AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ

ಶಿವರಾಜ್​ಕುಮಾರ್​ ಅವರ ಫಿಟ್​ನೆಸ್​ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್​ನಲ್ಲಿದ್ದ ಅಭಿಮಾನಿಗಳು ಈ ಗಣ್ಯರಿಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ
ಕೆಎಸ್​ ಈಶ್ವರಪ್ಪ, ಶಿವರಾಜ್​ಕುಮಾರ್​
TV9 Web
| Edited By: |

Updated on:Jul 30, 2021 | 1:45 PM

Share

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಜಟಾಪಟಿ ಶುರುವಾದಾಗಿನಿಂದಲೂ ರಾಜಕೀಯ ವಲಯದಲ್ಲಿ ತೀವ್ರ ಕೌತುಕ ನಿರ್ಮಾಣ ಆಗಿತ್ತು. ಈಗ ಸಚಿವ ಸಂಪುಟದ ಕುರಿತು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಶಾಸಕರ ನಡೆ-ನುಡಿ ಕೂಡ ಗಮನ ಸೆಳೆಯುತ್ತಿದೆ. ಈ ನಡುವೆ ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ (Shivarajkumar) ಮತ್ತು ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಪರಸ್ಪರ ಭೇಟಿ ಆಗಿರುವುದು ಕೌತುಕ ಮೂಡಿಸಿದೆ. ಮೈಸೂರಿನಲ್ಲಿ (Mysore) ಈ ಗಣ್ಯರಿಬ್ಬರು ಭೇಟಿ ಆಗಿದ್ದಾರೆ. ಈ ದಿಢೀರ್​ ಭೇಟಿಗೆ ಕಾರಣ ಏನು ಎಂದು ಎಲ್ಲರ ಮನದಲ್ಲೂ ಪ್ರಶ್ನೆ ಮೂಡಿದೆ. 

ಶಿವರಾಜ್​ಕುಮಾರ್​ ಅವರು ಈವರೆಗೂ ನೇರವಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದವರಲ್ಲ. ಆದರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ನಂಟು ಮೊದಲಿನಿಂದಲೂ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಳಿಯ ಶಿವರಾಜ್​ಕುಮಾರ್​. ಅವರ ಪತ್ನಿ ಗೀತಾ ಕೂಡ ಈ ಹಿಂದೆ ಚುನಾವಣೆಯ ಕಣಕ್ಕೆ ಇಳಿದಿದ್ದರು. ಆಗೆಲ್ಲ ಪತ್ನಿ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡಿದ್ದರು. ಹೀಗೆ ಪರೋಕ್ಷವಾಗಿ ಅವರು ರಾಜಕೀಯದ ಜೊತೆ ಸಂಪರ್ಕ ಹೊಂದಿದ್ದಾರೆ.

ಈಗ ಶಿವರಾಜ್​ಕುಮಾರ್​ ಅವರು ಮೈಸೂರಿನಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರನ್ನು ಭೇಟಿ ಆಗಿರುವುದಕ್ಕೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಇದೊಂದು ಸಹಜ ಭೇಟಿ ಎನ್ನಲಾಗಿದೆ. ಇಂದು (ಜು.30) ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಸಲುವಾಗಿ ಈಶ್ವರಪ್ಪ ಬಂದಿದ್ದಾರೆ. ಬಳಿಕ ಉಪಾಹಾರಕ್ಕಾಗಿ ಖಾಸಗಿ ಹೋಟೆಲ್​ಗೆ ಅವರು ತೆರಳಿದರು. ಇದೇ ವೇಳೆ ಆ ಹೋಟೆಲ್​ನಲ್ಲಿದ್ದ ಶಿವರಾಜ್​ಕುಮಾರ್​ ಅವರನ್ನು ಈಶ್ವರಪ್ಪ ಭೇಟಿಯಾದರು.

ಈ ಭೇಟಿಯಲ್ಲಿ ಶಿವರಾಜ್​ಕುಮಾರ್​ ಮತ್ತು ಈಶ್ವರಪ್ಪ ಅವರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಶಿವರಾಜ್​ಕುಮಾರ್​ ಅವರ ಫಿಟ್​ನೆಸ್​ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್​ನಲ್ಲಿದ್ದ ಅಭಿಮಾನಿಗಳು ಇಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಡಾ. ರಾಜ್​ಕುಮಾರ್​ ಅವರ ತಂಗಿ (ನಾಗತ್ತೆ) ಅವರನ್ನು ನೋಡಿಕೊಂಡು ಬರಲು ಶಿವರಾಜ್​ಕುಮಾರ್​ ಗಾಜನೂರಿನತ್ತ ಪ್ರಯಾಣ ಬೆಳೆಸಿದ್ದರು.

ಸದ್ಯ ಶಿವರಾಜ್​ಕುಮಾರ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಎ. ಹರ್ಷ ನಿರ್ದೇಶನದ ‘ಭಜರಂಗಿ 2’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ‘ವೇದ’, ‘ಬೈರಾಗಿ’ ಮುಂತಾದ ಸಿನಿಮಾಗಳ ಕೆಲಸಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

Published On - 1:37 pm, Fri, 30 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ