AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್​ ಖಾತೆಯಿಂದ ಮಾಯವಾಯ್ತು ಹಣ; ಕೋರ್ಟ್​​ಗೆ​ ಅಲೆಯೋಕೆ ಶುರು ಹಚ್ಚಿಕೊಂಡ ನಟ

ಸಿನಿಮಾದ ಬಹುತೇಕ ಶೂಟಿಂಗ್​ ಮಲೆನಾಡ ಭಾಗದಲ್ಲೇ ನಡೆದಿದೆ. ಟ್ರೇಲರ್​ನ ಮೊದಲ ದೃಶ್ಯದಲ್ಲೇ ಮಲೆನಾಡ ಸೌಂದರ್ಯವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ನಿರ್ದೇಶಕ ಯೋಗರಾಜ್​ ಭಟ್​ ಅವರ ನಿರೂಪಣೆ ಟ್ರೇಲರ್​ನ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ.

ದಿಗಂತ್​ ಖಾತೆಯಿಂದ ಮಾಯವಾಯ್ತು ಹಣ; ಕೋರ್ಟ್​​ಗೆ​ ಅಲೆಯೋಕೆ ಶುರು ಹಚ್ಚಿಕೊಂಡ ನಟ
ದಿಗಂತ್
ರಾಜೇಶ್ ದುಗ್ಗುಮನೆ
|

Updated on:Mar 15, 2022 | 5:11 PM

Share

ದಿಗಂತ್​ (Diganth) ಎಂದಾಕ್ಷಣ ನೆನಪಿಗೆ ಬರೋದು ಚಾಕೋಲೇಟ್​ ಬಾಯ್​ ಲುಕ್​. ಅವರು ಈ ಬಾರಿ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ (Kshamisi Nimma Khaatheyalli Hanavilla) ಸಿನಿಮಾದಲ್ಲಿ ಪಕ್ಕಾ ಹಳ್ಳಿ ಹುಡುಗನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಇಂದು (ಮಾರ್ಚ್​ 15) ರಿಲೀಸ್ ಆಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದಿಗಂತ್​ ಗೆಟಪ್​ ನೋಡಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಕನ್ನಡತಿ’ ಧಾರಾವಾಹಿ ಮೂಲಕ ಭುವಿ ಎಂದೇ ಫೇಮಸ್​ ಆದ ರಂಜನಿ ರಾಘವನ್ (Ranjani Raghavan)​ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್​ ಹೆಂಡತಿ ಐಂದ್ರಿತಾ ರೇ ವಕೀಲೆಯಾಗಿ ಕಾಣಿಸಿಕೊಂಡಿದ್ದಾರೆ. ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

ಸಿನಿಮಾದ ಬಹುತೇಕ ಶೂಟಿಂಗ್​ ಮಲೆನಾಡ ಭಾಗದಲ್ಲೇ ನಡೆದಿದೆ. ಟ್ರೇಲರ್​ನ ಮೊದಲ ದೃಶ್ಯದಲ್ಲೇ ಮಲೆನಾಡ ಸೌಂದರ್ಯವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ನಿರ್ದೇಶಕ ಯೋಗರಾಜ್​ ಭಟ್​ ಅವರ ನಿರೂಪಣೆ ಟ್ರೇಲರ್​ನ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಹಳ್ಳಿಗಳಲ್ಲಿ ಸಾಮಾನ್ಯ ಜನರು ಎದುರಿಸುವ ನಿತ್ಯ ಸಮಸ್ಯೆಗಳನ್ನು ಸಿನಿಮಾದಲ್ಲಿ ಹೈಲೈಟ್ ಮಾಡಲಾಗಿದೆ. ಸೇತುವೆ ನಿರ್ಮಾಣ ಆಗಬೇಕು ಎಂದು 20 ವರ್ಷದಿಂದ ಹೋರಾಟ ಮಾಡುತ್ತಿರುವ ಸೇತುವೆ ಸಿದ್ಧಣ್ಣನ ರೀತಿಯ ಹಲವು ಕ್ಯಾರೆಕ್ಟರ್​ಗಳು ಸಿನಿಮಾದಲ್ಲಿವೆ ಎಂಬುದಕ್ಕೆ ಈ ಟ್ರೇಲರ್​ ಸಾಕ್ಷ್ಯ ನೀಡಿದೆ.

ಸಿನಿಮಾದ ಹೀರೋ ಸೌತೇ ಬೀಜದ ಶಂಕ್ರನಿಗೆ ಚಿಂತೆಯೇ ಇಲ್ಲ. ಹೀಗಾಗಿ, ಆತನಿಗೆ ಸಂತೆಯಲ್ಲೂ ನಿದ್ರೆ ಬರುತ್ತದೆ. ಶಂಕ್ರನಿಗೆ ಅತ್ತೆ ಮಗಳ (ರಂಜನಿ ರಾಘವನ್​) ಕಂಡರೆ ಇಷ್ಟ. ಆದರೆ, ದುಡ್ಡೇ ಶಂಕ್ರನಿಗೆ ವಿಲನ್​. ಎಲ್ಲರೂ ಬಂದು ಬಂದು ಶಂಕ್ರನ ಬಳಿ ಹಣ ಕೇಳ್ತಾರೆ. ಒಂದು ದಿನ ಅವನ ಖಾತೆಯಲ್ಲಿರುವ ಹಣವೆಲ್ಲ ಕಾಣೆಯಾಗುತ್ತದೆ. ಇಲ್ಲಿಂದ ಶಂಕ್ರನ ಅಲೆದಾಟ ಶುರು. ಈ ಕೇಸ್​ನ ತೆಗೆದುಕೊಳ್ಳೋದು ವಕೀಲೆ ಪಾತ್ರ ಮಾಡಿರುವ ನಟಿ ಐಂದ್ರಿತಾ ರೇ. ಹೀಗೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾದ ಟ್ರೇಲರ್ ಮೂಡಿ ಬಂದಿದೆ. ಈ ಚಿತ್ರದಲ್ಲಿ ಉಮಾಶ್ರೀಯಂತಹ ಹಿರಿಯ ಕಲಾವಿದರೂ ನಟಿಸಿದ್ದಾರೆ.

ಉಪ್ಪಿ ಎಂಟರ್​ಟೇನರ್​ ಬ್ಯಾನರ್​ ಅಡಿಯಲ್ಲಿ ಸಿಲ್ಕ್​ ಮಂಜು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವಿನಾಯಕ್​ ಕೋಡ್ಸರ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪ್ರಜ್ವಲ್​ ಪೈ ಅವರು ಚಿತ್ರವನ್ನು ಸಹ ನಿರ್ಮಾಣ ಮಾಡುವುದರ ಜತೆಗೆ, ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ನಂದಕಿಶೋರ್​ ಎನ್​. ಛಾಯಾಗ್ರಹಣ, ರಾಹುಲ್​ ವಸಿಷ್ಟ ಸಂಕಲನ ಚಿತ್ರಕ್ಕೆ ಇದೆ. ಲಹರಿ ಮ್ಯೂಸಿಕ್​ ಯೂಟ್ಯೂಬ್​ ಚಾನೆಲ್​ನಲ್ಲಿ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.

ಈ ಮೊದಲು ಪೋಸ್ಟರ್​ ಮೂಲಕ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಈಗ ಚಿತ್ರದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. ಅಧಿಕೃತ ದಿನಾಂಕವನ್ನು ಚಿತ್ರತಂಡ ಇನ್ನಷ್ಟೇ ಘೋಷಣೆ ಮಾಡಬೇಕಿದೆ.

ಇದನ್ನೂ ಓದಿ: ದಿಗಂತ್​ ಖಾಸಗಿ ಜೀವನದ ಬಗ್ಗೆ ಜನ ಗೂಗಲ್​ನಲ್ಲಿ ಹುಡುಕಿದ ಪ್ರಶ್ನೆಗಳಿಗೆ ಅವರೇ ಕೊಟ್ರು ನೇರ ಉತ್ತರ

ಭುವಿ ಸೀರೆ ಬಗ್ಗೆ ಅನೇಕರಿಗೆ ಇದೆ ತಕರಾರು; ರಂಜನಿ ರಾಘವನ್​ ಬಿಚ್ಚಿಟ್ಟ ಅಚ್ಚರಿ ಮಾಹಿತಿ

Published On - 5:11 pm, Tue, 15 March 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ