AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

Rocking Star Yash: ಯಶ್, ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕರ ಪುತ್ರ ಎಂಬ ಒಕ್ಕಣೆಯೊಂದಿಗೆ ಆರಂಭಗೊಂಡಿರುವ ಈ ಪತ್ರವು ಯಾವುದೇ ಅಧಿಕೃತ ಮುದ್ರೆಯನ್ನಾಗಲೀ, ಸಹಿಯನ್ನಾಗಲೀ, ದಿನಾಂಕವನ್ನಾಗಲೀ ಹೊಂದಿಲ್ಲ. ಇದನ್ನು ಯಶ್ ಅವರಿಗೆ ರವಾನೆ ಮಾಡಿದ್ದಾರೋ, ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿಲ್ಲ.

ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು
ತಂದೆಯೊಂದಿಗೆ ನಟ ಯಶ್​
Skanda
| Updated By: Digi Tech Desk|

Updated on:Apr 14, 2021 | 12:05 PM

Share

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟ ತಾರ್ಕಿಕ ಅಂತ್ಯ ಕಾಣದೇ ಮುಷ್ಕರ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆಯಲ್ಲಿ ಸಾರಿಗೆ ನೌಕರರು ಸ್ಯಾಂಡಲ್​ವುಡ್​ನ ಬಹುಬೇಡಿಕೆ ನಟ, ರಾಕಿಂಗ್​ ಸ್ಟಾರ್ ಅವರಿಗೆ ತಮ್ಮ ಮುಷ್ಕರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿರುವ ಪತ್ರವೊಂದು ಹರಿದಾಡಲಾರಂಭಿಸಿದೆ. ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಹೆಸರಿನಲ್ಲಿ ಪತ್ರ ಬರೆಯಲಾಗಿದ್ದು, ನಿಮ್ಮ ತಂದೆಯವರೂ ಬಿಎಂಟಿಸಿ ನಿವೃತ್ತ ಚಾಲಕರು ಹೀಗಾಗಿ ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಲಾಗಿದೆ.

ಯಶ್, ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕರ ಪುತ್ರ ಎಂಬ ಒಕ್ಕಣೆಯೊಂದಿಗೆ ಆರಂಭಗೊಂಡಿರುವ ಈ ಪತ್ರವು ಯಾವುದೇ ಅಧಿಕೃತ ಮುದ್ರೆಯನ್ನಾಗಲೀ, ಸಹಿಯನ್ನಾಗಲೀ, ದಿನಾಂಕವನ್ನಾಗಲೀ ಹೊಂದಿಲ್ಲ. ಇದನ್ನು ಯಶ್ ಅವರಿಗೆ ರವಾನೆ ಮಾಡಿದ್ದಾರೋ, ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿಲ್ಲ. ಆದರೆ, ಯಶ್ ಅವರ ತಂದೆ ಸಾರಿಗೆ ನೌಕರರಾಗಿದ್ದರು ಎಂಬ ವಿಷಯವನ್ನಿಟ್ಟುಕೊಂಡು ನಿಮ್ಮ ತಂದೆ ಅವರ ಅನುಭವ, ನೋವನ್ನು ನಿಮ್ಮ ಜತೆ ಹಂಚಿಕೊಂಡಿರಬಹುದು. ನೀವು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿದ್ದೀರಿ. ಈಗ ನಮಗೆ ಬೆಂಬಲಿಸಿ ಎಂಬ ಬೇಡಿಕೆಯನ್ನು ಸಲ್ಲಿಸಲಾಗಿದೆ.

YASH

ನಟ ಯಶ್​ ಮತ್ತು ಅವರಿಗೆ ಬರೆದಿರುವ ಪತ್ರ

ಸದ್ಯ ಈ ಪತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯಿಸುತ್ತಾರಾ? ನೌಕರರ ಮನವಿಗೆ ಸ್ಪಂದಿಸಿ ಮುಷ್ಕರಕ್ಕೆ ಮನವಿ ನೀಡುತ್ತಾರಾ? ಆ ಮೂಲಕ ಎಂಟನೇ ದಿನಕ್ಕೆ ಕಾಲಿಟ್ಟಿರುವ ಸಾರಿಗೆ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆಯಾ? ಎಂಬೆಲ್ಲಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಆರನೇ ವೇತನ ಆಯೋಗದ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಎಷ್ಟೇ ಬಿಗಿಪಟ್ಟು ಹಿಡಿದರೂ ಸರ್ಕಾರ ಮಾತ್ರ ಕಟ್ಟುನಿಟ್ಟಾಗಿ ಅದು ಸಾಧ್ಯವೇ ಇಲ್ಲ ಎಂದು ತಿಳಿಸಿದೆ.

ಆದರೆ, ಇಟ್ಟ ಹೆಜ್ಜೆಯಿಂದ ಹಿಂದೆ ಸರಿಯಲು ಒಪ್ಪದ ನೌಕರರು ಬೇಡಿಕೆ ಈಡೇರುವ ತನಕವೂ ಮುಷ್ಕರ ಮಾಡುವುದಾಗಿ ಎಚ್ಚರಿಸಿದ್ದಾರೆ. ಏತನ್ಮಧ್ಯೆ ರಾಜ್ಯದ ವಿವಿಧ ಸಾರಿಗೆ ವಿಭಾಗಗಳಲ್ಲಿ ಕೆಲ ನೌಕರರು ಕೆಲಸಕ್ಕೆ ಹಾಜರಾಗಿರುವರಾದರೂ ಬೆರಳೆಣಿಕೆ ಸಂಖ್ಯೆಯಷ್ಟು ಬಸ್​ಗಳು ಮಾತ್ರ ಸಂಚರಿಸುತ್ತಿವೆ.

ಇದನ್ನೂ ಓದಿ: ಎಂಟನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಇಂದು ಅಂಬೇಡ್ಕರ್​ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೇಡಿಕೆ ಈಡೇರಿಸಲು ಆಗ್ರಹ 

Yash: ಹೀರೋಯಿಸಂ ಬದಿಗಿಟ್ಟು ರೈತನಾದ ಯಶ್​; ಫೋಟೋ ವೈರಲ್​

(A Letter by KSRTC BMTC Employees requesting Rocking star Yash to support transport strike goes Viral)

Published On - 11:34 am, Wed, 14 April 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ