AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸರ್ಜಾ ಹುಟ್ಟುಹಬ್ಬಕ್ಕೆ ಬರ್ತಿದೆ ಕ್ಷತ್ರಿಯ ಚಿತ್ರದ ಟೀಸರ್

ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ.ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರಕ್ಕೆ ಈಗಾಗಲೇ ಶೇ. 90ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಈ ತಿಂಗಳ ಅಂತ್ಯದಲ್ಲಿ ಕೊನೆಯ ಹಂತದ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ನಟ ಚಿರು ಸರ್ಜಾ ಅವರು ಈ […]

ಚಿರಂಜೀವಿ ಸರ್ಜಾ ಹುಟ್ಟುಹಬ್ಬಕ್ಕೆ ಬರ್ತಿದೆ ಕ್ಷತ್ರಿಯ ಚಿತ್ರದ ಟೀಸರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 12, 2020 | 2:51 PM

Share

ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ.ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರಕ್ಕೆ ಈಗಾಗಲೇ ಶೇ. 90ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಈ ತಿಂಗಳ ಅಂತ್ಯದಲ್ಲಿ ಕೊನೆಯ ಹಂತದ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ.

ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ನಟ ಚಿರು ಸರ್ಜಾ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದರು. ಚಿತ್ರದ ಮೊದಲಾರ್ಧದಲ್ಲಿ ಸೆಂಟಿಮೆಂಟ್ ಕಥಾವಸ್ತುವಿದ್ದರೆ, ದ್ವಿತೀಯಾರ್ಧ ಪಕ್ಕಾ ಕಮರ್ಷಿಯಲ್ ಅಂಶಗಳನ್ನೊಳಗೊಂಡಿದೆ. ಕನ್ನಡ ಚಿತ್ರರಂಗದ ಸಾಕಷ್ಟು ನಿರ್ದೇಶಕರ ಜೊತೆ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನಿಲ್ ಮಂಡ್ಯ ಕ್ಷತ್ರಿಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಪಿ.ವಾಸು, ದಿನಕರ ತೂಗುದೀಪ, ತರುಣ್ ಸುಧೀರ್, ಮುಂಗಾರು ಮಳೆ ಕೃಷ್ಣ ಮತ್ತು ಸಂತೋಷ್ ಅನಂದರಾಮ್ ಅವರ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಮತ್ತು ರಾಜಕುಮಾರ ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿದ್ದ ಅನಿಲ್ ಮಂಡ್ಯ ಕಳೆದ ಎರಡು ದಶಕಗಳಲ್ಲಿ ಸಾಕಷ್ಟು ನಟರ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವವರು.

ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ಚಿರಂಜೀವಿ ಸರ್ಜಾ, ಸಂಜನಾ ಆನಂದ್, ಸುಧಾರಾಣಿ, ದೇವರಾಜ್, ಅಬ್ರಾರ್ ಜಾಹೂರ್‍ಧಾರ್, ಶ್ರೀನಾಥ್, ಸಾಧು ಕೋಕಿಲ, ಅಚ್ಯುತ್‍ಕುಮಾರ್, ವಿಶಾಲ್ ಹೆಗ್ಡೆ, ಮೋಹನ್, ಅಶ್ವಿನಿಗೌಡ, ಭಜರಂಗಿ ಚೇತನ್, ಹೊನ್ನವಳ್ಳಿ ಕೃಷ್ಣ, ಗಿರೀಶ್, ಶಾಲಿನಿ, ಸ್ವಪ್ನರಾಜಾ, ಆರತಿ ಕುಲಕರ್ಣಿ, ವಾಣಿಶ್ರೀ, ಸುಂದರ್, ನದಾಫ್, ಶ್ರೀಕಾಂತ್, ಆನಂದ್, ಮೈಸೂರು ಬಾಲ, ಮುಂತಾದವರು ನಟಿಸಿದ್ದಾರೆ.

ಈ ಚಿತ್ರಕ್ಕೆ ಭರ್ಜರಿ ಚೇತನ್ ಕುಮಾರ್ ಅವರು ಸಂಭಾಷಣೆ ರಚಿಸುತ್ತಿದ್ದಾರೆ. ರವಿ ವಿ. ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಧರ್ಮವಿಶ್ ಅವರ ಸಂಗೀತ ಸಂಯೋಜನೆಯ 5 ಹಾಡುಗಳು ಈ ಚಿತ್ರದಲ್ಲಿವೆ. ಕೆ.ರವಿವರ್ಮ ಅವರ ಸಾಹಸ ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಜನ್ ಅವರ ಎಫೆಕ್ಟ್ ಈ ಸಿನಿಮಾದಲ್ಲಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!