Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ

ಶಿವರಾಜ್​ಕುಮಾರ್​ ಅವರ ಫಿಟ್​ನೆಸ್​ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್​ನಲ್ಲಿದ್ದ ಅಭಿಮಾನಿಗಳು ಈ ಗಣ್ಯರಿಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ
ಕೆಎಸ್​ ಈಶ್ವರಪ್ಪ, ಶಿವರಾಜ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on:Jul 30, 2021 | 1:45 PM

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಜಟಾಪಟಿ ಶುರುವಾದಾಗಿನಿಂದಲೂ ರಾಜಕೀಯ ವಲಯದಲ್ಲಿ ತೀವ್ರ ಕೌತುಕ ನಿರ್ಮಾಣ ಆಗಿತ್ತು. ಈಗ ಸಚಿವ ಸಂಪುಟದ ಕುರಿತು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಶಾಸಕರ ನಡೆ-ನುಡಿ ಕೂಡ ಗಮನ ಸೆಳೆಯುತ್ತಿದೆ. ಈ ನಡುವೆ ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ (Shivarajkumar) ಮತ್ತು ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಪರಸ್ಪರ ಭೇಟಿ ಆಗಿರುವುದು ಕೌತುಕ ಮೂಡಿಸಿದೆ. ಮೈಸೂರಿನಲ್ಲಿ (Mysore) ಈ ಗಣ್ಯರಿಬ್ಬರು ಭೇಟಿ ಆಗಿದ್ದಾರೆ. ಈ ದಿಢೀರ್​ ಭೇಟಿಗೆ ಕಾರಣ ಏನು ಎಂದು ಎಲ್ಲರ ಮನದಲ್ಲೂ ಪ್ರಶ್ನೆ ಮೂಡಿದೆ. 

ಶಿವರಾಜ್​ಕುಮಾರ್​ ಅವರು ಈವರೆಗೂ ನೇರವಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದವರಲ್ಲ. ಆದರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ನಂಟು ಮೊದಲಿನಿಂದಲೂ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಳಿಯ ಶಿವರಾಜ್​ಕುಮಾರ್​. ಅವರ ಪತ್ನಿ ಗೀತಾ ಕೂಡ ಈ ಹಿಂದೆ ಚುನಾವಣೆಯ ಕಣಕ್ಕೆ ಇಳಿದಿದ್ದರು. ಆಗೆಲ್ಲ ಪತ್ನಿ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡಿದ್ದರು. ಹೀಗೆ ಪರೋಕ್ಷವಾಗಿ ಅವರು ರಾಜಕೀಯದ ಜೊತೆ ಸಂಪರ್ಕ ಹೊಂದಿದ್ದಾರೆ.

ಈಗ ಶಿವರಾಜ್​ಕುಮಾರ್​ ಅವರು ಮೈಸೂರಿನಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರನ್ನು ಭೇಟಿ ಆಗಿರುವುದಕ್ಕೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಇದೊಂದು ಸಹಜ ಭೇಟಿ ಎನ್ನಲಾಗಿದೆ. ಇಂದು (ಜು.30) ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಸಲುವಾಗಿ ಈಶ್ವರಪ್ಪ ಬಂದಿದ್ದಾರೆ. ಬಳಿಕ ಉಪಾಹಾರಕ್ಕಾಗಿ ಖಾಸಗಿ ಹೋಟೆಲ್​ಗೆ ಅವರು ತೆರಳಿದರು. ಇದೇ ವೇಳೆ ಆ ಹೋಟೆಲ್​ನಲ್ಲಿದ್ದ ಶಿವರಾಜ್​ಕುಮಾರ್​ ಅವರನ್ನು ಈಶ್ವರಪ್ಪ ಭೇಟಿಯಾದರು.

ಈ ಭೇಟಿಯಲ್ಲಿ ಶಿವರಾಜ್​ಕುಮಾರ್​ ಮತ್ತು ಈಶ್ವರಪ್ಪ ಅವರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಶಿವರಾಜ್​ಕುಮಾರ್​ ಅವರ ಫಿಟ್​ನೆಸ್​ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್​ನಲ್ಲಿದ್ದ ಅಭಿಮಾನಿಗಳು ಇಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಡಾ. ರಾಜ್​ಕುಮಾರ್​ ಅವರ ತಂಗಿ (ನಾಗತ್ತೆ) ಅವರನ್ನು ನೋಡಿಕೊಂಡು ಬರಲು ಶಿವರಾಜ್​ಕುಮಾರ್​ ಗಾಜನೂರಿನತ್ತ ಪ್ರಯಾಣ ಬೆಳೆಸಿದ್ದರು.

ಸದ್ಯ ಶಿವರಾಜ್​ಕುಮಾರ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಎ. ಹರ್ಷ ನಿರ್ದೇಶನದ ‘ಭಜರಂಗಿ 2’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ‘ವೇದ’, ‘ಬೈರಾಗಿ’ ಮುಂತಾದ ಸಿನಿಮಾಗಳ ಕೆಲಸಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ನಾಯಕಿಯಾದ್ರು ಮೆಹ್ರೀನ್​ ಪೀರ್ಜಾದಾ

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

Published On - 1:37 pm, Fri, 30 July 21

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ