ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

Rocking Star Yash: ಯಶ್, ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕರ ಪುತ್ರ ಎಂಬ ಒಕ್ಕಣೆಯೊಂದಿಗೆ ಆರಂಭಗೊಂಡಿರುವ ಈ ಪತ್ರವು ಯಾವುದೇ ಅಧಿಕೃತ ಮುದ್ರೆಯನ್ನಾಗಲೀ, ಸಹಿಯನ್ನಾಗಲೀ, ದಿನಾಂಕವನ್ನಾಗಲೀ ಹೊಂದಿಲ್ಲ. ಇದನ್ನು ಯಶ್ ಅವರಿಗೆ ರವಾನೆ ಮಾಡಿದ್ದಾರೋ, ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿಲ್ಲ.

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು
ತಂದೆಯೊಂದಿಗೆ ನಟ ಯಶ್​
Follow us
| Updated By: Digi Tech Desk

Updated on:Apr 14, 2021 | 12:05 PM

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟ ತಾರ್ಕಿಕ ಅಂತ್ಯ ಕಾಣದೇ ಮುಷ್ಕರ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆಯಲ್ಲಿ ಸಾರಿಗೆ ನೌಕರರು ಸ್ಯಾಂಡಲ್​ವುಡ್​ನ ಬಹುಬೇಡಿಕೆ ನಟ, ರಾಕಿಂಗ್​ ಸ್ಟಾರ್ ಅವರಿಗೆ ತಮ್ಮ ಮುಷ್ಕರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿರುವ ಪತ್ರವೊಂದು ಹರಿದಾಡಲಾರಂಭಿಸಿದೆ. ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಹೆಸರಿನಲ್ಲಿ ಪತ್ರ ಬರೆಯಲಾಗಿದ್ದು, ನಿಮ್ಮ ತಂದೆಯವರೂ ಬಿಎಂಟಿಸಿ ನಿವೃತ್ತ ಚಾಲಕರು ಹೀಗಾಗಿ ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಲಾಗಿದೆ.

ಯಶ್, ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕರ ಪುತ್ರ ಎಂಬ ಒಕ್ಕಣೆಯೊಂದಿಗೆ ಆರಂಭಗೊಂಡಿರುವ ಈ ಪತ್ರವು ಯಾವುದೇ ಅಧಿಕೃತ ಮುದ್ರೆಯನ್ನಾಗಲೀ, ಸಹಿಯನ್ನಾಗಲೀ, ದಿನಾಂಕವನ್ನಾಗಲೀ ಹೊಂದಿಲ್ಲ. ಇದನ್ನು ಯಶ್ ಅವರಿಗೆ ರವಾನೆ ಮಾಡಿದ್ದಾರೋ, ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿಲ್ಲ. ಆದರೆ, ಯಶ್ ಅವರ ತಂದೆ ಸಾರಿಗೆ ನೌಕರರಾಗಿದ್ದರು ಎಂಬ ವಿಷಯವನ್ನಿಟ್ಟುಕೊಂಡು ನಿಮ್ಮ ತಂದೆ ಅವರ ಅನುಭವ, ನೋವನ್ನು ನಿಮ್ಮ ಜತೆ ಹಂಚಿಕೊಂಡಿರಬಹುದು. ನೀವು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿದ್ದೀರಿ. ಈಗ ನಮಗೆ ಬೆಂಬಲಿಸಿ ಎಂಬ ಬೇಡಿಕೆಯನ್ನು ಸಲ್ಲಿಸಲಾಗಿದೆ.

YASH

ನಟ ಯಶ್​ ಮತ್ತು ಅವರಿಗೆ ಬರೆದಿರುವ ಪತ್ರ

ಸದ್ಯ ಈ ಪತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯಿಸುತ್ತಾರಾ? ನೌಕರರ ಮನವಿಗೆ ಸ್ಪಂದಿಸಿ ಮುಷ್ಕರಕ್ಕೆ ಮನವಿ ನೀಡುತ್ತಾರಾ? ಆ ಮೂಲಕ ಎಂಟನೇ ದಿನಕ್ಕೆ ಕಾಲಿಟ್ಟಿರುವ ಸಾರಿಗೆ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆಯಾ? ಎಂಬೆಲ್ಲಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಆರನೇ ವೇತನ ಆಯೋಗದ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಎಷ್ಟೇ ಬಿಗಿಪಟ್ಟು ಹಿಡಿದರೂ ಸರ್ಕಾರ ಮಾತ್ರ ಕಟ್ಟುನಿಟ್ಟಾಗಿ ಅದು ಸಾಧ್ಯವೇ ಇಲ್ಲ ಎಂದು ತಿಳಿಸಿದೆ.

ಆದರೆ, ಇಟ್ಟ ಹೆಜ್ಜೆಯಿಂದ ಹಿಂದೆ ಸರಿಯಲು ಒಪ್ಪದ ನೌಕರರು ಬೇಡಿಕೆ ಈಡೇರುವ ತನಕವೂ ಮುಷ್ಕರ ಮಾಡುವುದಾಗಿ ಎಚ್ಚರಿಸಿದ್ದಾರೆ. ಏತನ್ಮಧ್ಯೆ ರಾಜ್ಯದ ವಿವಿಧ ಸಾರಿಗೆ ವಿಭಾಗಗಳಲ್ಲಿ ಕೆಲ ನೌಕರರು ಕೆಲಸಕ್ಕೆ ಹಾಜರಾಗಿರುವರಾದರೂ ಬೆರಳೆಣಿಕೆ ಸಂಖ್ಯೆಯಷ್ಟು ಬಸ್​ಗಳು ಮಾತ್ರ ಸಂಚರಿಸುತ್ತಿವೆ.

ಇದನ್ನೂ ಓದಿ: ಎಂಟನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಇಂದು ಅಂಬೇಡ್ಕರ್​ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೇಡಿಕೆ ಈಡೇರಿಸಲು ಆಗ್ರಹ 

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

(A Letter by KSRTC BMTC Employees requesting Rocking star Yash to support transport strike goes Viral)

Published On - 11:34 am, Wed, 14 April 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ