AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಅದ್ದೂರಿಯಾಗಿ ರಿಲೀಸ್​ ಆಯ್ತು ‘ಕುದ್ರು’ ಹಾಡು; ಈ ಚಿತ್ರದಲ್ಲಿದೆ ಕೋಲ, ಕಂಬಳ, ಯಕ್ಷಗಾನ

‘ಕುದ್ರು’ ಸಿನಿಮಾದಲ್ಲಿ ದಕ್ಷಿಣ ಕನ್ನಡದ ಸುಂದರ ಲೊಕೇಷನ್​ಗಳನ್ನು ತೋರಿಸಲಾಗುತ್ತಿದೆ. ಅಲ್ಲದೇ ಭೂತಕೋಲ, ಯಕ್ಷಗಾನ, ಕಂಬಳ ಮುಂತಾದ ಕಲೆಗಳನ್ನು ನಿರ್ದೇಶಕ ಭಾಸ್ಕರ್ ನಾಯ್ಕ್ ಅವರು ಪರಿಚಯ ಮಾಡಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ದುಬೈಯಲ್ಲಿ ಬಹಳ ಗ್ರ್ಯಾಂಡ್​ ಆಗಿ ಬಿಡುಗಡೆ ಮಾಡಲಾಯಿತು. ಹರ್ಷಿತ್ ಶೆಟ್ಟಿ, ಡೈನಾ ಡಿಸೋಜ, ಪ್ರಿಯಾ ಹೆಗ್ಡೆ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ದುಬೈನಲ್ಲಿ ಅದ್ದೂರಿಯಾಗಿ ರಿಲೀಸ್​ ಆಯ್ತು ‘ಕುದ್ರು’ ಹಾಡು; ಈ ಚಿತ್ರದಲ್ಲಿದೆ ಕೋಲ, ಕಂಬಳ, ಯಕ್ಷಗಾನ
‘ಆಟಿದೊಂಜಿ ದಿನ’ ಸಮಾರಂಭದಲ್ಲಿ ‘ಕುದ್ರು’ ಸಾಂಗ್ಸ್​ ಬಿಡುಗಡೆ
ಮದನ್​ ಕುಮಾರ್​
|

Updated on: Aug 28, 2023 | 10:30 PM

Share

ಕರ್ನಾಟಕದ ಸಿನಿಮಾಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಪ್ರಮೋಷನ್​ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಚಿತ್ರತಂಡಗಳು ಬೇರೆ ಬೇರೆ ಪ್ರಯತ್ನ ನಡೆಸಿವೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ‘ಕುದ್ರು’ ಸಿನಿಮಾ (Kudru Movie). ಕೆಲವೇ ದಿನಗಳ ಹಿಂದೆ ದುಬೈಯಲ್ಲಿ ಅದ್ದೂರಿಯಾಗಿ ಆಟಿದೊಂಜಿ ದಿನ (Aatidonji Dina) ಸಮಾರಂಭ ನಡೆಯಿತು. ಈ ವೇಳೆ ‘ಕುದ್ರು’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಈ ಸಿನಿಮಾದ ನಿರ್ದೇಶಕ, ಕಥೆಗಾರ ಮತ್ತು ನಿರ್ಮಾಪಕರಾದ ಭಾಸ್ಕರ್ ನಾಯ್ಕ್, ಚಿತ್ರದ ಹೀರೋ ಹರ್ಷಿತ್ ಶೆಟ್ಟಿ, ನಾಯಕಿರಾದ ಡೈನಾ ಡಿಸೋಜ, ಪ್ರಿಯಾ ಹೆಗ್ಡೆ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಮಾರಂಭಕ್ಕೆ ಬಂದ ಅತಿಥಿಗಳನ್ನು ಶ್ರೀಮತಿ ಸಂಧ್ಯಾ ಪ್ರಸಾದ್ ಅವರು ಪುಷ್ಪಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ದಕ್ಷಿಣ ಕನ್ನಡದ ಸಂಸ್ಕೃತಿ ಬಹಳ ವಿಶಿಷ್ಠವಾದದ್ದು. ಅದನ್ನು ಎತ್ತಿ ಹಿಡಿಯುವ ಆಚರಣೆಯೇ ಆಟಿದೊಂಜಿ ದಿನ. ಯುಎಇನಲ್ಲಿ ದಕ್ಷಿಣ ಕನ್ನಡದ ಸಂಸ್ಕೃತಿಯನ್ನು ಪರಿಚಯಿಸುವ ಈ ಹಬ್ಬದಾಚರಣೆ ಎಲ್ಲರ ಮನಸ್ಸು ಗೆದ್ದಿದೆ. ಇದೇ ಸಮಾರಂಭದಲ್ಲಿ ‘ಕುದ್ರು’ ಚಿತ್ರದ ಶೀರ್ಷಿಕೆ ಗೀತೆ ಮತ್ತು ಫೇರ್ವೆಲ್ ಪಾರ್ಟಿ ಹಾಡನ್ನು ರಿಲೀಸ್​ ಮಾಡಿರುವುದು ವಿಶೇಷ. ನಮ್ರಿತಾ ಮಲ್ಲ ಅವರು ಈ ಹಾಡುಗಳಿಗೆ ಡ್ಯಾನ್ಸ್​ ಮಾಡಿದರು.

ಇದನ್ನೂ ಓದಿ: ದೀವಟಿಗೆಯ ಬೆಳಕಿನಲ್ಲಿ ಭೂತಕೋಲ ಆಚರಣೆ, ಕುಣಿದು ಕುಪ್ಪಳಿಸಿ ಭಕ್ತರನ್ನು ಹರಸಿದ ದೈವಗಳು

ವಿಶೇಷ ಏನೆಂದರೆ, ‘ಕುದ್ರು’ ಸಿನಿಮಾದಲ್ಲಿ ದಕ್ಷಿಣ ಕನ್ನಡದ ಸುಂದರ ಲೊಕೇಷನ್​ಗಳನ್ನು ತೋರಿಸಲಾಗುತ್ತಿದೆ. ಅಲ್ಲದೇ ಭೂತಕೋಲ, ಯಕ್ಷಗಾನ, ಕಂಬಳ ಮುಂತಾದ ಕಲೆಗಳನ್ನು ನಿರ್ದೇಶಕ ಭಾಸ್ಕರ್ ನಾಯ್ಕ್ ಅವರು ಪರಿಚಯ ಮಾಡಿಸಿದ್ದಾರೆ. ಪ್ರವೀಣ್ ಶೆಟ್ಟಿ, ಡಾ. ಡೇವಿಡ್ ಫ್ರಾಂಕ್ ಫರ್ನಾಂಡಿಸ್, ಜೋಸೆಫ್ ಮತಾಯಸ್ ಅವರು ‘ಕುದ್ರು’ ಸಿನಿಮಾದ ಗೀತೆಗಳನ್ನು ರಿಲೀಸ್​ ಮಾಡಿದರು. ಸುಹೈಲ್ ಕುದ್ರೋಳಿ, ಗುರೂಜಿ ಹರೀಶ್, ಶೋಧನ್ ಪ್ರಸಾದ್ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ‘ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತೆ ಅಂತ ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ’: ನಟ ಚೇತನ್​ ತಕರಾರು

‘ಕುದ್ರು’ ಸಿನಿಮಾ ಬಗ್ಗೆ ನಿರ್ದೇಶಕ ಭಾಸ್ಕರ್ ನಾಯ್ಕ್ ಮಾಹಿತಿ ನೀಡಿದ್ದಾರೆ. ‘ಇದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಒಂದು ಸಿನಿಮಾ. ಆಯಿಲ್ ರಿಗ್​ನಲ್ಲಿ ಚಿತ್ರೀಕರಣ ಮಾಡಿದ ಭಾರತದ ಮೊದಲ ಸಿನಿಮಾ ನಮ್ಮದು’ ಎಂದು ಹೇಳುವ ಮೂಲಕ UAE ಪ್ರೇಕ್ಷಕರಲ್ಲೂ ಸಿನಿಮಾ ಬಗ್ಗೆ ಅವರು ಕುತೂಹಲ ಮೂಡಿಸಿದ್ದಾರೆ. ಸಿನಿಮಾದಲ್ಲಿ ನಟಿಸಿರುವ ಪ್ರಿಯ ಹೆಗ್ಡೆ, ಹರ್ಷಿತ್ ಶೆಟ್ಟಿ ಮತ್ತು ಡೈನಾ ಡಿಸೋಜಾ ಅವರು ತಮ್ಮ ಪಾತ್ರದ ಮಾಹಿತಿ ನೀಡಿದರು. ಅಲ್ಲದೇ ಸಿನಿಮಾ ಕರಿತು ಅನುಭವ ತಿಳಿಸಿದರು. ರೊನಾಲ್ಡ್ ಒಲಿವೆರಾ ಅವರು ಈ ಸಮಾರಂಭದ ನಿರ್ವಹಣೆ ಮಾಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ