AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಐಪಿ’ ಸಿನಿಮಾದ ತಾಯಿ-ಮಗನ ಬಾಂಧವ್ಯದ ಹಾಡಿಗೆ ಧ್ವನಿ ನೀಡಿದ ಕೆ.ಎಸ್. ಚಿತ್ರಾ

ಬಹುದಿನಗಳ ಬಳಿಕ ಹಿರಿಯ ಗಾಯಕಿ ಕೆ.ಎಸ್​. ಚಿತ್ರಾ ಅವರು ಕನ್ನಡದ ಸಿನಿಮಾಗೆ ಹಾಡಿದ್ದಾರೆ. ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಸಿನಿಮಾದ ಮದರ್​ ಸೆಂಟ್​ಮೆಂಟ್​ ಹಾಡು ಕೆ.ಎಸ್​. ಚಿತ್ರಾ ಅವರ ಕಂಠದಲ್ಲಿ ಮೂಡಿಬಂದಿದೆ. ಇದು ಚಿತ್ರತಂಡದ ಬಲವನ್ನು ಹೆಚ್ಚಿಸಿದೆ. ಬ್ರಹ್ಮ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದು, ಆರ್.ಎಸ್. ಮೋಹನ್ ಕುಮಾರ್ ಮತ್ತು ಆರ್. ಅಚ್ಯುತ್ ರಾವ್ ನಿರ್ಮಾಣ ಮಾಡುತ್ತಿದ್ದಾರೆ.

‘ವಿಐಪಿ’ ಸಿನಿಮಾದ ತಾಯಿ-ಮಗನ ಬಾಂಧವ್ಯದ ಹಾಡಿಗೆ ಧ್ವನಿ ನೀಡಿದ ಕೆ.ಎಸ್. ಚಿತ್ರಾ
ಕೆ.ಎಸ್​. ಚಿತ್ರಾ ಜೊತೆ ‘ವಿಐಪಿ’ ಚಿತ್ರತಂಡ
ಮದನ್​ ಕುಮಾರ್​
|

Updated on: Jul 07, 2024 | 11:24 PM

Share

ಗಾಯಕಿ ಕೆ.ಎಸ್​. ಚಿತ್ರಾ ಅವರು ಕನ್ನಡದಲ್ಲಿ ಹಲವಾರು ಸೂಪರ್​ ಹಿಟ್​ ಗೀತೆಗಳನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಇತ್ತೀಚಿನ ವರ್ಷಗಳಲ್ಲಿ ಅವರು ಕನ್ನಡದಲ್ಲಿ ಯಾವುದೇ ಗೀತೆ ಹಾಡಿರಲಿಲ್ಲ. ಈಗ ಅವರು ಕನ್ನಡದಲ್ಲಿ ಹೊಸ ಸಾಂಗ್​ ಹಾಡಿದ್ದಾರೆ. ಕನ್ನಡದ ‘ವಿಐಪಿ’ ಸಿನಿಮಾಗೆ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದ ‘ಬಾರೋ ಕಂದ..’ ಎಂಬ ಹಾಡಿಗೆ ವಿ. ನಾಗೇಂದ್ರ ಪ್ರಸಾದ್​ ಅವರು ಸಾಹಿತ್ಯ ರಚಿಸಿದ್ದಾರೆ. ಇದೇ ಹಾಡು ಕೆ.ಎಸ್​. ಚಿತ್ರಾ ಅವರ ಕಂಠದಲ್ಲಿ ಮೂಡಿಬಂದಿದೆ. ಈ ಸಿನಿಮಾಗೆ ವಸಿಷ್ಠ ಸಿಂಹ ಹೀರೋ.

ವಸಿಷ್ಠ ಸಿಂಹ ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ‘ವಿಐಪಿ’ ಸಿನಿಮಾದಲ್ಲಿನ ತಾಯಿ-ಮಗನ ಬಾಂಧವ್ಯ ಸಾರುವ ಹಾಡು ಇದು. ಕೆ.ಎಸ್. ಚಿತ್ರಾ ಅವರು ಈ ಗೀತೆ ಹಾಡಿದ್ದು, ಚಿತ್ರತಂಡಕ್ಕೆ ಖುಷಿ ನೀಡಿದೆ. ಈ ಬಗ್ಗೆ ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ಮಾತನಾಡಿದ್ದಾರೆ. ‘ಅಂತಹ ಅದ್ಭುತ ಗಾಯಕಿ ನಮ್ಮ ಸಿನಿಮಾ ಗೀತೆಯನ್ನು ಹಾಡಿದ್ದು ತುಂಬಾ ಸಂತೋಷವಾಯಿತು. ಅವರು ಅದ್ಭುತವಾಗಿ ಹಾಡಿದ್ದಾರೆ.‌ ಹಾಡಿದ ಬಳಿಕ ತಾವು ಹಾಡಿರುವುದು ಇಷ್ಟವಾಯಿತಾ ಎಂದು ಮ್ಯೂಸಿಕ್​ ಡೈರೆಕ್ಟರ್​ ಹರ್ಷವರ್ಧನ್ ರಾಜ್ ಬಳಿ ಅವರು ಕೇಳುತ್ತಿದ್ದರು. ಇಷ್ಟ ಆಗದಿದ್ದರೆ ಮತ್ತೊಮ್ಮೆ ಹಾಡುತ್ತೇನೆ ಅಂದರು. ಅಂಥ ದೊಡ್ಡ ಗಾಯಕಿ ಆದರೂ ಅವರಲ್ಲಿನ ಸರಳತೆ ಎಲ್ಲರಿಗೂ ಮಾದರಿ’ ಎಂದು ಅಫ್ಜಲ್​ ಹೇಳಿದ್ದಾರೆ.

ಆರ್.ಎಸ್. ಮೋಹನ್ ಕುಮಾರ್ ಮತ್ತು ಆರ್. ಅಚ್ಯುತ್ ರಾವ್ ಅವರು ‘ಕಲಾ ಸೃಷ್ಟಿ ಪ್ರೊಡಕ್ಷನ್ಸ್’ ಮೂಲಕ ‘ವಿಐಪಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮೇಕಿಂಗ್ ಕಾರಣದಿಂದ ಈ ಸಿನಿಮಾ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ವಸಿಷ್ಠ ಸಿಂಹ ಅವರಿಗೆ ಜೋಡಿಯಾಗಿ ತೇಜಸ್ವಿನಿ ಶರ್ಮಾ ನಟಿಸುತ್ತಿದ್ದಾರೆ. ಬಲ ರಾಜವಾಡಿ, ಸುನೀಲ್ ಪುರಾಣಿಕ್, ಅಫ್ಜಲ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಹನುಮಂತೇಗೌಡ, ರಣವೀರ್, ರಾಮ್ ಕಶ್ಯಪ್, ಸನತ್, ಶ್ರೀದತ್ತ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಜೀವ್ ಗಣೇಸನ್ ಅವರು ಛಾಯಾಗ್ರಹಣ ಹಾಗೂ ಸತೀಶ್ ಚಂದ್ರಯ್ಯ ಅವರು ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಸೆರೆಮನೆಯಲಿ ವಾಸ, ನೋವಿನಲಿ ದಾಸ..’: ದರ್ಶನ್​ ಮೇಲಿನ ಅಭಿಮಾನಕ್ಕೆ ಹೊಸ ಹಾಡು

ಬೆಂಗಳೂರು ಸುತ್ತಮುತ್ತ ‘ವಿಐಪಿ’ ಸಿನಿಮಾಗೆ ಶೂಟಿಂಗ್​ ನಡೆಯುತ್ತಿದೆ. ಈಗಾಗಲೇ ವಸಿಷ್ಠ ಸಿಂಹ ಅವರ ಫಸ್ಟ್ ಲುಕ್ ಪೋಸ್ಟರ್​ನಿಂದ ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇವೆ. ವಸಿಷ್ಠ ಸಿಂಹ ಅವರು ಈವರೆಗೆ ಮಾಡಿರದಂತಹ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡುತ್ತಿದ್ದಾರೆ ಎಂದಿದ್ದಾರೆ ನಿರ್ದೇಶಕ ಬ್ರಹ್ಮ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ