AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್​ ಖಾತೆಯಿಂದ ಮಾಯವಾಯ್ತು ಹಣ; ಕೋರ್ಟ್​​ಗೆ​ ಅಲೆಯೋಕೆ ಶುರು ಹಚ್ಚಿಕೊಂಡ ನಟ

ಸಿನಿಮಾದ ಬಹುತೇಕ ಶೂಟಿಂಗ್​ ಮಲೆನಾಡ ಭಾಗದಲ್ಲೇ ನಡೆದಿದೆ. ಟ್ರೇಲರ್​ನ ಮೊದಲ ದೃಶ್ಯದಲ್ಲೇ ಮಲೆನಾಡ ಸೌಂದರ್ಯವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ನಿರ್ದೇಶಕ ಯೋಗರಾಜ್​ ಭಟ್​ ಅವರ ನಿರೂಪಣೆ ಟ್ರೇಲರ್​ನ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ.

ದಿಗಂತ್​ ಖಾತೆಯಿಂದ ಮಾಯವಾಯ್ತು ಹಣ; ಕೋರ್ಟ್​​ಗೆ​ ಅಲೆಯೋಕೆ ಶುರು ಹಚ್ಚಿಕೊಂಡ ನಟ
ದಿಗಂತ್
ರಾಜೇಶ್ ದುಗ್ಗುಮನೆ
|

Updated on:Mar 15, 2022 | 5:11 PM

Share

ದಿಗಂತ್​ (Diganth) ಎಂದಾಕ್ಷಣ ನೆನಪಿಗೆ ಬರೋದು ಚಾಕೋಲೇಟ್​ ಬಾಯ್​ ಲುಕ್​. ಅವರು ಈ ಬಾರಿ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ (Kshamisi Nimma Khaatheyalli Hanavilla) ಸಿನಿಮಾದಲ್ಲಿ ಪಕ್ಕಾ ಹಳ್ಳಿ ಹುಡುಗನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಇಂದು (ಮಾರ್ಚ್​ 15) ರಿಲೀಸ್ ಆಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದಿಗಂತ್​ ಗೆಟಪ್​ ನೋಡಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಕನ್ನಡತಿ’ ಧಾರಾವಾಹಿ ಮೂಲಕ ಭುವಿ ಎಂದೇ ಫೇಮಸ್​ ಆದ ರಂಜನಿ ರಾಘವನ್ (Ranjani Raghavan)​ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್​ ಹೆಂಡತಿ ಐಂದ್ರಿತಾ ರೇ ವಕೀಲೆಯಾಗಿ ಕಾಣಿಸಿಕೊಂಡಿದ್ದಾರೆ. ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

ಸಿನಿಮಾದ ಬಹುತೇಕ ಶೂಟಿಂಗ್​ ಮಲೆನಾಡ ಭಾಗದಲ್ಲೇ ನಡೆದಿದೆ. ಟ್ರೇಲರ್​ನ ಮೊದಲ ದೃಶ್ಯದಲ್ಲೇ ಮಲೆನಾಡ ಸೌಂದರ್ಯವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ನಿರ್ದೇಶಕ ಯೋಗರಾಜ್​ ಭಟ್​ ಅವರ ನಿರೂಪಣೆ ಟ್ರೇಲರ್​ನ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಹಳ್ಳಿಗಳಲ್ಲಿ ಸಾಮಾನ್ಯ ಜನರು ಎದುರಿಸುವ ನಿತ್ಯ ಸಮಸ್ಯೆಗಳನ್ನು ಸಿನಿಮಾದಲ್ಲಿ ಹೈಲೈಟ್ ಮಾಡಲಾಗಿದೆ. ಸೇತುವೆ ನಿರ್ಮಾಣ ಆಗಬೇಕು ಎಂದು 20 ವರ್ಷದಿಂದ ಹೋರಾಟ ಮಾಡುತ್ತಿರುವ ಸೇತುವೆ ಸಿದ್ಧಣ್ಣನ ರೀತಿಯ ಹಲವು ಕ್ಯಾರೆಕ್ಟರ್​ಗಳು ಸಿನಿಮಾದಲ್ಲಿವೆ ಎಂಬುದಕ್ಕೆ ಈ ಟ್ರೇಲರ್​ ಸಾಕ್ಷ್ಯ ನೀಡಿದೆ.

ಸಿನಿಮಾದ ಹೀರೋ ಸೌತೇ ಬೀಜದ ಶಂಕ್ರನಿಗೆ ಚಿಂತೆಯೇ ಇಲ್ಲ. ಹೀಗಾಗಿ, ಆತನಿಗೆ ಸಂತೆಯಲ್ಲೂ ನಿದ್ರೆ ಬರುತ್ತದೆ. ಶಂಕ್ರನಿಗೆ ಅತ್ತೆ ಮಗಳ (ರಂಜನಿ ರಾಘವನ್​) ಕಂಡರೆ ಇಷ್ಟ. ಆದರೆ, ದುಡ್ಡೇ ಶಂಕ್ರನಿಗೆ ವಿಲನ್​. ಎಲ್ಲರೂ ಬಂದು ಬಂದು ಶಂಕ್ರನ ಬಳಿ ಹಣ ಕೇಳ್ತಾರೆ. ಒಂದು ದಿನ ಅವನ ಖಾತೆಯಲ್ಲಿರುವ ಹಣವೆಲ್ಲ ಕಾಣೆಯಾಗುತ್ತದೆ. ಇಲ್ಲಿಂದ ಶಂಕ್ರನ ಅಲೆದಾಟ ಶುರು. ಈ ಕೇಸ್​ನ ತೆಗೆದುಕೊಳ್ಳೋದು ವಕೀಲೆ ಪಾತ್ರ ಮಾಡಿರುವ ನಟಿ ಐಂದ್ರಿತಾ ರೇ. ಹೀಗೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾದ ಟ್ರೇಲರ್ ಮೂಡಿ ಬಂದಿದೆ. ಈ ಚಿತ್ರದಲ್ಲಿ ಉಮಾಶ್ರೀಯಂತಹ ಹಿರಿಯ ಕಲಾವಿದರೂ ನಟಿಸಿದ್ದಾರೆ.

ಉಪ್ಪಿ ಎಂಟರ್​ಟೇನರ್​ ಬ್ಯಾನರ್​ ಅಡಿಯಲ್ಲಿ ಸಿಲ್ಕ್​ ಮಂಜು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವಿನಾಯಕ್​ ಕೋಡ್ಸರ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪ್ರಜ್ವಲ್​ ಪೈ ಅವರು ಚಿತ್ರವನ್ನು ಸಹ ನಿರ್ಮಾಣ ಮಾಡುವುದರ ಜತೆಗೆ, ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ನಂದಕಿಶೋರ್​ ಎನ್​. ಛಾಯಾಗ್ರಹಣ, ರಾಹುಲ್​ ವಸಿಷ್ಟ ಸಂಕಲನ ಚಿತ್ರಕ್ಕೆ ಇದೆ. ಲಹರಿ ಮ್ಯೂಸಿಕ್​ ಯೂಟ್ಯೂಬ್​ ಚಾನೆಲ್​ನಲ್ಲಿ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.

ಈ ಮೊದಲು ಪೋಸ್ಟರ್​ ಮೂಲಕ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಈಗ ಚಿತ್ರದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. ಅಧಿಕೃತ ದಿನಾಂಕವನ್ನು ಚಿತ್ರತಂಡ ಇನ್ನಷ್ಟೇ ಘೋಷಣೆ ಮಾಡಬೇಕಿದೆ.

ಇದನ್ನೂ ಓದಿ: ದಿಗಂತ್​ ಖಾಸಗಿ ಜೀವನದ ಬಗ್ಗೆ ಜನ ಗೂಗಲ್​ನಲ್ಲಿ ಹುಡುಕಿದ ಪ್ರಶ್ನೆಗಳಿಗೆ ಅವರೇ ಕೊಟ್ರು ನೇರ ಉತ್ತರ

ಭುವಿ ಸೀರೆ ಬಗ್ಗೆ ಅನೇಕರಿಗೆ ಇದೆ ತಕರಾರು; ರಂಜನಿ ರಾಘವನ್​ ಬಿಚ್ಚಿಟ್ಟ ಅಚ್ಚರಿ ಮಾಹಿತಿ

Published On - 5:11 pm, Tue, 15 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!