AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ

ಶಿವರಾಜ್​ಕುಮಾರ್​ ಅವರ ಫಿಟ್​ನೆಸ್​ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್​ನಲ್ಲಿದ್ದ ಅಭಿಮಾನಿಗಳು ಈ ಗಣ್ಯರಿಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ
ಕೆಎಸ್​ ಈಶ್ವರಪ್ಪ, ಶಿವರಾಜ್​ಕುಮಾರ್​
TV9 Web
| Edited By: |

Updated on:Jul 30, 2021 | 1:45 PM

Share

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಜಟಾಪಟಿ ಶುರುವಾದಾಗಿನಿಂದಲೂ ರಾಜಕೀಯ ವಲಯದಲ್ಲಿ ತೀವ್ರ ಕೌತುಕ ನಿರ್ಮಾಣ ಆಗಿತ್ತು. ಈಗ ಸಚಿವ ಸಂಪುಟದ ಕುರಿತು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಶಾಸಕರ ನಡೆ-ನುಡಿ ಕೂಡ ಗಮನ ಸೆಳೆಯುತ್ತಿದೆ. ಈ ನಡುವೆ ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ (Shivarajkumar) ಮತ್ತು ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಪರಸ್ಪರ ಭೇಟಿ ಆಗಿರುವುದು ಕೌತುಕ ಮೂಡಿಸಿದೆ. ಮೈಸೂರಿನಲ್ಲಿ (Mysore) ಈ ಗಣ್ಯರಿಬ್ಬರು ಭೇಟಿ ಆಗಿದ್ದಾರೆ. ಈ ದಿಢೀರ್​ ಭೇಟಿಗೆ ಕಾರಣ ಏನು ಎಂದು ಎಲ್ಲರ ಮನದಲ್ಲೂ ಪ್ರಶ್ನೆ ಮೂಡಿದೆ. 

ಶಿವರಾಜ್​ಕುಮಾರ್​ ಅವರು ಈವರೆಗೂ ನೇರವಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದವರಲ್ಲ. ಆದರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ನಂಟು ಮೊದಲಿನಿಂದಲೂ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಳಿಯ ಶಿವರಾಜ್​ಕುಮಾರ್​. ಅವರ ಪತ್ನಿ ಗೀತಾ ಕೂಡ ಈ ಹಿಂದೆ ಚುನಾವಣೆಯ ಕಣಕ್ಕೆ ಇಳಿದಿದ್ದರು. ಆಗೆಲ್ಲ ಪತ್ನಿ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡಿದ್ದರು. ಹೀಗೆ ಪರೋಕ್ಷವಾಗಿ ಅವರು ರಾಜಕೀಯದ ಜೊತೆ ಸಂಪರ್ಕ ಹೊಂದಿದ್ದಾರೆ.

ಈಗ ಶಿವರಾಜ್​ಕುಮಾರ್​ ಅವರು ಮೈಸೂರಿನಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರನ್ನು ಭೇಟಿ ಆಗಿರುವುದಕ್ಕೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಇದೊಂದು ಸಹಜ ಭೇಟಿ ಎನ್ನಲಾಗಿದೆ. ಇಂದು (ಜು.30) ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಸಲುವಾಗಿ ಈಶ್ವರಪ್ಪ ಬಂದಿದ್ದಾರೆ. ಬಳಿಕ ಉಪಾಹಾರಕ್ಕಾಗಿ ಖಾಸಗಿ ಹೋಟೆಲ್​ಗೆ ಅವರು ತೆರಳಿದರು. ಇದೇ ವೇಳೆ ಆ ಹೋಟೆಲ್​ನಲ್ಲಿದ್ದ ಶಿವರಾಜ್​ಕುಮಾರ್​ ಅವರನ್ನು ಈಶ್ವರಪ್ಪ ಭೇಟಿಯಾದರು.

ಈ ಭೇಟಿಯಲ್ಲಿ ಶಿವರಾಜ್​ಕುಮಾರ್​ ಮತ್ತು ಈಶ್ವರಪ್ಪ ಅವರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಶಿವರಾಜ್​ಕುಮಾರ್​ ಅವರ ಫಿಟ್​ನೆಸ್​ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್​ನಲ್ಲಿದ್ದ ಅಭಿಮಾನಿಗಳು ಇಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಡಾ. ರಾಜ್​ಕುಮಾರ್​ ಅವರ ತಂಗಿ (ನಾಗತ್ತೆ) ಅವರನ್ನು ನೋಡಿಕೊಂಡು ಬರಲು ಶಿವರಾಜ್​ಕುಮಾರ್​ ಗಾಜನೂರಿನತ್ತ ಪ್ರಯಾಣ ಬೆಳೆಸಿದ್ದರು.

ಸದ್ಯ ಶಿವರಾಜ್​ಕುಮಾರ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಎ. ಹರ್ಷ ನಿರ್ದೇಶನದ ‘ಭಜರಂಗಿ 2’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ‘ವೇದ’, ‘ಬೈರಾಗಿ’ ಮುಂತಾದ ಸಿನಿಮಾಗಳ ಕೆಲಸಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

Published On - 1:37 pm, Fri, 30 July 21

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?