ ಬ್ರಹ್ಮ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು